ಆ್ಯಪ್ನಗರ

ಕೆಂಪೇಗೌಡ ಜಯಂತಿ ಅಂಗವಾಗಿ ಸಾಮೂಹಿಕ ವಿವಾಹ

ಕೆಂಪೇಗೌಡರ ಜಯಂತ್ಯುತ್ಸವದ ಪ್ರಯುಕ್ತ ಕೆಂಪೇಗೌಡ ಅಭಿವೃದ್ಧಿ ಸಮಿತಿ ವತಿಯಿಂದ ಹುಚ್ಚಮನುಮೇಗೌಡರಪಾಳ್ಯದಲ್ಲಿ ಎಚ್‌.ಎಂ.ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಸಾಮೂಹಿಕ ವಿವಾಹ ನಡೆಯಿತು.

Vijaya Karnataka 28 Jun 2019, 5:00 am
ಹುಚ್ಚಹನುಮೇಗೌಡರ ಪಾಳ್ಯದಲ್ಲಿ ಸಾಮೂಹಿಕ ವಿವಾಹ
Vijaya Karnataka Web mass wedding as part of kempegowda jayanthi
ಕೆಂಪೇಗೌಡ ಜಯಂತಿ ಅಂಗವಾಗಿ ಸಾಮೂಹಿಕ ವಿವಾಹ


ಮಾಗಡಿ: ಕೆಂಪೇಗೌಡರ ಜಯಂತ್ಯುತ್ಸವದ ಪ್ರಯುಕ್ತ ಕೆಂಪೇಗೌಡ ಅಭಿವೃದ್ಧಿ ಸಮಿತಿ ವತಿಯಿಂದ ಹುಚ್ಚಮನುಮೇಗೌಡರಪಾಳ್ಯದಲ್ಲಿ ಎಚ್‌.ಎಂ.ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಸಾಮೂಹಿಕ ವಿವಾಹ ನಡೆಯಿತು.

ಇದೇ ವೇಳೆ ಎಚ್‌.ಎಂ.ಕೃಷ್ಣಮೂರ್ತಿ ಮಾತನಾಡಿ, ಬೆಂಗಳೂರು ನಿರ್ಮಿಸಿದ ನಾಡಫ್ರಭು ಮಾಗಡಿ ಕೆಂಪೇಗೌಡರ ಸ್ಮರಣೆಯನ್ನು ಮಾಡುವ ಉದ್ದೇಶದಿಂದ ಕೆಂಪೇಗೌಡ ಅಭಿವೃದ್ಧಿ ಸಮಿತಿಯನ್ನು ರಚಿಸಿಕೊಂಡು ಕಳೆದ 19 ವರ್ಷಗಳಿಂದ ಮಾಗಡಿ ಪಟ್ಟಣದಲ್ಲಿ ಪ್ರತಿವರ್ಷ ಸಾಮೂಹಿಕ ವಿವಾಹ, ಅನ್ನ ಸಂತರ್ಪಣೆ, ಆರೋಗ್ಯ ಉಚಿತ ಶಿಬಿರಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದ್ದು, ಈ ಬಾರಿಯೂ ಸಹ ಕಾಲ ಭೈರವೇಶ್ವರನ ಸನ್ನಿಧಿಯಲ್ಲಿ ಸಾಮೂಹಿಕ ವಿವಾಹವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕೆಂಪಾಪುರ ಅಭಿವೃದ್ಧಿಗೆ ಅನುದಾನ ಬಿಡುಗಡೆ:


ಕೆಂಪಾಪುರದಲ್ಲಿರುವ ನಾಡಪ್ರಭು ಕೆಂಪೇಗೌಡರು ಐಕ್ಯವಾದ ಸ್ಥಳವನ್ನು ಹಾಗೂ ಕೆಂಪಾಪುರವನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಅನುದಾನ ಬಿಡುಗಡೆಯಾಗಿದ್ದು, ಐಕ್ಯವಾದ ಸ್ಥಳದ ಸುತ್ತಮುತ್ತಲಿರುವ ಮನೆಗಳನ್ನು ತೆರವುಗೊಳಿಸುವ ಸಲುವಾಗಿ ಮನೆ ಮಾಲೀಕರೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು ಶೀಘ್ರವಾಗಿ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಕೃಷ್ಣಮೂರ್ತಿ ಹೇಳಿದರು.

ಪುಷ್ಪ ಕೃಷ್ಣಮೂರ್ತಿ, ಎಚ್‌.ಎಂ.ಗಂಗಾಧರ್‌, ದೀಪು, ಅಜಯ್‌, ಎನ್‌ಇಎಸ್‌ ಆನಂದ್‌, ದೊಡ್ಡಿ ಗೋಪಿ, ಗಂಗಾಧರ್‌, ಶಿವು, ಹೇಮಂತ್‌ ಮತ್ತಿತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ