ಆ್ಯಪ್ನಗರ

ಇಸ್ಪೀಟ್‌ ಜೂಜಾಟ: ಮೂವರ ಸೆರೆ

ಇಸ್ಪೀಟ್‌ ಅಡ್ಡೆಯೊಂದರ ಮೇಲೆ ದಾಳಿ ನಡೆಸಿದ ಹಾರೋಹಳ್ಳಿ ಠಾಣಾ ಪೊಲೀಸರು ಜೂಜಾಟವಾಡುತ್ತಿದ್ದ ಮೂವರನ್ನು ಬಂಧಿಸಿ ಪಣಕ್ಕಿಟ್ಟಿದ್ದ 7,100 ರೂ ನಗದು ವಶಪಡಿಸಿಕೊಂಡಿದ್ದಾರೆ...

Vijaya Karnataka 4 Jan 2019, 5:00 am
ಹಾರೋಹಳ್ಳಿ (ಕನಕಪುರ ತಾ.): ಇಸ್ಪೀಟ್‌ ಅಡ್ಡೆಯೊಂದರ ಮೇಲೆ ದಾಳಿ ನಡೆಸಿದ ಹಾರೋಹಳ್ಳಿ ಠಾಣಾ ಪೊಲೀಸರು ಜೂಜಾಟವಾಡುತ್ತಿದ್ದ ಮೂವರನ್ನು ಬಂಧಿಸಿ ಪಣಕ್ಕಿಟ್ಟಿದ್ದ 7,100 ರೂ. ನಗದು ವಶಪಡಿಸಿಕೊಂಡಿದ್ದಾರೆ.
Vijaya Karnataka Web gambling three captives
ಇಸ್ಪೀಟ್‌ ಜೂಜಾಟ: ಮೂವರ ಸೆರೆ


ಬೆಂಗಳೂರು ನಗರದ ಜಾವಿದ್‌ ಮತ್ತು ಅಸ್ಲಾಂ ಹಾಗೂ ಬಡೇಸಾಬರದೊಡ್ಡಿಯ ಅಪ್ಸರ್‌ಪಾಷಾ ಬಂಧಿತ ಆರೋಪಿಗಳು. ಬಡೇಸಾಬರದೊಡ್ಡಿ ಗ್ರಾಮದ ವಸತಿ ಪ್ರದೇಶದ ಸ್ಥಳವೊಂದರಲ್ಲಿ ಜೂಜಾಟ ನಡೆಸುತ್ತಿದ್ದರ ಬಗ್ಗೆ ನಿಖರ ಮಾಹಿತಿ ಕಲೆ ಹಾಕಿದ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ದುರ್ಗೇಗೌಡ ಗುರುವಾರ ಸಂಜೆ ದಿಢೀರ್‌ ಧಾಳಿ ನಡೆಸಿ ಆರು ಮಂದಿ ಆರೋಪಿಗಳಲ್ಲಿ ಮೂವರನ್ನು ಬಂಧಿಸಿದ್ದಾರೆ. ಉಳಿದಂತೆ ಮೂವರು ಪರಾರಿಯಾಗಿದ್ದಾರೆ.

ಪೊಲೀಸ್‌ ಸಿಬ್ಬಂದಿ ಬೋರೇಗೌಡ, ಸಂತೋಷ್‌ಕುಮಾರ್‌, ಮಣಿಕಂಠ ವಾಹನ ಚಾಲಕ ಮತ್ತಿತರ ಸಿಬ್ಬಂದಿ ದಾಳಿಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಹಾರೋಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ