ರಾಮನಗರ: ಜೈಲಿನ ಪೊಲೀಸ್ ಸಿಬ್ಬಂದಿಗೆ ತಪಾಸಣೆ, ಕ್ವಾರಂಟೈನ್ಗೆ ಚಿಂತನೆ
ಆರೋಪಿಗಳ ಹತ್ತಿರದಲ್ಲಿ ಕೆಲಸ ಮಾಡಿದ ಸಿಬ್ಬಂದಿಗಳನ್ನ ಕ್ವಾರೆಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ವಿಡಿಯೋ ಪರಿಶೀಲನೆ ಮಾಡಲಾಗುತ್ತಿದೆ, ಈಗಾಗಲೇ 15 ಮಂದಿ ನಗರಸಭೆ ಸಿಬ್ಬಂದಿಗಳನ್ನ ಕ್ವಾರಂಟೈನ್ ಮಾಡಲಾಗಿದೆ.
Vijaya Karnataka Web 25 Apr 2020, 10:36 am
ರಾಮನಗರ: ಪಾದರಾಯನಪುರದ ಪುಂಡರ ಪೈಕಿ ಕೆಲವರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ನಂತರ ಈಗ ರಾಮನಗರದಲ್ಲಿ ಭೀತಿ ಹೆಚ್ಚಾಗಿದೆ.
ಪಾದರಾಯನಪುರದಲ್ಲಿ ನಡೆದ ದಾಂಧಲೆಯ ಆರೋಪಿಗಳನ್ನು ಇಟ್ಟಿದ್ದ ರಾಮನಗರ ಜೈಲಿನ ಪೊಲೀಸ್ ಸಿಬ್ಬಂದಿಯನ್ನು ಈಗ ತಪಾಸಣೆಗೊಳಪಡಿಸಲು ನಿರ್ಧರಿಸಲಾಗಿದೆ.
ಕೆಲವು ಆರೋಪಿಗಳಿಗೆ ಕೊರೊನಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಈಗ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಆದರೆ ಅವರು ಇದ್ದ ಜೈಲನ್ನು ಸ್ಯಾನಿಟೈಸ್ ಮಾಡಲಾಗಿದೆ. ನಗರಸಭೆ ಸಿಬ್ಬಂದಿಯನ್ನು ಶುಕ್ರವಾರ ಆರೋಗ್ಯ ತಪಾಸಣೆಗೊಳಪಡಿಸಲಗಿದೆ.
ಈಗ ಪೊಲೀಸ್ ಸಿಬ್ಬಂದಿಯನ್ನೂ ತಪಾಸಣೆಗೊಳಪಡಿಸಲು ನಿರ್ಧರಿಸಲಾಗಿದೆ. ಅಗತ್ಯಬಿದ್ದರೆ ಈ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ.
ಜೈಲಿನ ಬಳಿ ಒಡಾಡಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಆರೋಪಿಗಳನ್ನ ಕರೆತಂದಾಗ ಮಾಡಿರುವ ವಿಡಿಯೋ ಪರಿಶೀಲನೆ ಮಾಡಲಾಗಿದೆ.
ಆರೋಪಿಗಳ ಹತ್ತಿರದಲ್ಲಿ ಕೆಲಸ ಮಾಡಿದ ಸಿಬ್ಬಂದಿಗಳನ್ನ ಕ್ವಾರೆಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ವಿಡಿಯೋ ಪರಿಶೀಲನೆ ಮಾಡಲಾಗುತ್ತಿದೆ, ಈಗಾಗಲೇ 15 ಮಂದಿ ನಗರಸಭೆ ಸಿಬ್ಬಂದಿಗಳನ್ನ ಕ್ವಾರಂಟೈನ್ ಮಾಡಲಾಗಿದೆ.
ಗುರುವಾರ ಬೆಳಿಗ್ಗೆ ಜೈಲಿನಲ್ಲಿ ಸ್ಯಾನಿಟೈಸರ್, ಮಾಸ್ಕ್ ವಿತರಣೆ ಮಾಡಿದ್ದ ಸಿಬ್ಬಂದಿಗಳು ಈಗ ಕ್ವಾರಂಟೈನ್ನಲ್ಲಿದ್ದಾರೆ.
ಈಗ ಯಾರಿಗೆಲ್ಲಾ ಕ್ವಾರೆಂಟೈನ್ ಮಾಡಬೇಕು ಎಂಬ ಬಗ್ಗೆ ಆರೋಗ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಪಾದರಾಯನಪುರದಲ್ಲಿ ನಡೆದ ದಾಂಧಲೆಯ ಆರೋಪಿಗಳನ್ನು ಇಟ್ಟಿದ್ದ ರಾಮನಗರ ಜೈಲಿನ ಪೊಲೀಸ್ ಸಿಬ್ಬಂದಿಯನ್ನು ಈಗ ತಪಾಸಣೆಗೊಳಪಡಿಸಲು ನಿರ್ಧರಿಸಲಾಗಿದೆ.
ಕೆಲವು ಆರೋಪಿಗಳಿಗೆ ಕೊರೊನಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಈಗ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಆದರೆ ಅವರು ಇದ್ದ ಜೈಲನ್ನು ಸ್ಯಾನಿಟೈಸ್ ಮಾಡಲಾಗಿದೆ. ನಗರಸಭೆ ಸಿಬ್ಬಂದಿಯನ್ನು ಶುಕ್ರವಾರ ಆರೋಗ್ಯ ತಪಾಸಣೆಗೊಳಪಡಿಸಲಗಿದೆ.
ಈಗ ಪೊಲೀಸ್ ಸಿಬ್ಬಂದಿಯನ್ನೂ ತಪಾಸಣೆಗೊಳಪಡಿಸಲು ನಿರ್ಧರಿಸಲಾಗಿದೆ. ಅಗತ್ಯಬಿದ್ದರೆ ಈ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ.
ಜೈಲಿನ ಬಳಿ ಒಡಾಡಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಆರೋಪಿಗಳನ್ನ ಕರೆತಂದಾಗ ಮಾಡಿರುವ ವಿಡಿಯೋ ಪರಿಶೀಲನೆ ಮಾಡಲಾಗಿದೆ.
ಆರೋಪಿಗಳ ಹತ್ತಿರದಲ್ಲಿ ಕೆಲಸ ಮಾಡಿದ ಸಿಬ್ಬಂದಿಗಳನ್ನ ಕ್ವಾರೆಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ವಿಡಿಯೋ ಪರಿಶೀಲನೆ ಮಾಡಲಾಗುತ್ತಿದೆ, ಈಗಾಗಲೇ 15 ಮಂದಿ ನಗರಸಭೆ ಸಿಬ್ಬಂದಿಗಳನ್ನ ಕ್ವಾರಂಟೈನ್ ಮಾಡಲಾಗಿದೆ.
ಗುರುವಾರ ಬೆಳಿಗ್ಗೆ ಜೈಲಿನಲ್ಲಿ ಸ್ಯಾನಿಟೈಸರ್, ಮಾಸ್ಕ್ ವಿತರಣೆ ಮಾಡಿದ್ದ ಸಿಬ್ಬಂದಿಗಳು ಈಗ ಕ್ವಾರಂಟೈನ್ನಲ್ಲಿದ್ದಾರೆ.
ಈಗ ಯಾರಿಗೆಲ್ಲಾ ಕ್ವಾರೆಂಟೈನ್ ಮಾಡಬೇಕು ಎಂಬ ಬಗ್ಗೆ ಆರೋಗ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.