ಆ್ಯಪ್ನಗರ

ಬೈಕ್ ಕಳ್ಳತನ ಪ್ರಶ್ನಿಸಿದ್ದಕ್ಕೆ ತಲೆ ಮೇಲೆ ಕಲ್ಲು ಹಾಕಿ ಹತ್ಯೆ

ಅಪರಾಧಿ ಕೃತ್ಯವನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯನ್ನೇ ಕೊಲೆಗೈಯ್ಯಲಾಗಿರುವ ಘಟನೆ ಕನಕಪುರದಲ್ಲಿ ನಡೆದಿದೆ.

Vijaya Karnataka Web 14 Oct 2019, 12:31 pm
ರಾಮನಗರ: ಮಧ್ಯ ರಾತ್ರಿ ಬೈಕ್ ಕದಿಯಲು ಬಂದಿದ್ದ ಕಳ್ಳರನ್ನು ಪ್ರಶ್ನಿಸಿದ ವ್ಯಕ್ತಿಯ ತಲೆ ಮೇಲೆ ಕಲ್ಲುಹಾಕಿ ಕೊಲೆ ಮಾಡಿರುವ ಘಟನೆ ಕನಕಪುರದಲ್ಲಿ ನಡೆದಿದೆ.
Vijaya Karnataka Web Police Hat


ಕೊಲೆಯಾದ ವ್ಯಕ್ತಿಯನ್ನು ಚಾಮಯ್ಯ (50) ಎಂದು ಗುರುತಿಸಲಾಗಿದೆ.

ಮಂಗಳೂರಿನಲ್ಲಿ ಪ್ರೇಮಿಗಳ ಆತ್ಮಹತ್ಯೆ, ಅನುಮಾನಾಸ್ಪದ ಶವ ಪತ್ತೆ, ವ್ಯಕ್ತಿಯ ಹತ್ಯೆ

ಕನಕಪುರ ನಗರದಲ್ಲಿ ಘೋರಿಬೀದಿಯ ಸ್ಮಶಾನ ಕಾಯುತ್ತಿದ್ದ ಈತನ ಮೇಲೆ ಭಾನುವಾರ ಮಧ್ಯ ರಾತ್ರಿ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ.

ಶ್ವಾನದಳ ಸ್ಥಳದಲ್ಲಿದ್ದು, ಎಲ್ಲ ಆಯಾಮಗಳಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಾಲ್ವರು ಮುಸುಕುಧಾರಿಗಳು ಕೃತ್ಯದಲ್ಲಿ ಪಾಲ್ಗೊಂಡಿದ್ದರು, ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ