ಆ್ಯಪ್ನಗರ

ಬಿಜೆಪಿ, ಕಾಂಗ್ರೆಸ್‌ಗೆ ಜೆಡಿಎಸ್ ಅನಿವಾರ್ಯ ಎಂದ ಎಚ್‌ಡಿಕೆ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲಿಯೂ ಏಕಾಂಗಿ ಹೋರಾಟ ಮಾಡುತ್ತೇವೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ಜೆಡಿಎಸ್ ಅನಿವಾರ್ಯವೆಂದು ಗೊತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

Vijaya Karnataka Web 26 Nov 2017, 6:15 pm
ರಾಮನಗರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲಿಯೂ ಏಕಾಂಗಿ ಹೋರಾಟ ಮಾಡುತ್ತೇವೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ಜೆಡಿಎಸ್ ಅನಿವಾರ್ಯವೆಂದು ಗೊತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.
Vijaya Karnataka Web jds is indispensable for bjp congress hdk
ಬಿಜೆಪಿ, ಕಾಂಗ್ರೆಸ್‌ಗೆ ಜೆಡಿಎಸ್ ಅನಿವಾರ್ಯ ಎಂದ ಎಚ್‌ಡಿಕೆ


ರಾಮನಗರದ ಮರಳವಾಡಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಪರ ಅಲೆಯಿದ್ದು, 113 ಕ್ಷೇತ್ರಗಳಲ್ಲಿ ಗೆದ್ದು ಏಕಾಂಗಿಯಾಗಿ ಅಧಿಕಾರಕ್ಕೆ ಬರಲು ರಾಜ್ಯದ ಜನ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ನಮ್ಮ ಕುಟುಂಬದ ಪರ ಇಬ್ಬರು ಮಾತ್ರ ಚುನಾವಣೆಗೆ ಸ್ಪರ್ಧಿಸಬೇಕೆಂಬುವುದು ನಮ್ಮ ನಿಲುವು. ಆದರೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಅನಿತಾ ಕುಮಾರಸ್ವಾಮಿ ಅವರನ್ನೇ ಕಣಕ್ಕೀಳಿಸಬೇಕು ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಒಂದು ರೀತಿಯ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ದೇವೇಗೌಡರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ' ಎಂದು ಹೇಳಿದರು.

ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಸಿದ್ದವಾದ್ದು, ಶೀಘ್ರದಲ್ಲಿಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.

ಕಾರ್ಯಕ್ರಮವೊಂದರಲ್ಲಿ ಅನಿತಾ ಕುಮಾರಸ್ವಾಮಿ ಹಾಗೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಜೊತೆ ಸಹಜವಾಗಿಯೇ ಮಾತನಾಡಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕೊಡುವುದು ಬೇಡ ಎಂದರು.

ಮರಳವಾಡಿ ಶಾಲಾ ಬಸ್ ಅಪಘಾತದಲ್ಲಿ ಮೃತಪಟ್ಟಿದ ಚರಣ್ ಗೌಡ ಅವರ ಮನೆಗೆ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದು, ಮೃತ ಬಾಲಕನ ಪೋಷಕರಿಗೆ ಸಾಂತ್ವಾನ ಹೇಳಿದರು.' ಶಾಲಾ ಬಸ್ ಚಾಲಕರು ಜಾಗರೂಕತೆಯಿಂದ ಚಾಲನೆ ಮಾಡಬೇಕು. ಮಕ್ಕಳ ಜೀವದ ಜೊತೆ ಚಲ್ಲಾಟವಾಡಬೇಡಿ. ಮಕ್ಕಳ ಸಾವು ಹೃದಯವನ್ನೇ ಚೂರು ಮಾಡುತ್ತೆ' ಎಂದು ಕುಮಾರಸ್ವಾಮಿ ಅವರು ವಿಷಾದ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ