ಆ್ಯಪ್ನಗರ

ಮಾಜಿ ಸಿಎಂ ಎಚ್.ಡಿ.ಕೆ ಭೇಟಿ ವೇಳೆ ಕಣ್ಣೀರಿಟ್ಟ ಡಿಕೆಶಿ ತಾಯಿ ಗೌರಮ್ಮ

ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಅವರನ್ನು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಇಂದು ಭೇಟಿ ಮಾಡಿ ಸಾಂತ್ವಾನ ಹೇಳಿದರು.

Vijaya Karnataka Web 6 Sep 2019, 4:42 pm
ರಾಮನಗರ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಡಿಕೆ ಶಿವಕುಮಾರ್ ಅವರ ತಾಯಿಯನ್ನು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಇಂದು ಭೇಟಿಯಾಗಿ ಸಾಂತ್ವಾನ ಹೇಳಿದರು.
Vijaya Karnataka Web hdk vesit


ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿಯಲ್ಲಿರುವ ನಿವಾಸದಲ್ಲಿ ಡಿಕೆಶಿ ತಾಯಿ ಗೌರಮ್ಮ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ , ನೀವು ಎದೆಗುಂದದಿರಿ, ನಿಮ್ಮ ಮಗನಿಗೆ ಏನೂ ಆಗುವುದಿಲ್ಲ ಎಂದು ಧೈರ್ಯ ತುಂಬಿದ್ದಾರೆ.
ಎಚ್.ಡಿ.ಕೆ ಭೇಟಿ ಸಂದರ್ಭದಲ್ಲಿ ಡಿಕೆಶಿ ತಾಯಿ ಗೌರಮ್ಮ ಕಣ್ಣೀರಿಟ್ಟ ಘಟನೆ ಕೂಡಾ ನಡೆಯಿತು. ಈ ವೇಳೆ ಅವರಿಗೆ ಸಮಾಧಾನ ಹೇಳಿದ ಕುಮಾರಸ್ವಾಮಿ ಆರೋಗ್ಯ ನೋಡಿಕೊಳ್ಳಿ ಎಂದು ಸಂತೈಸಿದರು.

ಬಳಿಕ ಮಾತನಾಡಿದ ಅವರು, ಇಡಿ, ಐಟಿ ಅಧಿಕಾರಿಗಳನ್ನು ಬಿಜೆಪಿ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಗುಜರಾತ್ ಶಾಸಕರಿಗೆ ರಾಜ್ಯದಲ್ಲಿ ಡಿಕೆ ಶಿವಕುಮಾರ್ ರಕ್ಷಣೆ ನೀಡಿದ ಕಾರಣಕ್ಕಾಗಿ ಅವರಿಗೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಹೈಜಾಕ್ ಮಾಡಲು 30 ಕೋಟಿ ಹಣ ಕೊಟ್ಟಿದ್ದಾರೆ, ಅವರ ವಿರುದ್ಧ ಯಾವುದೇ ದಾಳಿ ನಡೆದಿಲ್ಲ ಎಂದರು.

ವಿರೋಧಿಗಳನ್ನು ಕಸ್ಟಡಿಗೆ ತೆಗೆದುಕೊಳ್ಳುವ ಸಂಪ್ರದಾಯ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದ ಕುಮಾರಸ್ವಾಮಿ, ಬಿಜೆಪಿಯವರು ದ್ವೇಷ ರಾಜಕಾರಣ ಮಾಡುವುದಿಲ್ಲ ಎನ್ನುತ್ತಾರೆ ಆದರೆ ಮಾಡುತ್ತಿರುವುದು ದ್ವೇಷದ ರಾಜಕಾರಣ ಎಂದು ಈ ಸಂದರ್ಭದಲ್ಲಿ ಆರೋಪಿಸಿದರು.

ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯದಿಂದ ಮಾಜಿ ಸಚಿವ ಡಿಕೆಶಿವಕುಮಾರ್ ಬಂಧನಕ್ಕೊಳಗಾಗಿದ್ದು ತನಿಖೆ ಎದುರಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ