ಸೋತ ಮಾತ್ರಕ್ಕೆ ನಾನು ಮನೆ ಸೇರುವ ವ್ಯಕ್ತಿಯಲ್ಲ: ನಿಖಿಲ್ ಕುಮಾರಸ್ವಾಮಿ
Nikhil Kumaraswamy On Ramanagara Defeat: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು ಸೋಲು ಅನುಭವಿಸಿದ್ದಾರೆ. ಈ ಬಗ್ಗೆ ಚನ್ನಪಟ್ಟಣದಲ್ಲಿ ಮಾತನಾಡಿರುವ ಅವರು, ಸೋತ ಮಾತ್ರಕ್ಕೆ ನಾನು ಮನೆ ಸೇರುವ ವ್ಯಕ್ತಿ ಅಲ್ಲ. ಕ್ಷೇತ್ರದ ಜನರು ಸಾಕಷ್ಟು ಪ್ರೀತಿ ತೋರಿಸಿದ್ದಾರೆ. ತಾಂತ್ರಿಕವಾಗಿ ನಾನು ಸೋತಿರಬಹುದು, ಕಾರ್ಯಕರ್ತರನ್ನು ಎದೆಗುಂದಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಹೈಲೈಟ್ಸ್:
- ರಾಮನಗರ ಸೋಲಿನ ಬಗ್ಗೆ ಚನ್ನಪಟ್ಟಣದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ
- ಸೋತ ಮಾತ್ರಕ್ಕೆ ನಾನು ಮನೆ ಸೇರುವ ವ್ಯಕ್ತಿಯಲ್ಲ ಎಂದ ನಿಖಿಲ್ ಕುಮಾರಸ್ವಾಮಿ
- ಕಾರ್ಯಕರ್ತರನ್ನು ಎದೆಗುಂದಲು ಬಿಡುವುದಿಲ್ಲ ಎಂದ ಜೆಡಿಎಸ್ ಯುವ ನಾಯಕ
ರಾಮನಗರ: ಚುನಾವಣೆಯಲ್ಲಿ ಯಾರಾದರೂ ಒಬ್ಬರು ಗೆಲ್ಲುವುದಕ್ಕೆ ಆಗುವುದು. ಸೋತ ಮಾತ್ರಕ್ಕೆ ನಾನು ಮನೆ ಸೇರುವ ವ್ಯಕ್ತಿಯಲ್ಲ. ಕಾರ್ಯಕರ್ತರನ್ನು ಎದೆಗುಂದಲು ನಾನು ಬಿಡುವುದಿಲ್ಲ ಎಂದು ರಾಮನಗರ ಕ್ಷೇತ್ರದ ಪರಾಜಿತ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಎಚ್ಡಿ ಕುಮಾರಸ್ವಾಮಿ ಅವರು ನಿಮಗೆಲ್ಲಾ ಧನ್ಯವಾದ ತಿಳಿಸಿದ್ದಾರೆ. ಪಂಚರತ್ನ ಯೋಜನೆ ಬಗ್ಗೆ ರಾಜ್ಯದ ಜನತೆಗೆ ತಿಳಿಸುವ ಒತ್ತಡದಲ್ಲಿದ್ದರು. ಆದರೂ ಕೂಡ ಚನ್ನಪಟ್ಟಣದಲ್ಲಿ ಎಚ್ಡಿ ಕುಮಾರಸ್ವಾಮಿ ಅವರನ್ನ ಗೆಲ್ಲಿಸಿದ್ದಾರೆ. ಚುನಾವಣೆಯಲ್ಲಿ ಯಾರಾದರೂ ಒಬ್ಬರು ಗೆಲ್ಲುವುದಕ್ಕಾಗುವುದು ಎಂದರು.
ನನಗೆ ರಾಮನಗರದಲ್ಲಿ 76 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿದ್ದಾರೆ. ತಾಂತ್ರಿಕವಾಗಿ ನಾನು ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, ಕ್ಷೇತ್ರದ ಜನರು ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ. ಆದರೂ ನನಗೂ ನೋವು ಉಂಟಾಗಿದೆ. 2004ರಿಂದ ಎಚ್ಡಿ ಕುಮಾರಸ್ವಾಮಿ ಅವರು ರಾಮನಗರದಿಂದ ಸ್ಪರ್ಧೆ ಮಾಡಿದ್ದಾರೆ. ಅಂದಿನಿಂದ ಇಂದಿನವರೆಗೂ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಆದ್ರೆ ಈ ಬಾರಿ ಜನರು ಬೇರೆ ರೀತಿ ತಿರ್ಮಾನ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಒಕ್ಕಲಿಗ ನಾಯಕರು ಸಿಎಂ ಆಗಬೇಕು ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷದಲ್ಲಿ ಆಗುವ ಬೆಳವಣಿಗೆಗೆ ನಾನು ಉತ್ತರ ಕೊಡಲು ಆಗುವುದಿಲ್ಲ. ಅಂತಿಮವಾಗಿ ರಾಜ್ಯದ ಜನರು ಒಂದು ತೀರ್ಮಾನ ಮಾಡಿದ್ದಾರೆ. ಸ್ವತಂತ್ರವಾಗಿ ಸರ್ಕಾರ ನಡೆಸಲು ಕಾಂಗ್ರೆಸ್ಗೆ ರಾಜ್ಯದ ಜನರು ಬೆಂಬಲ ನೀಡಿದ್ದಾರೆ. ಈಗಾಗಿ ಅವರೇ ಉತ್ತರ ನೀಡಬೇಕು ಎಂದರು.
ಲೋಕಸಭೆ ಆಗಲಿ, 2028ರ ವಿಧಾನಸಭಾ ಚುನಾವಣೆ ಬಗ್ಗೆ ನಾನು ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ. 2028ಕ್ಕೆ ರಾಮನಗರದಲ್ಲಿ ನನಗಿಂತ ಪ್ರಬಲ ಅಭ್ಯರ್ಥಿ ಬಂದ್ರೆ ಕಾರ್ಯಕರ್ತರಲ್ಲಿ ಚರ್ಚಿಸುತ್ತೇನೆ ಎಂದು ಹೇಳಿದರು.
ನನಗೆ ರಾಮನಗರದಲ್ಲಿ 76 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿದ್ದಾರೆ. ತಾಂತ್ರಿಕವಾಗಿ ನಾನು ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, ಕ್ಷೇತ್ರದ ಜನರು ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ. ಆದರೂ ನನಗೂ ನೋವು ಉಂಟಾಗಿದೆ. 2004ರಿಂದ ಎಚ್ಡಿ ಕುಮಾರಸ್ವಾಮಿ ಅವರು ರಾಮನಗರದಿಂದ ಸ್ಪರ್ಧೆ ಮಾಡಿದ್ದಾರೆ. ಅಂದಿನಿಂದ ಇಂದಿನವರೆಗೂ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಆದ್ರೆ ಈ ಬಾರಿ ಜನರು ಬೇರೆ ರೀತಿ ತಿರ್ಮಾನ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಮಂಡ್ಯದ ರೀತಿ ರಾಮನಗರದಲ್ಲೂ ಆಗಿದೆ!
ಮಂಡ್ಯದ ರೀತಿಯೇ ಇಲ್ಲಿಯೂ ಆಗಿರುವ ಬಗ್ಗೆ ನಿಮ್ಮ ಬಳಿ ಹಂಚಿಕೊಂಡಿದ್ದೆ. ಇಲ್ಲಿ ಮಧ್ಯ ರಾತ್ರಿ ಕೂಪನ್, ವೋಚರ್ ಕೊಟ್ಟು ಆರ್ಥಿಕವಾಗಿ ಹಿಂದೂಳಿದವರ ಮತ ಪಡೆದು ಅವರನ್ನು ದಾರಿ ತಪ್ಪಿಸಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರಿಗೆ ಅದರ ಬಗ್ಗೆ ಅರಿವಾಗುತ್ತದೆ ಎಂದರು.ಒಕ್ಕಲಿಗ ನಾಯಕರು ಸಿಎಂ ಆಗಬೇಕು ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷದಲ್ಲಿ ಆಗುವ ಬೆಳವಣಿಗೆಗೆ ನಾನು ಉತ್ತರ ಕೊಡಲು ಆಗುವುದಿಲ್ಲ. ಅಂತಿಮವಾಗಿ ರಾಜ್ಯದ ಜನರು ಒಂದು ತೀರ್ಮಾನ ಮಾಡಿದ್ದಾರೆ. ಸ್ವತಂತ್ರವಾಗಿ ಸರ್ಕಾರ ನಡೆಸಲು ಕಾಂಗ್ರೆಸ್ಗೆ ರಾಜ್ಯದ ಜನರು ಬೆಂಬಲ ನೀಡಿದ್ದಾರೆ. ಈಗಾಗಿ ಅವರೇ ಉತ್ತರ ನೀಡಬೇಕು ಎಂದರು.
ಯಾವುದೇ ಕಾರಣಕ್ಕೂ ರಾಮನಗರ ಬಿಟ್ಟು ಹೋಗಲ್ಲ!
ನಿಖಿಲ್ ರಾಮನಗರ ತೊರೆಯುತ್ತಾರೆ ಎಂಬ ವಿಚಾರಕ್ಕೆ ಮಾತನಾಡಿ, ನಾನು ಯಾವುದೇ ಕಾರಣಕ್ಕೂ ರಾಮನಗರ ಬಿಟ್ಟು ಹೋಗುವುದಿಲ್ಲ. ಜನರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ. ಜನರಿಗೆ ಅಧಿಕಾರ ಇಲ್ಲದಿದ್ದರೂ ಸೇವೆ ಮಾಡುತ್ತೇವೆ ಎಂದ ಅವರು, ಲೋಕಸಭೆಯಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ನನ್ನಲ್ಲಿ ಪ್ರಶ್ನೆ ಇಲ್ಲ. ರಾಜಕೀಯದ ಬಗ್ಗೆ ನಾನು ಚಿಂತನೆ ನಡೆಸಲ್ಲ. ದೇವೇಗೌಡರು ಕಟ್ಟಿರುವ ಪಕ್ಷವನ್ನ ಬಲಿಷ್ಠಗೊಳಿಸುವ ಚಿಂತನೆ ನಡೆಸುತ್ತಿದ್ದೇನೆ ಎಂದರು.ಲೋಕಸಭೆ ಆಗಲಿ, 2028ರ ವಿಧಾನಸಭಾ ಚುನಾವಣೆ ಬಗ್ಗೆ ನಾನು ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ. 2028ಕ್ಕೆ ರಾಮನಗರದಲ್ಲಿ ನನಗಿಂತ ಪ್ರಬಲ ಅಭ್ಯರ್ಥಿ ಬಂದ್ರೆ ಕಾರ್ಯಕರ್ತರಲ್ಲಿ ಚರ್ಚಿಸುತ್ತೇನೆ ಎಂದು ಹೇಳಿದರು.