ಆ್ಯಪ್ನಗರ

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಬೇಕು: ವಾಟಾಳ್ ನಾಗರಾಜ್

ಶಾಸಕರ ರೆಸಾರ್ಟ್ ವಾಸ್ತವ್ಯ ವಿರೋಧಿಸಿ ಪ್ರತಿಭಟನೆ ನಡೆಸಿರುವ ವಾಟಾಳ್ ನಾಗರಾಜ್, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

Vijaya Karnataka Web 14 Jul 2019, 12:44 pm
ರಾಮನಗರ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅಭಿಪ್ರಾಯಪಟ್ಟಿದ್ದಾರೆ.
Vijaya Karnataka Web VATAL


ಶಾಸಕರ ರೆಸಾರ್ಟ್ ವಾಸ್ತವ್ಯ ವಿರೋಧಿಸಿ ರಾಮನಗರದ ಬಸ್‌ ನಿಲ್ದಾಣದಲ್ಲಿ ಖಾಲಿ ಹಂಡೆಗಳನ್ನು ಪ್ರದರ್ಶಿಸಿ ಪ್ರತಿಭಟಿಸುತ್ತಿರುವ ಅವರು, ಜನರಿಗೆ ಕುಡಿಯಲು ನೀರಿಲ್ಲ. ಜಾನುವಾರುಗಳಿಗೆ ಮೇವಿಲ್ಲ. ಆದರೆ ಶಾಸಕರು ಮಾತ್ರ ರೆಸಾರ್ಟ್‌ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆಂದು ಅವರು ಕಿಡಿಕಾರಿದ್ದಾರೆ.

ಪಕ್ಷಾಂತರ ಮಾಡುವ ಶಾಸಕರನ್ನ ಜೈಲಿಗೆ ಹಾಕಬೇಕು. ಅವರಿಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ನೀಡಬಾರದು. ಈ ರೀತಿಯ ಕಾನೂನು ಶೀಘ್ರವಾಗಿ ಜಾರಿಯಾಗಬೇಕೆಂದು ಆಗ್ರಹಿಸಿದರು.

ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ. ಆದರೆ, ಈ ಬಗ್ಗೆ ಮೈತ್ರಿ ಸರಕಾರ ಗಂಭೀರ ಚಿಂತನೆ ನಡೆಸುತ್ತಿಲ್ಲ. ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಮಾಡಬೇಕೆಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ