ಆ್ಯಪ್ನಗರ

ಬೆಂಗಳೂರು ಗ್ರಾಮಾಂತರದ ಬಿಜೆಪಿ ಅಭ್ಯರ್ಥಿ ವರದರಾಜು?

ಲೋಕಸಭಾ ಚುನಾವಣೆ ನಾಮಪತ್ರ ಸಲ್ಲಿಕೆಗೆ ನ್ನು ಕೇವಲ ಎರಡು ದಿನ ಬಾಕಿ ಉಳಿದಿದೆ. ಆದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರೆಂಬ ಗೋಜಲು ಇನ್ನೂ ಬಗೆಹರಿದಿಲ್ಲ. ಈಗ ಬಿಜೆಪಿ ಸ್ಪರ್ಧಿಗಳ ಪಟ್ಟಿಯಲ್ಲಿ ಹೊಸದೊಂದು ಹೆಸರು ಕೇಳಿ ಬಂದಿದೆ.

Vijaya Karnataka 25 Mar 2019, 4:39 pm
ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ ಬಿಜೆಪಿ ಯುವಘಟಕದ ಅಧ್ಯಕ್ಷರ ಹೆಸರು | ಸ್ಪರ್ಧೆ ಸುಳಿವು ನೀಡಿದ ಯುವಮುಖಂಡ
Vijaya Karnataka Web is varadaraju is bjp candidate from bangalore rural
ಬೆಂಗಳೂರು ಗ್ರಾಮಾಂತರದ ಬಿಜೆಪಿ ಅಭ್ಯರ್ಥಿ ವರದರಾಜು?


* ರವಿಕಿರಣ್‌.ವಿ. ರಾಮನಗರ

ಲೋಕಸಭಾ ಚುನಾವಣೆ ನಾಮಪತ್ರ ಸಲ್ಲಿಕೆಗೆ ನ್ನು ಕೇವಲ ಎರಡು ದಿನ ಬಾಕಿ ಉಳಿದಿದೆ. ಆದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರೆಂಬ ಗೋಜಲು ಇನ್ನೂ ಬಗೆಹರಿದಿಲ್ಲ. ಈಗ ಬಿಜೆಪಿ ಸ್ಪರ್ಧಿಗಳ ಪಟ್ಟಿಯಲ್ಲಿ ಹೊಸದೊಂದು ಹೆಸರು ಕೇಳಿ ಬಂದಿದೆ. ಬಿಜೆಪಿ ಜಿಲ್ಲಾ ಯುವಘಟಕದ ಅಧ್ಯಕ್ಷ ವರದರಾಜು ಗೌಡ ಅವರು ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.

ಕಳೆದ ಆರು ತಿಂಗಳಿನಿಂದಲೂ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್‌ ಅವರ ಹೆಸರು ಕೇಳಿ ಬಂದಿತ್ತು. ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹೆಸರು ಪ್ರಬಲವಾಗ ತೊಡಗಿತು. ಈ ಸಾಲಿಗೆ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಸಿಪಿವೈ ಪುತ್ರಿ ನಿಶಾ ಹೆಸರು ಕೇಳಿ ಬಂದಿತು. ಈಗ ಈ ಪಟ್ಟಿಗೆ ವರದರಾಜು ಹೆಸರು ಸೇರ್ಪಡೆಯಾಗಿದೆ.

ಇಂದು ನಾಮಪತ್ರ?:

ವರದರಾಜು ಗೌಡ ಸೋಮವಾರ ಬೆಳಗ್ಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್‌ ಅಭ್ಯರ್ಥಿ ಘೋಷಣೆ ಮಾಡದೆ, ಬಿಫಾರಂ ನೀಡದೆ ಗೊಂದಲ ಸೃಷ್ಟಿಸಿ, ಸ್ಥಳೀಯ ಕಾರ‍್ಯಕರ್ತರನ್ನು ನಿರ್ಲಕ್ಷಿಸುತ್ತಿರುವ ಕಾರಣ ಸೋಮವಾರ ಬೆಳಗ್ಗೆ ನಾಮಪತ್ರ ಸಲ್ಲಿಸುತ್ತಾರೆ ಎಂಬ ಚರ್ಚೆ ವಾಟ್ಸ್‌ಆ್ಯಪ್‌ ಹಾಗೂ ಫೇಸ್‌ಬುಕ್‌ನಲ್ಲಿ ಜೋರಾಗಿ ನಡೆಯುತ್ತಿದೆ.

ಮುಳುವಾಗಲಿದೆ ಶೀತಲ ಸಮರ:

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಜೆಪಿ ಪಕ್ಷದೊಳಗೆ ಶೀತಲ ಸಮರ ಜೋಗಾಗಿದೆ. ಜಿಲ್ಲಾ ಬಿಜೆಪಿ ಮುಖಂಡರು ಮಾಜಿ ಸಿಎಂ ಬಿ,ಎಸ್‌.ಯಡಿಯೂರಪ್ಪ ಹಾಗೂ ಕಟ್ಟಾ ಸುಬ್ರಮಣ್ಯ ನಾಯ್ಡು ಅವರನ್ನು ಭೇಟಿ ಮಾಡಿ, ರುದ್ರೇಶ್‌ ಅಥವಾ ಸಿ.ಪಿ.ಯೋಗೇಶ್ವರ್‌ ಅವರಿಗೆ ಪಕ್ಷದ ಬಿ ಫಾರಂ ನೀಡಬೇಕು ಎಂದು ಆಗ್ರಹಿಸಿದ್ದರು. ಈ ಮೂಲಕ ಅವರು ಸಿಪಿವೈ ಪುತ್ರಿ ನಿಶಾ ಸ್ಪರ್ಧೆಗೆ ಅಸಮ್ಮತಿ ವ್ಯಕ್ತಪಡಿಸಿದ್ದರು. ಇದಾಗಿ ಒಂದು ದಿನ ಕಳೆಯುವ ಅಂತರದಲ್ಲಿ ಯುವ ಮುಖಂಡ ವರದರಾಜು ನಾಮಪತ್ರ ಸಲ್ಲಿಕೆ ಕುರಿತು ಊಹಾಪೋಹಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು, ಅಭ್ಯರ್ಥಿ ಆಯ್ಕೆ ಕುರಿತು ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ಬಯಲುಗೊಳಿಸಿದೆ.

ಒತ್ತಡ ಒಪ್ಪಿಕೊಂಡ ವರದರಾಜು:

ಅಭ್ಯರ್ಥಿ ಆಯ್ಕೆ ಕುರಿತು ಹೈಕಮಾಂಡ್‌ನ ಕಾದು ನೋಡುವ ತಂತ್ರಕ್ಕೆ ಸ್ಥಳೀಯ ಬಿಜೆಪಿ ಮುಖಂಡರನ್ನು ಹೈರಾಣಾಗಿಸಿದೆ. ನಾಮಪತ್ರ ಸಲ್ಲಿಕೆಗೆ ಇನ್ನೇರಡು ದಿನ ಬಾಕಿ ಉಳಿದಿದೆ. ಇನ್ನು ಪಕ್ಷದ ಅಧಿಕೃತ ಅಭ್ಯರ್ಥಿ ಕುರಿತು ಘೋಷಣೆಯಾಗದಿರುವುದು ಕಾರ‍್ಯಕರ್ತರನ್ನು ಸಮಸ್ಯೆಗೆ ದೂಡಿದೆ.

ನಾಮಪತ್ರ ಸಲ್ಲಿಕೆ ಮಾಡುವಂತೆ ಹಾಗೂ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವಂತೆ ಪಕ್ಷದ ಕಾರ‍್ಯಕರ್ತರು ಒತ್ತಡ ತರುತ್ತಿರುವುದರ ಕುರಿತು ವರದರಾಜು ಗೌಡ ಒಪ್ಪಿಕೊಂಡಿದ್ದಾರೆ. ಆದರೆ, ಈ ಕುರಿತು ಗುಟ್ಟು ಬಿಟ್ಟುಕೊಡದ ಅವರು, ಕಾರ‍್ಯಕರ್ತರ ಹಾಗೂ ಪಕ್ಷ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ ಎಂಬ ಜಾಣ ನಡೆಯನ್ನು ಅನುಸರಿಸುತ್ತಿದ್ದಾರೆ.

ವಿಧಾನಸಭೆಗೂ ಸ್ಪರ್ಧಿಸಿದ್ದ ವರದರಾಜು:

ರಾಮನಗರ ವಿಧಾನಸಭಾ ಉಪ ಚುನಾವಣೆಯ ಸಂದರ್ಭದಲ್ಲೂ ವರದರಾಜು ಗೌಡ ಬಿಜೆಪಿ ಹುರಿಯಾಳಾಗಿ ನಾಮಪತ್ರ ಸಲ್ಲಿಸಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಎಲ್‌.ಚಂದ್ರಶೇಖರ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾದ ನಂತರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದರು. ಆಗಲೂ ಸಹ ಕಾರ‍್ಯಕರ್ತರ ಒತ್ತಡ ತಂದಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು.

ಕಾರ‍್ಯಕರ್ತರ ರಾಜೀನಾಮೆ?:

ವಿಧಾನಸಭಾ ಉಪಚುನಾವಣೆಯ ಸಮಯದಲ್ಲಿ ಪಕ್ಷಕ್ಕೆ ಆದ ಮುಜುಗರ ಬೇಸತ್ತಿದ್ದ ಕಾರ‍್ಯಕರ್ತರು ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್‌ ಅಥವಾ ಸಿ.ಪಿ.ಯೋಗೇಶ್ವರ್‌ ಅವರನ್ನು ಹೊರುತುಪಡಿಸಿ ಬೇರೆ ಯಾರಿಗೆ ಲೋಕಸಭಾಗೆ ಟಿಕೆಟ್‌ ನೀಡಿದರು ಸಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಈ ನಡುವೆ ಸಾಮಾಜಿಕ ಜಾಲ ತಾಣಗಳಲ್ಲಿ ವರದರಾಜು ಹೆಸರು ಕೇಳಿ ಬಂದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಅಧಿಕೃತ ಅಭ್ಯರ್ಥಿ ಘೋಷಣೆಯ ಬಳಿಕ ಇವುಗಳಿಗೆ ಬ್ರೇಕ್‌ ಬೀಳುತ್ತಿದೆ ಎಂಬುದು ಕೆಲವು ಸ್ಥಳೀಯ ಬಿಜೆಪಿ ಮುಖಂಡರ ಅಭಿಪ್ರಾಯ.

-----

ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾನು ಅಭ್ಯರ್ಥಿಯಾಗಬೇಕೆಂದು ಕಾರ‍್ಯಕರ್ತರು ಒತ್ತಡ ತರುತ್ತಿದ್ದಾರೆ. ಈ ಕುರಿತು ಚಿಂತಿಸಲಾಗುತ್ತಿದೆ. ಪಕ್ಷದ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ.

-ವರದರಾಜುಗೌಡ, ಬಿಜೆಪಿ ಯುವ ಘಟಕದ ಅಧ್ಯಕ್ಷ , ರಾಮನಗರ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ