ಆ್ಯಪ್ನಗರ

ಕಾಂಗ್ರೆಸ್, ಬಿಜೆಪಿ ಪಕ್ಷದವರಿಗೆ ಶಕ್ತಿ ಇಲ್ಲ; ಹಾಗಾಗಿ ಜೆಡಿಎಸ್‌ ಶಾಸಕರನ್ನು ಸೆಳೆಯುತ್ತಿದ್ದಾರೆ - ಎಚ್‌ಡಿಕೆ

ನಾನು ಯಾವತ್ತೂ ಯಾರ ಮನೆ ಬಾಗಿಲಿಗೂ ಹೋಗಿ 'ನಮ್ಮ ಪಕ್ಷಕ್ಕೆ ಬನ್ರಪ್ಪ' ಅಂತ ಯಾರನ್ನೂ ಕರೆದಿಲ್ಲ. ರಾಜ್ಯದ ಜನತೆಯ ಕಷ್ಟ ಸುಖಗಳಿಗೆ ಸ್ಪಂದನೆ ಮಾಡುವ ಯಾರಾದರೂ ನಮ್ಮ ಪಕ್ಷಕ್ಕೆ ಬರುವುದಿದ್ದರೆ ಸ್ವಾಗತ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Vijaya Karnataka 6 Jan 2021, 5:52 pm
ರಾಮನಗರ: ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದವರಿಗೆ ಶಕ್ತಿ ಇಲ್ಲ. ಹಾಗಾಗಿ ತಮ್ಮ ಶಕ್ತಿ ವೃದ್ಧಿ ಮಾಡಿಕೊಳ್ಳಲು ಜೆಡಿಎಸ್‌ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
Vijaya Karnataka Web HD Kumaraswamy


ರಾಮನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್ ಶಾಸಕರನ್ನ ಸೆಳೆಯುವ ಕೆಲಸ ಕಳೆದ ಎರಡು ವರ್ಷಗಳಿಂದಲೂ ನಡೆಯುತ್ತಲೇ ಇದೆ. ಈ ಹಿಂದೆ ದೇವೇಗೌಡರ ಕಾಲದಲ್ಲಿ ಕೂಡ ಶಾಸಕರ ರಾಜೀನಾಮೆ ಕೊಡಿಸುವ ಕೆಲಸ ನಡೆದಿತ್ತು. ಆದರೆ ಮತ್ತೆ ನಾವು ಗೆದ್ದು ಅಧಿಕಾರಕ್ಕೆ ಬಂದಿದ್ದೆವು ಎಂದರು.

ನಾನು ಯಾವತ್ತೂ ಯಾರ ಮನೆ ಬಾಗಿಲಿಗೂ ಹೋಗಿ ನಮ್ಮ ಪಕ್ಷಕ್ಕೆ ಬನ್ರಪ್ಪ ಅಂತ ಯಾರನ್ನೂ ಕರೆದಿಲ್ಲ. ರಾಜ್ಯದ ಜನತೆಯ ಕಷ್ಟ ಸುಖಗಳಿಗೆ ಸ್ಪಂದನೆ ಮಾಡುವ ಯಾರಾದರೂ ನಮ್ಮ ಪಕ್ಷಕ್ಕೆ ಬಂದರೆ, ನಾನು ಬರಮಾಡಿಕೊಳ್ಳುತ್ತೇನೆ ಎಂದು ಅವರು ತಿಳಿಸಿದರು.

ಪಕ್ಷ ಸಂಘಟನೆಗೆ ಸಜ್ಜಾದ ದಳಪತಿಗಳು, ಗುರುವಾರ ಪ್ರಮುಖರ ಸಭೆ
ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನ ಬೆಳೆಸುವ ನಿಟ್ಟಿನಲ್ಲಿ ರೂಪುರೇಷೆಗಳನ್ನ ಸಿದ್ದಪಡಿಸಲಾಗಿದೆ. ಸಂಕ್ರಾಂತಿ ಹಬ್ಬದ ದಿನದಂದು ಹೊಸ ರಾಜಕೀಯಕ್ಕೆ ಚಾಲನೆ ಕೊಡುತ್ತಿದ್ದೇನೆ ಎಂದು ಎಚ್‌ಡಿಕೆ ಹೇಳಿದರು.

ನಂತರ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು ಯಾರು ಬಿಟ್ಟು ಹೋದರೂ ಜೆಡಿಎಸ್‌ಗೆ ತೊಂದರೆಯಿಲ್ಲ. ನಾವು ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಆದರೆ ಕಾಂಗ್ರೆಸ್-ಬಿಜೆಪಿಯವರು ನಮ್ಮವರನ್ನ ಸೆಳೆಯುವ ಪ್ರಯತ್ನ ಮಾಡ್ತಿದ್ದಾರೆ. ಅದರಿಂದಲೇ ಗೊತ್ತಾಗುತ್ತದೆ ಜೆಡಿಎಸ್ ಪಕ್ಷದ ಶಕ್ತಿ ಎಂದು ಅಭಿಪ್ರಾಯಪಟ್ಟರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ