ಆ್ಯಪ್ನಗರ

ಯಾರನ್ನೋ ಮಂತ್ರಿ ಮಾಡಬೇಡಿ ಎನ್ನುವ ಕೀಳು ಮಟ್ಟಕ್ಕೆ ಇಳಿದಿಲ್ಲ: ಯೋಗೇಶ್ವರ್‌ ವಿರುದ್ಧ ಕುಮಾರಸ್ವಾಮಿ ಕಿಡಿ

ಸಚಿವ ಸಂಪುಟ ವಿಸ್ತರಣೆಯ ಚರ್ಚೆ ನಡೆಯುತ್ತಿರುವಾಗ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಿಪಿ ಯೋಗೇಶ್ವರ್‌ ವಿರುದ್ಧ ಕಿಡಿಕಾರಿದ್ದಾರೆ. ಬಡವರ ಭೂಮಿ ಕಬಳಿಸಲು ಹೋದವರು ಮಂತ್ರಿಯಾಗಲು ಹೊರಟಿದ್ದಾರೆ. ಯಾರನ್ನೋ ಸಚಿವರನ್ನಾಗಿ ಮಾಡುತ್ತಾರೆಂದು ನಾನು ಹೆದರುತ್ತೇನಾ ಎಂದು ವಾಗ್ದಾಳಿ ನಡೆಸಿದ್ದಾರೆ.

Vijaya Karnataka Web 27 Nov 2020, 7:14 pm
ಚನ್ನಪಟ್ಟಣ (ರಾಮನಗರ): ಬಡವರ ಭೂಮಿ ಕಬಳಿಸಲು ಹೋದವರು ಮಂತ್ರಿಯಾಗಲು ಹೊರಟಿದ್ದಾರೆ. ಯಾರನ್ನೋ ಸಚಿವರನ್ನಾಗಿ ಮಾಡುತ್ತಾರೆಂದು ನಾನು ಹೆದರುತ್ತೇನಾ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪರೋಕ್ಷವಾಗಿ ಸಿಪಿ‌ ಯೋಗೇಶ್ವರ್‌ ವಿರುದ್ಧ ಕಿಡಿಕಾರಿದರು.
Vijaya Karnataka Web HD kumaraswamy


ಚನ್ನಪಟ್ಟಣದಲ್ಲಿ ಶುಕ್ರವಾರ ಮಾತನಾಡಿದ ಅವರು, ನಮ್ಮ ಕುಟುಂಬದಲ್ಲಿ ಅಂತಹವರನ್ನು ಬಹಳ ನೋಡಿದ್ದೇವೆ. ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇನೆ ಅಷ್ಟೇ, ಬೇರ‍್ಯಾವ ಕಾರಣಕ್ಕೂ ಅಲ್ಲ. 20 ಕೆರೆ ತುಂಬಿಸಿ ಭಗೀರಥ ಆದ್ರೂ, ನಾನು 128 ಕೆರೆ ತುಂಬಿಸಿದ್ದೇನೆ. ನಾನೀರುವವರೆಗೂ ಬಡವರಿಗೆ ಅನ್ಯಾಯವಾಗಲು ಬೀಡಲ್ಲ ಎಂದು ಹೇಳಿದರು.

ಯಡಿಯೂರಪ್ಪ ಅವರು ಇನ್ನು 4 ಜನರನ್ನು ಬೇಕಾದರೆ ಮಂತ್ರಿ ಮಾಡಲಿ ಹೆದರಿಸುವ ಶಕ್ತಿ ನನಗಿದೆ. ನಾನು ಯಾರನ್ನೋ ಮಂತ್ರಿ ಮಾಡಬೇಡಿ ಎನ್ನುವ ಕೀಳು ಮಟ್ಟಕ್ಕೆ ಇಳಿಯಲ್ಲ.
ಎಲ್ಲವೂ ಗೊತ್ತಿದೆ, ಬರಲಿ ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತೇನೆ ಎಂದು ಸಿ.ಪಿ.ಯೋಗೇಶ್ವರ್ ಹೆಸರು ಬಳಸದೇ ಮಾಜಿ ಸಿಎಂ ವಾಗ್ದಾಳಿ ನಡೆಸಿದರು.

ಜೆಡಿಎಸ್‌ಗೆ ಹೊಸ ಸವಾಲು: ಪಕ್ಷ ಸಂಘಟನೆಗೆ ರಾಮನಗರದಲ್ಲಿ ಬೀಡುಬಿಟ್ಟ ಹೆಚ್ಡಿಕೆ ಕುಟುಂಬ!

ಇನ್ನು, ಲಿಂಗಾಯಿತ ಸಮುದಾಯವನ್ನ ಒಬಿಸಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಲು ನಕಾರ ವ್ಯಕ್ತಪಡಿಸಿದ ಅವರು, ರಾಜಕೀಯವಾಗಿ ನಡೆಯುತ್ತಿರುವ ಈಗಿನ ಪ್ರಸಂಗಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಮೀಸಲಾತಿ ಹಾಗೂ ಪ್ರಾಧಿಕಾರ ರಚನೆ ಮಾಡುವುದು ಅವರವರ ಇಚ್ಛೆ. ಪ್ರತಿ ಕುಟುಂಬಕ್ಕೂ ವಸತಿ, ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಕಲ್ಪಿಸುವುದು ಸರ್ಕಾರದ ಕೆಲಸ ಎಂದು ಅಧಿಕಾರ ನಡೆಸುವವರಿಗೆ ನಾನೊಂದು ಸಲಹೆ ನೀಡುತ್ತೇನೆ ಎಂದು ಹೇಳಿದರು.

ಮಾಗಡಿಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ ರೌಂಡ್ಸ್;‌ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಅಡಿಗಲ್ಲು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ