ಆ್ಯಪ್ನಗರ

ಸಿಎಂ ಕ್ಷೇತ್ರದಲ್ಲಿರುವ ಮೈದಾನಕ್ಕೆ ಎರಡು ಕೋಮುಗಳ ಹರಸಾಹಸ

ಚನ್ನಪಟ್ಟಣ ನಗರದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿರುವ (2.10 ಗುಂಟೆ) ಈದ್ಗಾ ಮೈದಾನದ ಜಾಗ ನಮಗೆ ಸೇರಿದ್ದು ಎಂದು ಮುಸ್ಲಿಮರು ಪಟ್ಟು ಹಿಡಿದಿದ್ದು, ಪೊಲೀಸರ ಜತೆ ವಾಗ್ವಾದ ನಡೆಸಿದ್ದಾರೆ.

Vijaya Karnataka Web 31 Jan 2019, 4:02 pm
ರಾಮನಗರ: ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವ ಕ್ಷೇತ್ರ ಚನ್ನಪಟ್ಟಣದಲ್ಲಿರುವ ಈದ್ಗಾ ಮೈದಾನ ಪ್ರಕರಣ ಗಲಾಟೆಗೆ ಮುನ್ಸೂಚನೆ ನೀಡಿದೆ.

ಚನ್ನಪಟ್ಟಣ ನಗರದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿರುವ (2.10 ಗುಂಟೆ) ಈದ್ಗಾ ಮೈದಾನದ ಜಾಗ ನಮಗೆ ಸೇರಿದ್ದು ಎಂದು ಮುಸ್ಲಿಮರು ಪಟ್ಟು ಹಿಡಿದಿದ್ದು, ಪೊಲೀಸರ ಜತೆ ವಾಗ್ವಾದ ನಡೆಸಿದ್ದಾರೆ.

ಒಂದೇ ಜಾಗದಲ್ಲಿ ಮೈದಾನ ಹಾಗೂ ಕೋರ್ಟ್ ನಿರ್ಮಾಣವಾಗಿದ್ದು, ಫೆ.2 ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೋರ್ಟ್ ಸಂಕೀರ್ಣ ಉದ್ಘಾಟನೆ ಮಾಡಲಿದ್ದಾರೆ.

ಈದ್ಗಾ ಮೈದಾನಕ್ಕೆ ಜಿಲ್ಲಾಡಳಿತ ಕಾಂಪೌಂಡ್ ನಿರ್ಮಿಸಿ ಕೊಡದ ಹಿನ್ನೆಲೆಯಲ್ಲಿ ಮುಸ್ಲಿಮರೇ ಕಾಂಪೌಂಡ್ ನಿರ್ಮಾಣಕ್ಕೆ ಮುಂದಾಗಿದ್ದರೆ, ಇತ್ತ ಹಿಂದುಗಳು ಈ ಜಾಗದಲ್ಲಿ ನಮಗೂ ಪಾಲಿದೆ ಎಂದು ಹೇಳುತ್ತಿದ್ದಾರೆ.

ಸಂಕ್ರಾಂತಿ ಸಮಯದಲ್ಲಿ ಇಲ್ಲಿ ದನಗಳನ್ನು ಕಿಚ್ಚು ಹಾಯಿಸುವ ಕಾರ್ಯಕ್ರಮ ನಡೆಯುತ್ತದೆ. ನಮಗೂ ಜಾಗದಲ್ಲಿ ಪಾಲು ಕೊಡಲೇಬೇಕು ಎಂದು ಆಗ್ರಹಿಸಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಸದ್ಯ ಈ ಜಾಗದ ಸಲುವಾಗಿ ಗಲಾಟೆ ನಡೆಯುತ್ತಿದ್ದು, ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇದೆ. ಪೊಲೀಸರು ಬಂದೋಬಸ್ತ್‌ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ