ಆ್ಯಪ್ನಗರ

ಕಾಂಗ್ರೆಸ್ ಬಳಿ ಒಬ್ಬ ಟ್ರಬಲ್ ಶೂಟರ್ ಇದ್ದರೆ, ನಮ್ಮ ಬಳಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕಟ್ಟಾ ಸುಬ್ರಮಣ್ಯ ನಾಯ್ಡು

ಸಮ್ಮಿಶ್ರ ಸರಕಾರ ಪತನವಾಗಿದ್ದಕ್ಕೆ ಕಾಂಗ್ರೆಸ್ - ಜೆಡಿಎಸ್‌ನ ಅತೃಪ್ತ ಶಾಸಕರೇ ಕಾರಣ ಎಂದು ಹಲವರು ಕಿಡಿ ಕಾರುತ್ತಿದ್ದಾರೆ. ಈ ರಾಜಕಾರಣದ ಬಗ್ಗೆ ಬಿಜೆಪಿಯ ಕಟ್ಟಾ ಸುಬ್ರಮಣ್ಯ ನಾಯ್ಡು ಮಾತನಾಡಿದ್ದಾರೆ.

Vijaya Karnataka Web 28 Jul 2019, 12:51 pm
ರಾಮನಗರ: ಕಾಂಗ್ರೆಸಿಗರ ಬಳಿ ಒಬ್ಬ ಟ್ರಬಲ್ ಶೂಟರ್ ಇದ್ದರೆ, ನಮ್ಮ ಬಳಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ ಎಂದು ಬಿಜೆಪಿಯ ಕಟ್ಟಾ ಸುಬ್ರಮಣ್ಯ ನಾಯ್ಡು ವ್ಯಂಗ್ಯವಾಡಿದರು.
Vijaya Karnataka Web katta subramanya naidu


ಮಾಗಡಿಯಲ್ಲಿ ಮಾತನಾಡಿದ ಅವರು, ಕೆಲವರಿಗೆ ಅಜೀರ್ಣವಾಗಿದೆ. ಅಸೂಹೆ, ಅಸಂತೃಪ್ತಿ‌ ಕೂಡ ಬಂದಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ಅಲ್ಲಿನ ಅಸಂತೃಪ್ತಿಯಿಂದ ಪಕ್ಷ ಬಿಟ್ಟು ಹೊರ ಬಂದಿದ್ದಾರೆ. ಈ ಹಿಂದೆ ಸಮಾಧಾವಾಗಿದ್ದ ಆ ಶಾಸಕರುಗಳ ಮೇಲೆ ಯಾವ ಟೀಕೆಯು ಇರಲಿಲ್ಲ. ಈಗ ಪಕ್ಷ ನಡೆಸಿಕೊಂಡಿರುವ ನಡವಳಿಕೆಯಿಂದ ಅವರಿಗೆ ಅಸಮಾಧಾನವಾಗಿದೆ. ಹೀಗಾಗಿ ಪಕ್ಷ ಬಿಟ್ಟಿದ್ದಾರೆ.

ಆದರೆ, ಈಗ ಅಂತಹ ಶಾಸಕರನ್ನು ದುಷ್ಟರು, ಭ್ರಷ್ಟರು, ಭೂತಗಳು ಎಂದು ಸಮಾಜದಲ್ಲಿ ಬಿಂಬಿಸುತ್ತಿರುವುದು ಸರಿಯಲ್ಲ‌. ಜೆಡಿಎಸ್ ಹಾಗೂ ಕಾಂಗ್ರೆಸ್ ಬಳಿ ಇದ್ದಾಗ ಶಾಸಕರು ಸರಿ‌ ಇದ್ದರು. ಈಗ ಅವರು ಭ್ರಷ್ಟರಾಗಿದ್ದಾರಾ? ಎಂದು ಕಟ್ಟಾ ಸುಬ್ರಮಣ್ಯ ನಾಯ್ಡು ತಿಳಿಸಿದರು. ಇನ್ನು ಅತೃಪ್ತ ಶಾಸಕರು ನಮ್ಮನ್ನು ತಿಂದುಬಿಡುತ್ತಾರೆ ಎಂದು ಹೇಳಿದ್ದಾರೆ‌. ನಾವೇನು ಬಿರಿಯಾನಿನಾ ತಿಂದು ಬಿಡೋಕೆ? ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಅವರು ಸುಳ್ಳಿನ ಸೌಧ ಕಟ್ಟುತ್ತಿದ್ದಾರೆ. ಅವರ ಈ ಬುದ್ದಿಯಿ‌ಂದಲೇ ಇಂದು ಕಾಂಗ್ರೆಸ್ ಸರ್ವನಾಶವಾಗಿದೆ. ಅತೃಪ್ತ ಶಾಸಕರು ನಮ್ಮ ಬಳಿ ಸಂಪರ್ಕದಲ್ಲಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಈ ಶಾಸಕರನ್ನು ಅನರ್ಹ ಮಾಡಲು ಅವರಿಗೆ ಹಕ್ಕಿಲ್ಲ.ಇನ್ನು ಯಡಿಯೂರಪ್ಪ ಅವರ ಪದವಿ‌ ಸ್ವೀಕಾರವೇ ಅಸಂಬದ್ಧ ಎನ್ನುವವರು ಕಾನೂನು ರೀತಿ ಹೋರಾಟ ಮಾಡಲಿ.‌ ಸುಪ್ರೀಂ ಕೋರ್ಟ್, ಹೈ ಕೋರ್ಟ್ ಗೆ ಹೋಗಲಿ. ಅದನ್ನು ಬಿಟ್ಟು ಬರೀ ಮಾತನಾಡುವುದರಲ್ಲಿ ಏನಿದೆ ? ಎಂದು ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ