ಆ್ಯಪ್ನಗರ

ಪೌರ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‌ ಊಟ

ಪೌರ ಕಾರ್ಮಿಕರ ಬಹುದಿನದ ಬೇಡಿಕೆ ಯೊಂದನ್ನು ಮಾಗಡಿ ಪುರಸಭೆ ಈಡೇರಿಸಿದೆ. ಹಸಿವಿನಿಂದ ಕಂಗೆಡುತ್ತಿದ್ದ ಪೌರ ಕಾರ್ಮಿಕರಿಗೆ ಪುರಸಭೆ ಇಂದಿರಾ ಕ್ಯಾಂಟೀನ್‌ ಮೂಲಕ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದೆ.

Vijaya Karnataka 12 Oct 2019, 4:14 pm
ಮಾಗಡಿ: ಪೌರ ಕಾರ್ಮಿಕರ ಬಹುದಿನದ ಬೇಡಿಕೆ ಯೊಂದನ್ನು ಮಾಗಡಿ ಪುರಸಭೆ ಈಡೇರಿಸಿದೆ. ಹಸಿವಿನಿಂದ ಕಂಗೆಡುತ್ತಿದ್ದ ಪೌರ ಕಾರ್ಮಿಕರಿಗೆ ಪುರಸಭೆ ಇಂದಿರಾ ಕ್ಯಾಂಟೀನ್‌ ಮೂಲಕ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದೆ. ಮುಂಜಾನೆಯಿಂದಲೇ ಪೊರಕೆ ಹಿಡಿದು ರಸ್ತೆಗಿಳಿಯುತ್ತಿದ್ದ ಪೌರ ಕಾರ್ಮಿಕರು ಊಟವಿಲ್ಲದೆ ಮಧ್ಯಾಹ್ನ 4 ಗಂಟೆಗೆ ತಮ್ಮ ಮನೆ ಸೇರುತ್ತಿದ್ದರು.
Vijaya Karnataka Web indira canteen meal for civilian workers
ಪೌರ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‌ ಊಟ

ಈ ಹಿನ್ನೆಲೆಯಲ್ಲಿಸರಕಾರದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಬಿಸಿಯೂಟದ ಯೋಜನೆಯಂತೆ ಪೌರ ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡುವಂತೆ ಪೌರ ಕಾರ್ಮಿಕ ಸಂಘ ಟನೆಗಳು ಸರಕಾರವನ್ನು ಒತ್ತಾಯಿಸುತ್ತಾ ಬಂದಿದ್ದವು.
ಬಿಬಿಎಂಪಿ ಅನುಕರಣೆ: ಪೌರ ಕಾರ್ಮಿಕರ ಬೇಡಿಕೆಯು ಸೂಕ್ತವಾಗಿದ್ದ ಹಿನ್ನೆಲೆಯಲ್ಲಿಬೆಂಗಳೂರಿನಲ್ಲಿಬಿಬಿ ಎಂಪಿಯ ಪೌರಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‌ನಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು. ಆನಂತರ ಮೈಸೂರು ಹೀಗೆ ಹಲವಾರು ಜಿಲ್ಲೆಗಳು ಬಿಬಿಎಂಪಿ ಮಾದರಿ ಅನುಸರಿಸಿದ್ದವು. ಇದೀಗ ಮಾಗಡಿ ಪುರಸಭೆಯೂ ಪೌರ ಕಾರ್ಮಿಕರಿಗೆ ಊಟದ ವ್ಯವಸ್ಥೆ ಜಾರಿಗೊಳಿಸಿದೆ.
ಸರಕಾರದ ಆದೇಶ: ಪಟ್ಟಣದ 23 ವಾರ್ಡ್‌ಗಳಲ್ಲಿಒಟ್ಟು 75 ಮಂದಿ ಸ್ವಚ್ಛತಾ ಕಾರ್ಯದಲ್ಲಿತೊಡಗಿಸಿಕೊಂಡಿದ್ದಾರೆ. ವಾರ್ಡ್‌ ವಿಸ್ತೀರ್ಣಕ್ಕೆ ಅನುಗುಣವಾಗಿ ಪೌರ ಕಾರ್ಮಿಕರನ್ನು ನಿಯೋಜಿಸ ಲಾಗಿದೆ. ಈಗಾಗಲೇ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾಲಿಕೆಯ ಕಚೇರಿ ಮುಂದೆ ಪೌರಕಾರ್ಮಿಕರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿರುವ ಬೆನ್ನಲ್ಲೇರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಪುರಸಭೆ, ನಗರ ಸಭೆಯಲ್ಲಿಕೆಲಸ ಮಾಡುವ ಪೌರ ಕಾರ್ಮಿಕರಿಗೆ ಮಧ್ಯಾ ಹ್ನದ ಊಟ ಸರಬರಾಜು ಮಾಡುವಂತೆ ಇಂದಿರಾ ಕ್ಯಾಂಟೀನ್‌ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದರು. ಅಡುಗೆ ಮನೆಯಿಂದಲೇ ವಾಹನದ ಮೂಲಕ ಪೌರ ಕಾರ್ಮಿಕರಿಗೆ ಆಹಾರ ಪೂರೈಸಲಾಗುತ್ತದೆ. ಪ್ರತಿ ವಾರ್ಡ್‌ಗೆ ಪಾಲಿಕೆ ವತಿಯಿಂದ ನಿಯೋಜಿಸಲ್ಪಟ್ಟಿ ರುವ ಮೇಲ್ವಿಚಾರಕರಿಗೆ ಊಟ ಒಪ್ಪಿಸ ಲಾಗುತ್ತದೆ. ಮೇಲ್ವಿಚಾರಕರೇ ಪೌರ ಕಾರ್ಮಿಕರಿಗೆ ಊಟ ಬಡಿ ಸಲಿದ್ದಾರೆ.
ಸಮಸ್ಯೆ ಈಡೇರಿಸಿ: ಪೌರ ಕಾರ್ಮಿಕರಿಗೆ ಮಧ್ಯಾಹ್ನದ ಊಟ ಪೂರೈಸುವಂತೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇವೆ. ಪೌರ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಗಳ ಈಡೇರಿಸುವಂತೆ ಆಗ್ರಹಿಸಿ ಪ್ರತಿ ಭಟನೆ ನಡೆಸುತ್ತಿರುವ ಸಂದರ್ಭದಲ್ಲಿಯೇ ಊಟ ಯೋಜನೆ ಜಾರಿಗೆ ತರಲು ಆದೇಶಿಸಿರುವುದು ಸ್ವಾಗತಾರ್ಹ ಸಂಗತಿಯಾಗಿದೆ. ಜತೆಗೆ ನಮ್ಮ ಇನ್ನಿತರೆ ಬೇಡಿಕೆಗಳ ಈಡೇರಿಕೆ ಹೋರಾಟ ಮಾತ್ರ ಮುಂದು ವರೆಯುತ್ತದೆ ಎನ್ನುತ್ತಾರೆ ಪೌರ ಕಾರ್ಮಿಕ ಸಂಘದ ಸದಸ್ಯರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ