ಆ್ಯಪ್ನಗರ

ವಿಧಾನ ಪರಿಷತ್‌ ಚುನಾವಣೆ; ಬಿಜೆಪಿಗೆ ಬೆಂಬಲ ನೀಡುವ ಸುಳಿವು ನೀಡಿದ ಎಚ್‌ಡಿ ಕುಮಾರಸ್ವಾಮಿ

ಯಡಿಯೂರಪ್ಪ ಅವರು ಈಗಾಗಲೇ ಬಹಿರಂಗವಾಗಿ ಬೆಂಬಲ ಕೇಳಿದ್ದಾರೆ. ಕಾಂಗ್ರೆಸ್ ನಾಯಕರು ನಮಗೆ ಜೆಡಿಎಸ್ ಬೆಂಬಲ ಬೇಡ ಅಂತಾ ಹೇಳಿದ್ದಾರೆ. ಕರೆಯದೆ ಇರುವ ಮನೆಯವರ ಮನೆ ಬಾಗಿಲಿಗೆ ನಾವು ಹೋಗಲು ಆಗುತ್ತಾ? ಹಾಗಾಗಿ ಸದ್ಯದಲ್ಲೇ ಬೆಂಬಲದ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದರು.

Vijaya Karnataka Web 1 Dec 2021, 1:55 pm
ರಾಮನಗರ: ಸದ್ಯದಲ್ಲೇ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸುಳಿವು ನೀಡಿದ್ದಾರೆ.
Vijaya Karnataka Web Karnataka: Under pressure, JD(S) blames Siddaramaiah for BJPs B Team tag


ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದ ಸುದ್ದಿಗಾರರ ಪ್ರಶ್ನೆಗೆ ಬಿಡದಿಯಲ್ಲಿ ಉತ್ತರಿಸಿದ ಅವರು, ಯಡಿಯೂರಪ್ಪ ಅವರು ಈಗಾಗಲೇ ಬಹಿರಂಗವಾಗಿ ಬೆಂಬಲ ಕೇಳಿದ್ದಾರೆ. ಕಾಂಗ್ರೆಸ್ ನಾಯಕರು ನಮಗೆ ಜೆಡಿಎಸ್ ಬೆಂಬಲ ಬೇಡ ಅಂತಾ ಹೇಳಿದ್ದಾರೆ. ಕರೆಯದೆ ಇರುವ ಮನೆಯವರ ಮನೆ ಬಾಗಿಲಿಗೆ ನಾವು ಹೋಗಲು ಆಗುತ್ತಾ? ಹಾಗಾಗಿ ಸದ್ಯದಲ್ಲೇ ಬೆಂಬಲದ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.
ಮೋದಿ ಜತೆ ಆತ್ಮೀಯ ಮಾತುಕತೆ ನಡೀತು, ನನ್ನ ಆರೋಗ್ಯ, ಮಂಡಿ ನೋವು ಬಗ್ಗೆ ವಿಚಾರಿಸಿದರು: ದೇವೇಗೌಡ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವೇಗೌಡರ ಮೇಲೆ ಅಪಾರ ವಿಶ್ವಾಸ ಹಾಗೂ ಗೌರವ ಇದೆ ಎಂದ ಎಚ್‌ಡಿ ಕುಮಾರಸ್ವಾಮಿ, ಹಾಸನದ ಐಐಟಿ ಸ್ಥಾಪನೆ ವಿಚಾರದಲ್ಲಿ ದೇವೇಗೌಡ್ರು ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಬಿಜೆಪಿ ಜೊತೆ ಮೈತ್ರಿ ಬಗ್ಗೆ ಮೋದಿ ಅವರ ಜತೆಗೆ ದೇವೇಗೌಡ್ರು ಮಾತುಕತೆ ನಡೆಸಿರುವ ಬಗ್ಗೆ ಮಾಹಿತಿ ಇಲ್ಲ. ದೇವೇಗೌಡ್ರು ದೆಹಲಿಯಿಂದ ಬಂದ ನಂತರ ಮೈತ್ರಿ ಬಗ್ಗೆ ಚರ್ಚೆ ನಡೆದಿರುವ ಬಗ್ಗೆ ಮಾತುಕತೆ ಮಾಡಲಿದ್ದೇನೆ ಎಂದು ಹೇಳಿದರು.
ಜೆಡಿಎಸ್‌ಗೆ ಬೆಂಬಲ ನೀಡಿ ಎಂಬ ಬಿಎಸ್‌ವೈ ಮನವಿಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೀವಿ: ಎಚ್‌ಡಿಕೆ
ಹೆಚ್.ಡಿ.ಕುಮಾರಸ್ವಾಮಿ ಅವರ ಆಪ್ತ ಲೋಕಾಯುಕ್ತ ಡಿವೈಎಸ್ಪಿ ಪುರಷೊತ್ತಮ್ ಬಗ್ಗೆ ದೂರು ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೂರು ಬಗ್ಗೆ ನನಗೆ ಗೊತ್ತಿಲ್ಲ ಅವರು ಬಳ್ಳಾರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಾವ ವಿಚಾರದಲ್ಲಿ ಅವರ ಹೆಸರು ಕೇಳಿ ಬರುತ್ತಿದೆ ಅಂತಾ ನನಗೆ ಗೊತ್ತಿಲ್ಲ. ನಾನಂತೂ ಅಧಿಕಾರಿಗಳನ್ನ ಬಳಸಿಕೊಂಡು ಚುನಾವಣೆ ನಡೆಸಿಲ್ಲ. ಕಾರ್ಯಕರ್ತರ ವಿಶ್ವಾಸದಿಂದ ಚುನಾವಣೆ ನಡೆಸಿಕೊಂಡು ಬಂದಿದ್ದೇನೆ. ಕಾರ್ಯಕರ್ತರು ಚುನಾವಣೆಯಲ್ಲಿ ಮತ ಹಾಕಿಸುತ್ತಾರೆ. ಅಧಿಕಾರಿಗಳು ಮತ ಹಾಕಿಸಲು ಸಾಧ್ಯವಾಗುತ್ತಾ? ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದೂರು ಕೊಟ್ಟಿದ್ದಾರೊ ನನಗೆ ಗೊತ್ತಿಲ್ಲ, ತನಿಖೆಯ ನಂತರ ಸತ್ಯಾಂಶ ಹೊರ ಬರಬೇಕಿದೆ. ಪೋನ್ ಮಾಡಿ ಬೆದರಿಕೆ ಹಾಕಿದ್ರೆ ತನಿಖೆಯಲ್ಲಿ ತಿಳಿದು ಬರಬೇಕಿದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ