ಆ್ಯಪ್ನಗರ

ಬಿಜೆಪಿ ಕಾರ‍್ಯಕರ್ತರ ಸಂಭ್ರಮಾಚರಣೆ

ಸತತ ಎರಡನೇ ಬಾರಿಗೆ ನರೇಂದ್ರ ಮೋದಿ ಪ್ರಧಾನ ಮಂತ್ರಿ ಪಟ್ಟ ಅಲಂಕರಿಸುತ್ತಿರುವುದರಿಂದ ಶುಕ್ರವಾರ ಬಿಜೆಪಿ ಕಾರ‍್ಯಕರ್ತರು ನಗರದ ಐಜೂರು ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

Vijaya Karnataka 25 May 2019, 4:45 pm
ರಾಮನಗರ: ಸತತ ಎರಡನೇ ಬಾರಿಗೆ ನರೇಂದ್ರ ಮೋದಿ ಪ್ರಧಾನ ಮಂತ್ರಿ ಪಟ್ಟ ಅಲಂಕರಿಸುತ್ತಿರುವುದರಿಂದ ಶುಕ್ರವಾರ ಬಿಜೆಪಿ ಕಾರ‍್ಯಕರ್ತರು ನಗರದ ಐಜೂರು ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
Vijaya Karnataka Web lok sabh election result 2019 bjp activists in full happiness
ಬಿಜೆಪಿ ಕಾರ‍್ಯಕರ್ತರ ಸಂಭ್ರಮಾಚರಣೆ


ಬೆಂಗಳೂರು-ಮೈಸೂರು ಹೆದ್ದಾರಿಯ ವೃತ್ತದಲ್ಲಿ ಸಜಾಮಣೆಗೊಂಡ ಕಾರ‍್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ್‌ ಮಾತಾಗೆ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ಪಟಾಕಿ ಸಿಡಿಸಿದ ಕಾರ‍್ಯಕರ್ತರು, ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಿದರು.

ರಾಜ್ಯದಲ್ಲಿ ಬಿಜೆಪಿಗೆ 25 ಸ್ಥಾನ ಗಳಿಕೆ:

ಈ ವೇಳೆ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಪ್ರವೀಣ್‌ ಗೌಡ ಮಾತನಾಡಿ, ದೇಶದ ಜನತೆ ಆಶೀರ್ವಾದಿಂದಾಗಿ, ಎನ್‌ಡಿಎ ಮಿತ್ರ ಪಕ್ಷಗಳು 550ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಿದ್ದು, ಎರಡನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಯುಡಿಯೂರಪ್ಪ ಅವರ ಶ್ರಮದಿಂದಾಗಿ ರಾಜ್ಯದಲ್ಲಿ ಬಿಜೆಪಿ 25 ಸ್ಥಾನಗಳನ್ನು ಗಳಿಸುವಲ್ಲಿ ಸಫಲವಾಗಿದೆ ಎಂದು ಹೇಳಿದರು.

ಕಾರ‍್ಯಕರ್ತರ ಶ್ರಮ ಪ್ರಧಾನ :

ರಾಮನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 40 ಸಾವಿರಕ್ಕೂ ಹೆಚ್ಚು ಮತ ನೀಡಿದ ಎಲ್ಲರಿಗೂ ಧನ್ಯವಾದಗಳು. ಪಕ್ಷ ಉತ್ತಮ ಸಾಧನೆ ಮಾಡಲು ದೇಶಾಭಿಮಾನಿಗಳು ಸಹಕಾರ ಹಾಗೂ ಕಾರ‍್ಯಕರ್ತರ ಶ್ರಮ ಇಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಸಂಕಲ್ಪ ಭಾರತ ಸಿದ್ಧಾಂತ ನನಸಾಗುವ ಸುದಿನ:

ಪ್ರಧಾನಿ ನರೇಂದ್ರ ಮೋದಿ ಅವರ, ಅಖಂಡ ಭಾರತ, ಅಭಿವೃದ್ಧಿ ಹಾಗೂ ಸಂಕಲ್ಪ ಭಾರತ ಸಿದ್ಧಾಂತ ನನಸಾಗುವ ಸುದಿನಗಳು ಬಹಳ ಹತ್ತಿರದಲ್ಲೇ ಇದೆ. ಮುಂದಿನ ದಿನಗಳಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಬಿಜೆಪಿ ವಶಪಡಿಸಿಕೊಳ್ಳಲಿದೆ ಎಂದು ಹೇಳಿದರು.

ಘಟನಾನುಘಟಿ ನಾಯಕರ ಸೋಲು:

ರಾಜ್ಯದ ಘಟನಾನುಘಟಿ ನಾಯಕರು ಮೋದಿಯ ಅಶ್ವಮೇಧವನ್ನು ಕಟ್ಟಿ ಹಾಕಲು ಸಾಕಷ್ಟು ಪ್ರಯತ್ನ ಪಟ್ಟರು. ಆದರೆ, ಮತದಾರ ಪ್ರಭು ಮುಂದೆ ಇವರ ಆಟ ನಡೆಯಲೇ ಇಲ್ಲ. ಮಾಜಿ ಪ್ರಧಾನಿ, ಮಾಜಿ ವಿರೋಧ ಪಕ್ಷದ ನಾಯಕ, ಮಾಜಿ ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಯನ್ನು ಈ ಭಾರಿ ಚುನಾವಣೆಯಲ್ಲಿ ಜನತೆ ಸೋಲಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ಈ ವೇಳೆ ಪಕ್ಷದ ಮುಖಂಡರಾದ ಎಸ್‌.ಆರ್‌.ನಾಗರಾಜು, ಪದ್ಮನಾಭ್‌, ಚನ್ನಪ್ಪ, ವಿನೋದ್‌ ಭಗತ್‌, ಸೇರಿದಂತೆ ಇತರೆ ಕಾರ್ಯಕರ್ತರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ