ಆ್ಯಪ್ನಗರ

ಅಕ್ರಮ ಮರಳು ಸಾಗಣೆ, ವ್ಯಕ್ತಿ ವಶ

ಚನ್ನಪಟ್ಟಣ ತಾಲೂಕಿನ ಬಾಣಗಹಳ್ಳಿ ಕ್ರಾಸ್‌ ಬಳಿ ಗೂಡ್ಸ್‌ ವಾಹನದಲ್ಲಿಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವ್ಯಕ್ತಿ ಮತ್ತು ವಾಹನವನ್ನು ಪೊಲೀಸರು ವಶಕ್ಕೆ ಪಡೆದು ...

Vijaya Karnataka 15 Oct 2019, 5:00 am
ಚನ್ನಪಟ್ಟಣ: ತಾಲೂಕಿನ ಬಾಣಗಹಳ್ಳಿ ಕ್ರಾಸ್‌ ಬಳಿ ಗೂಡ್ಸ್‌ ವಾಹನದಲ್ಲಿಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವ್ಯಕ್ತಿ ಮತ್ತು ವಾಹನವನ್ನು ಪೊಲೀಸರು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ. ಅಂಬಾಡಹಳ್ಳಿ ಗ್ರಾಮದ ಕಡೆಯಿಂದ ಕಣ್ವ ನದಿಯ ಬಳಿ ಗೂಡ್ಸ್‌ ವಾಹನಕ್ಕೆ ಟಾರ್ಪಲ್‌ ಕಟ್ಟಿಕೊಂಡು ಅಕ್ರಮವಾಗಿ ಮರಳನ್ನು ಸಾಗಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಅಕ್ಕೂರು ಪೊಲೀಸ್‌ ಪಿಎಸೈ ಮತ್ತು ಸಿಬ್ಬಂದಿ ವಾಹನ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಪರಿಶೀಲಿಸಿದಾಗ ಟಾಟಾ ಗೂಡ್ಸ್‌ 207 ವಾಹನ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ವಾಹನ ಮತ್ತು ಚಾಲಕ ಸುರೇಶ್‌ನನ್ನು ವಶಕ್ಕೆ ಪಡೆದುಕೊಂಡು ಆತನ ವಿರುದ್ಧ ಅಕ್ಕೂರು ಪೊಲೀಸ್‌ ಠಾಣೆಯಲ್ಲಿಮೊಕದ್ದಮೆ ದಾಖಲು ಮಾಡಿಕೊಂಡಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ