ಆ್ಯಪ್ನಗರ

ಕಿಸಾನ್‌ ಸಮ್ಮಾನ್‌: ಜೂ. 30ರೊಳಗೆ ನೊಂದಾವಣೆಗೆ ವಿನಂತಿ

ಕೃಷಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ಸಮರೋಪಾದಿಯಲ್ಲಿ ಅನುಷ್ಠಾನಗೊಳಿಸಲು ಗಡುವು ನೀಡಿದೆ ಹೊರತು, ರೈತರು ಯಾವುದೇ ರೀತಿಯ ಗೊಂದಲ ಮಾಡಿಕೊಳ್ಳಬಾರದು ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಎಂ. ನಾಗರಾಜ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vijaya Karnataka 28 Jun 2019, 4:27 pm
ಚನ್ನಪಟ್ಟಣ: ಕೃಷಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ಸಮರೋಪಾದಿಯಲ್ಲಿ ಅನುಷ್ಠಾನಗೊಳಿಸಲು ಗಡುವು ನೀಡಿದೆ ಹೊರತು, ರೈತರು ಯಾವುದೇ ರೀತಿಯ ಗೊಂದಲ ಮಾಡಿಕೊಳ್ಳಬಾರದು ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಎಂ. ನಾಗರಾಜ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Vijaya Karnataka Web kisan samman june 30 last day
ಕಿಸಾನ್‌ ಸಮ್ಮಾನ್‌: ಜೂ. 30ರೊಳಗೆ ನೊಂದಾವಣೆಗೆ ವಿನಂತಿ


ಪ್ರಧಾನಮಂತ್ರಿ ಕೃಷಿ ಕಿಸಾನ್‌ ಸಮ್ಮಾನ್‌ ನಿಧಿ (ಪಿಎಂಕಿಸಾನ್‌) ಯೋಜನೆಯು ಜಾರಿಗೆ ಬಂದಿದ್ದು, ಈ ಯೋಜನೆಯಡಿ ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ರೈತ ಕುಟುಂಬಗಳಿಗೆ ವಾರ್ಷಿಕ ಆರು ಸಾವಿರ ರೂ. ಗಳನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ರೈತರು ನಿಗದಿತ ಸ್ವಯಂ ಘೋಷಣೆ ಪತ್ರದೊಂದಿಗೆ ತಮ್ಮ ಆಧಾರ್‌ ಕಾರ್ಡ್‌ ಜೆರಾಕ್ಸ್‌ ಪ್ರತಿ, ಬ್ಯಾಂಕ್‌ ಖಾತೆಯ ಜೆರಾಕ್ಸ್‌ ಪ್ರತಿ ಹಾಗೂ ಪಹಣಿಯ ವಿವರಗಳೊಂದಿಗೆ ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರ, ಗ್ರಾಮ ಪಂಚಾಯಿತಿ, ನಾಡ ಕಚೇರಿ, ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖಾ ಕಚೇರಿ, ಅಟಲ್‌ಜೀ ಜನಸ್ನೇಹಿ ಕೇಂದ್ರ, ನಾಗರೀಕ ಸೇವಾ ಕೇಂದ್ರಗಳಲ್ಲಿ ಜೂ. 30ರೊಳಗೆ ನೊಂದಾಯಿಸಿಕೊಳ್ಳಲು ವಿನಂತಿಸಿದೆ.

ಮುಂದುವರೆದು ಯೋಜನೆಯನ್ನು ಸಮರೋಪಾದಿಯಲ್ಲಿ ಅನುಷ್ಠಾನಗೊಳಿಸಲು ಕಂದಾಯ, ಗ್ರಾಮ ಪಂಚಾಯತ್‌, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳನ್ನು ಗ್ರಾಮವಾರು ನಿಯೋಜಿಸಲಾಗಿದ್ದು, ಸದರಿಯವರು ಪ್ರತಿ ಹಳ್ಳಿಯ ಎಲ್ಲಾ ರೈತರ ಮನೆಗಳಿಗೆ ಭೇಟಿ ನೀಡಿ ಅರ್ಹ ರೈತರಿಂದ ಸ್ವಯಂ ಘೋಷಣೆಗಳನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿರುತ್ತದೆ. ಆದುದ್ದರಿಂದ ಎಲ್ಲಾ ರೈತ ಕುಟುಂಬಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಈಗಾಗಲೇ ಸ್ವಯಂ ಘೋಷಣೆ ಸಲ್ಲಿಸಿರುವ ರೈತರು ಪುನಃ ಸ್ವಯಂ ಘೋಷಣೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅನರ್ಹತೆಗಳು: ನಿವೃತ್ತಿ, ಹಾಲಿ ಸೇವೆಯಲ್ಲಿರುವ ಸರಕಾರಿ ಅಧಿಕಾರಿ ನೌಕರರು (ಗ್ರೂಪ್‌ ಡಿ ಹೊರತು ಪಡಿಸಿ) 10 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತ ಪಡೆಯುತ್ತಿರುವ ಪಿಂಚಣಿದಾರರು, ಆದಾಯ ತೆರಿಗೆ ಪಾವತಿದಾರರ ಕುಟುಂಬದವರು, ವೃತ್ತಿಪರರು ಪತಿ, ಪತ್ನಿ (ವೈದ್ಯರು, ಅಭಿಯಂತರರು, ವಕೀಲರು ಮತ್ತು ಇತರೆ) ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆ ಹೊಂದಿದ ಕುಟುಂಬದವರು ಸಾಂಸ್ಥಿಕ ಭೂಮಾಲೀಕರ ಕುಟುಂಬದವರು ಅನರ್ಹರಾಗಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ