ಆ್ಯಪ್ನಗರ

ಮಕ್ಕಳ ಹಕ್ಕುಗಳ ರಕ್ಷಣೆ ಅರಿವು ಅಗತ್ಯ

ಪೋಷಕರು, ಶಿಕ್ಷ ಕರು ಸೇರಿದಂತೆ ಪ್ರತಿಯೊಬ್ಬರು ಮಕ್ಕಳ ಹಕ್ಕುಗಳನ್ನು ಗೌರವಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನ್ಯಾಯಾಧೀಶ ಬಿ.ಎಸ್‌.ಹೊನ್ನುಸ್ವಾಮಿ ಹೇಳಿದರು.

Vijaya Karnataka 9 Dec 2018, 5:00 am
ರಾಮನಗರ: ಪೋಷಕರು, ಶಿಕ್ಷ ಕರು ಸೇರಿದಂತೆ ಪ್ರತಿಯೊಬ್ಬರು ಮಕ್ಕಳ ಹಕ್ಕುಗಳನ್ನು ಗೌರವಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನ್ಯಾಯಾಧೀಶ ಬಿ.ಎಸ್‌.ಹೊನ್ನುಸ್ವಾಮಿ ಹೇಳಿದರು.
Vijaya Karnataka Web knowledge of child rights is essential
ಮಕ್ಕಳ ಹಕ್ಕುಗಳ ರಕ್ಷಣೆ ಅರಿವು ಅಗತ್ಯ


ನಗರದ ಹೋಲಿ ಕ್ರೆಸೆಂಟ್‌ ಶಾಲೆಯಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಮನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ವಕೀಲರ ಸಂಘ, ಸಾರ್ವಜನಿಕ ಶಿಕ್ಷ ಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷ ರತಾ ರಥದ ಸಂಚಾರ ಮತ್ತು ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೂಕ್ಷ ್ಮ ಮನಸ್ಸನ್ನು ಹೊಂದಿರುವ ಮಕ್ಕಳ ಜೊತೆ ಪೋಷಕರು ಮತ್ತು ಶಿಕ್ಷ ಕರು ಉತ್ತಮ ರೀತಿಯ ಸಂಬಂಧ ಹೊಂದಿರುವ ಜೊತೆಗೆ ಅವರ ಹಕ್ಕುಗಳನ್ನು ರಕ್ಷಿಸಬೇಕು. ಸಂವಿಧಾನರೀತ್ಯ ಪ್ರತಿಯೊಂದು ಮಗುವು ತನ್ನದೆ ಆದ ಹಕ್ಕುಗಳನ್ನು ಹೊಂದಿದ್ದು ಅವುಗಳನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ವಿದ್ಯಾರ್ಥಿಗಳಿಗೆ ತಮಗಿರುವ ಹಕ್ಕುಗಳ ಬಗ್ಗೆ ತಿಳಿಸಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಕಾನೂನು ಸೇವೆಗಳ ಪ್ರಾಧಿಕಾರ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹೊಲಿ ಕ್ರೆಸೆಂಟ್‌ ಶಾಲೆಯ ಪ್ರಿನ್ಸಿಪಾಲ್‌ ಶಾಜಿಯಾ, ಮುಖ್ಯಶಿಕ್ಷ ಕಿ ಲತಾ ಆನಂದ್‌, ವಕೀಲ ಸುಲ್ತಾನ್‌ ಅಹ್ಮದ್‌, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಸವಿತಾ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ