ಆ್ಯಪ್ನಗರ

ರಾಮನಗರದಲ್ಲಿ ಆರ್‌ಎಸ್‌ಎಸ್‌‌ ನಾಯಕರೊಂದಿಗೆ ಯೋಗೇಶ್ವರ್‌ ರಹಸ್ಯ ಚರ್ಚೆ..!

ಸಣ್ಣ ನೀರಾವರಿ ಸಚಿವ ಸಿಪಿ ಯೋಗೇಶ್ವರ್‌ ರಾಮನಗರದಲ್ಲಿ ಆರ್‌ಎಸ್‌ಎಸ್‌ ನಾಯಕರೊಂದಿಗೆ ರಹಸ್ಯ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಭಾನುವಾರ ಆರ್‌ಎಸ್‌ಎಸ್‌ ಕಚೇರಿಗೆ ಹಠಾತ್‌ ಭೇಟಿ ನೀಡಿ ಚರ್ಚೆ ನಡೆಸಿದರು.

Vijaya Karnataka Web 24 Jan 2021, 7:06 pm
ರಾಮನಗರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿಗೆ ಭಾನುವಾರ ಸಂಜೆ ಹಠಾತ್‌ ಭೇಟಿ ನೀಡಿದ ಸಣ್ಣ ನೀರಾವರಿ ಸಚಿವ ಸಿ.ಪಿ.ಯೋಗೇಶ್ವರ್‌, ಸಂಘದ ಸ್ಥಳೀಯ ಮುಖಂಡರ ಜತೆ ರಹಸ್ಯ ಚರ್ಚೆ ನಡೆಸಿದರು.
Vijaya Karnataka Web CP Yogeshwar
ಸಿಪಿ ಯೋಗೇಶ್ವರ್‌, ಸಚಿವ (ಸಂಗ್ರಹ ಚಿತ್ರ)


ಚನ್ನಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಸಚಿವರು ಸಂಘದ ಕಚೇರಿಗೆ ಭೇಟಿ ನೀಡಿದ್ದರು. ಸಂಘದ ಪ್ರಮುಖರೊಂದಿಗೆ ಮಾತನಾಡಿದ್ದಾರೆ, ಸಚಿವರು ಮತ್ತು ಪ್ರಮುಖರ ನಡುವಿನ ಮಾತುಕತೆಯ ವೇಳೆ ಯಾರಿಗೂ ಪ್ರವೇಶವಿರಲಿಲ್ಲ ಎಂದಷ್ಟೇ ಕಾರ್ಯಕರ್ತರು ಹೇಳಿದ್ದಾರೆ.

ಯಾವ ವಿಚಾರಕ್ಕೆ ಸಚಿವರು ಭೇಟಿ ನೀಡಿದ್ದರು ಎಂದು ಸುದ್ದಿಗಾರರ ಪ್ರಶ್ನೆಗೆ, ಆರ್‌ಎಸ್‌ಎಸ್‌‌ ಪ್ರಮುಖರಾಗಲೀ, ಬಿಜೆಪಿ ಮುಖಂಡರಾಗಲೀ ತುಟಿ ಬಿಚ್ಚಲಿಲ್ಲ. ಸಂಘದ ಜಿಲ್ಲೆಯ ಪ್ರಮುಖರೇ ಸಚಿವರನ್ನು ಬರಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.
ಜ.26ರಂದು ನೈಸ್‌ ರಸ್ತೆಯಿಂದ ಫ್ರೀಡಂ ಪಾರ್ಕ್‌ವರೆಗೆ ರೈತರ ಪರೇಡ್‌: ಕೋಡಿಹಳ್ಳಿ ಚಂದ್ರಶೇಖರ್‌ಸದ್ಯ ಸ್ಥಳೀಯ ಆರ್‌ಎಸ್‌ಎಸ್‌ ನಾಯಕರು, ಆಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದಾರೆ. ಅಭಿಯಾನಕ್ಕೆ ಇನ್ನಷ್ಟು ವೇಗ ಕಲ್ಪಿಸುವ ವಿಚಾರದಲ್ಲಿ ಅವರನ್ನು ಕರೆಸಿಕೊಳ್ಳಲಾಗಿದೆ ಎಂಬ ಮಾತು ಕೇಳಿ ಬಂದಿದೆ.
ಸಮ್ಮಿಶ್ರ ಸರಕಾರ ಪತನಕ್ಕೆ ಯೋಗೀಶ್ವರ್‌ 9 ಕೋಟಿ ಸಾಲ, ಎಸಿಬಿ ತನಿಖೆಗೆ ಕಾಂಗ್ರೆಸ್‌ ಆಗ್ರಹಇನ್ನು, ಕೆಲ ದಿನಗಳ ಹಿಂದಷ್ಟೇ ಸಿಪಿ ಯೋಗೇಶ್ವರ್‌ ಅವರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಖಾತೆ ಹಂಚಿಕೆಯಲ್ಲಿ ಸಣ್ಣ ನೀರಾವರಿ ಖಾತೆ ಪಡೆದಿದ್ದರು. ರಾಮನಗರದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಈ ವಿಚಾರವಾಗಿ ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ