ಆ್ಯಪ್ನಗರ

ಬಾಲಕಿ ಜತೆ ಅನುಚಿತ ವರ್ತನೆ: ಶಿಕ್ಷಕ ಅಮಾನತು

ಶಿಕ್ಷಕ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ನೊಂದ ಬಾಲಕಿ ಪಾಲಕರಿಗೆ ದೂರು ನೀಡಿದ್ದಳು. ಈ ಹಿನ್ನಲೆಯಲ್ಲಿ ಗ್ರಾಮಸ್ಥರು ಮತ್ತು ನೊಂದ ಬಾಲಕಿ ಬಿಇಓ ಕಚೇರಿಗೆ ದೂರು ನೀಡಿದ್ದರು.

Vijaya Karnataka Web 16 Mar 2019, 5:46 pm
ರಾಮನಗರ: ಶಾಲಾ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಅಮಾನತ್ತುಗೊಳಿಸಲಾಗಿದೆ.
Vijaya Karnataka Web miss


ತಾಲೂಕಿನ ಕಗ್ಗಲಹಳ್ಳಿ ಗ್ರಾಮದ ಪ್ರಾಥಮಿಕ ಶಾಲೆಯ ರಾಜಶೇಖರಯ್ಯ ಅಮಾನತ್ತುಗೊಂಡ ಶಿಕ್ಷಕ.

ಶಿಕ್ಷಕ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ನೊಂದ ಬಾಲಕಿ ಪಾಲಕರಿಗೆ ದೂರು ನೀಡಿದ್ದಳು. ಈ ಹಿನ್ನಲೆಯಲ್ಲಿ ಗ್ರಾಮಸ್ಥರು ಮತ್ತು ನೊಂದ ಬಾಲಕಿ ಬಿಇಓ ಕಚೇರಿಗೆ ದೂರು ನೀಡಿದ್ದರು.

ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಕ್ಷೇತ್ರ ಶಿಕ್ಷಣಾಕಾರಿ ಮರಿಸ್ವಾಮಿ, ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷರ ರಾಜಶೇಖರಯ್ಯ ಅವರನ್ನು ಶನಿವಾರ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ