ಆ್ಯಪ್ನಗರ

'ರಾಜ್ಯವನ್ನ ದೇವರೇ ಕಾಪಾಡಬೇಕು': ಕೇಂದ್ರ ಸರಕಾರದ ವಿರುದ್ಧ ಚನ್ನಪಟ್ಟಣದಲ್ಲಿ ಎಚ್‌ಡಿಕೆ ವಾಗ್ದಾಳಿ

ಕೇಂದ್ರ ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯವನ್ನು ದೇವರೇ ಕಾಪಾಡಬೇಕು ಎಂದು ಮೋದಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ರಾಜ್ಯ ಸರಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

Vijaya Karnataka Web 3 Feb 2020, 3:44 pm
ರಾಮನಗರ: ಕೇಂದ್ರದಿಂದ ಕರ್ನಾಟಕದ ತೆರಿಗೆ ಪಾಲು ಕಡಿತ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯವನ್ನು ದೇವರೇ ಕಾಪಾಡಬೇಕು ಎಂದು ಚನ್ನಪಟ್ಟಣದಲ್ಲಿ ಹೇಳಿಕೊಂಡಿದ್ದಾರೆ. ಅಲ್ಲದೆ, ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Vijaya Karnataka Web hd kumaraswamy bccl


ಕೇಂದ್ರ ಬಜೆಟ್‌ನಲ್ಲಿ ಕೇಂದ್ರ ಸರಕಾರದಿಂದ ಕರ್ನಾಟಕದ ತೆರಿಗೆ ಪಾಲು ಕಡಿತವಾಗಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯವನ್ನ ದೇವರೇ ಕಾಪಾಡಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಈ ಬಾರಿ ರಾಜ್ಯಕ್ಕೆ 9 ರಿಂದ 11 ಸಾವಿರ ಕೋಟಿ ಖೋತಾ ಮಾಡಿದ್ದಾರೆ. ಕಳೆದ ವರ್ಷದ 30 ಸಾವಿರ ಕೋಟಿ ಯೋಜನೆಗಳ ಅನುದಾನವನ್ನ ಕಡಿತ ಮಾಡಿದ್ದಾರೆ. ಇನ್ನೊಂದೆಡೆ ಈ ರಾಜ್ಯ ಸರಕಾರದಲ್ಲಿ ಮಂತ್ರಿ ಮಂಡಲ ರಚನೆ ಮಾಡೋದೆ ದುಸ್ಸಾಹಸವಾಗಿದೆ. ಈ ಪುಣ್ಯಾತ್ಮರು ಅದನ್ನೇ ನೋಡ್ತಾರೋ, ರಾಜ್ಯದ ಅಭಿವೃದ್ಧಿ ಬಗ್ಗೆ ನೋಡ್ತಾರೋ ಆ ದೇವರೇ ಕಾಪಾಡಬೇಕು ಎಂದು ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಆಕ್ರೋಶ ಹೊರಹಾಕಿದ್ದಾರೆ.

'ಮಿಣಿ ಮಿಣಿ ಪೌಡರ್' ಟ್ರೋಲ್ ಮಾಡಿದ್ದೇ ಬಿಜೆಪಿ ಕಾರ್ಯಕರ್ತರು: ಅಬ್ಬರಿಸಿ ಬೊಬ್ಬಿರಿದ ಎಚ್ಡಿಕೆ..!

ಇನ್ನು, ಬೆಳಗಾವಿಯಲ್ಲಿ ಫಲಾನುಭವಿಗಳಿಗೆ 10 ಸಾವಿರದ ಚೆಕ್ ಕೊಟ್ಟಿದ್ದಾರೆ. ಆದರೆ, ಅದಕ್ಕೂ ಸ್ಟೇ ಕೊಟ್ಟಿದ್ದಾರೆ. ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ರೈತರಿಗೆ, ಯುವಕರಿಗೆ ಯಾವ ನಿರೀಕ್ಷೆಯೂ ಇಲ್ಲ ಎಂದು ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಿರ್ಮಲಾ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದೇನು?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ