ಆ್ಯಪ್ನಗರ

ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ

ಪಟ್ಟಣದ ಟಿಪ್ಪು ನಗರದ ಬಳಿ ಕ್ಷುಲ್ಲಕ ಕಾರಣಕ್ಕೆ ಜಗಳ ತಗೆದು, ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ.

Vijaya Karnataka 2 Feb 2019, 5:00 am
ಚನ್ನಪಟ್ಟಣ: ಪಟ್ಟಣದ ಟಿಪ್ಪು ನಗರದ ಬಳಿ ಕ್ಷುಲ್ಲಕ ಕಾರಣಕ್ಕೆ ಜಗಳ ತಗೆದು, ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ.
Vijaya Karnataka Web knife attacked for trivial reasons
ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ


ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ಜಮೀರ್‌, ಮಂಗಳೂರು ಮೂಲದ ಮಹಮ್ಮದ್‌ ಜಾಫರ್‌ ಎಂಬುವರ ಮಗನಾದ ಈತನ ಮೇಲೆ, ಜಾಫರ್‌ ಎಂಬುವರ ಮಗ ಮನ್ಸೂರ್‌ ಎಂಬಾತ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಜೂಜಾಟದ ಸಂದರ್ಭದಲ್ಲಿ ಆರೋಪಿ ಮನ್ಸೂರ್‌ ಸ್ಥಳದಲ್ಲೇ ಇದ್ದ ಜಮೀರ್‌ಗೆ ನೀರು ತರುವಂತೆ ಹೇಳಿದನೆನ್ನಲಾಗಿದ್ದು, ನೀರು ತರಲು ಹೋಗದ ವಿಚಾರಕ್ಕೆ ಇಬ್ಬರಿಗೂ ಜಗಳ ನಡೆದು ಚಾಕುವಿನಿಂದ ಕೊರಳಿಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಗಂಭೀರ ಸ್ಥಿತಿಗೆ ಹೋದ ಆತನನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ, ಈ ಪ್ರಕರಣದ ಬಗ್ಗೆ ಪೂರ್ವ ಪೋಲಿಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ