ಆ್ಯಪ್ನಗರ

ಪೊಲೀಸರಿಗೆ ಅವಾಜ್‌ ಹಾಕಿದ ಮಾಗಡಿ ಶಾಸಕ

ಮಾಗಡಿ ಶಾಸಕ ಹೆಚ್‌.ಸಿ. ಬಾಲಕೃಷ್ಣ ಕುದೂರು ಪೊಲೀಸ್‌ ಠಾಣೆಗೆ ನುಗ್ಗಿ, ಅಧಿಕಾರಿಗಳನ್ನು ಅಸಭ್ಯ ಪದಗಳಿಂದ ನಿಂದಿಸಿರುವ ಘಟನೆ ವರದಿ ಆಗಿದೆ.

ವಿಕ ಸುದ್ದಿಲೋಕ 19 Jan 2017, 11:19 am
ರಾಮನಗರ: ಮಾಗಡಿ ಶಾಸಕ ಹೆಚ್‌.ಸಿ. ಬಾಲಕೃಷ್ಣ ಕುದೂರು ಪೊಲೀಸ್‌ ಠಾಣೆಗೆ ನುಗ್ಗಿ, ಅಧಿಕಾರಿಗಳನ್ನು ಅಸಭ್ಯ ಪದಗಳಿಂದ ನಿಂದಿಸಿರುವ ಘಟನೆ ವರದಿ ಆಗಿದೆ.
Vijaya Karnataka Web magadi mla hc balakrishna mla fights with police
ಪೊಲೀಸರಿಗೆ ಅವಾಜ್‌ ಹಾಕಿದ ಮಾಗಡಿ ಶಾಸಕ


ಜೆಡಿಎಸ್‌ನಿಂದ ಅಮಾನತುಗೊಂಡಿರುವ ಶಾಸಕ ಬಾಲಕೃಷ್ಣ, ಪೊಲೀಸ್‌ ಅಧಿಕಾರಿ ನಂದೀಶ್‌ ವಿರುದ್ಧ ಹರಿಹಾಯ್ದಿದ್ದಾರೆ ಎನ್ನಲಾಗಿದೆ.

ದೇವಸ್ಥಾನದಲ್ಲಿ ಹಾರ ಹಾಕುವ ವಿಚಾರವಾಗಿ ದಾಯಾದಿಗಳಾದ ರಂಗಸ್ವಾಮಿ ಹಾಗೂ ರಮೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕುದೂರು ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾಗಿದ್ದರೂ, ಆರೋಪಿಯನ್ನು ಬಂಧಿಸದ ಪೊಲೀಸರ ಕ್ರಮವನ್ನು ಖಂಡಿಸಿ, ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ ಶಾಸಕ ಬಾಲಕೃಷ್ಣ ಬಳಿಕ ಠಾಣೆಯಲ್ಲೇ ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ. ಅಶ್ಲೀಲ ಪದಗಳಿಂದ ಪೊಲೀಸರನ್ನು ನಿಂದಿಸಿದ್ದಾರೆ ಎನ್ನಲಾಗಿದೆ.

ಗಡುವು:

ಠಾಣೆಯಿಂದ ಹೊರಬಂದ ಶಾಸಕ ಸೋಮವಾರದೊಳಗೆ ಹಲ್ಲೆ ಮಾಡಿರುವ ವ್ಯಕ್ತಿಯನ್ನು ಬಂಧಿಸದಿದ್ದರೆ, ಠಾಣೆಗೆ ಮುತ್ತಿಗೆ ಹಾಕಿ, ಪೊಲೀಸರ ಮೇಲೂ ಹಲ್ಲೆ ಮಾಡುತ್ತೇವೆ ಎಂದು ಧಮಕಿ ಹಾಕಿರುವ ದೃಶ್ಯ ಟಿವಿಯಲ್ಲಿ ಪ್ರಸಾರ ಆಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ