ಆ್ಯಪ್ನಗರ

ಒಂದು ಚುನಾವಣೆ ಗೆದ್ದು ಕೆಲಸ ಮಾಡಲಿ ಗೊತ್ತಾಗುತ್ತೆ: ಮಾಧ್ಯಮದವರ ಮೇಲೆ ಶಾಸಕಿ ಅನಿತಾ ಗರಂ

ಕೆಲಸಕ್ಕೆ ಬಾರದ ತಲೆಹರಟೆ ಪ್ರಶ್ನೆಗಳನ್ನ ಕೇಳಬೇಡಿ. ನೀವು ಕ್ರೆಡಿಬಲಿಟಿ ಉಳಿಸಿಕೊಳ್ಳಬೇಕು. ಇತ್ತೀಚೆಗೆ ಎಲೆಕ್ಟ್ರಾನಿಕ್ ಮೀಡಿಯಾ ಹಾಳಾಗಿದೆ. ನಿಮ್ಮ ಬಗ್ಗೆ ಬಹಳ ಬೇಸರವಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಗರಂ ಆದರು.

Vijaya Karnataka Web 6 Jun 2019, 5:24 pm
ರಾಮನಗರ: ಮುಖ್ಯಮಂತ್ರಿ ಗ್ರಾಮ ವಾಸ್ತವ್ಯದಿಂದ ಬದಲಾವಣೆ ನಿರೀಕ್ಷಿಸಲಾಗುತ್ತಿದೆ. ಈ ಹಿಂದೆ ಗ್ರಾಮ ವಾಸ್ತವ್ಯ ಮಾಡಿದ್ದರೂ ಕೆಲವೊಂದು ಕೆಲಸ ಆಗಿರಲಿಲ್ಲ. ಆದರೆ ಬಹುತೇಕ ಕಾರ್ಯಗಳು ಆಗಿವೆ ಎಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ.
Vijaya Karnataka Web ಅನಿತಾ ಕುಮಾರಸ್ವಾಮಿ
ಅನಿತಾ ಕುಮಾರಸ್ವಾಮಿ


ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಅನಿತಾ ಕುಮಾರಸ್ವಾಮಿ ಮಾತನಾಡಿದರು.

ಬಹುತೇಕ ಎಲ್ಲ ಕೆಲಸವನ್ನು ಮುಖ್ಯಮಂತ್ರಿ ಮಾಡಿಕೊಟ್ಟಿದ್ದಾರೆ. ಆದರೂ ಮಾಧ್ಯಮದವರು ಪ್ರತಿಯೊಂದರಲ್ಲೂ ತಪ್ಪು ಹುಡುಕುವ, ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ನೀವು ಮಾಧ್ಯಮದವರು ಒಂದು ಗ್ರಾಪಂ ಚುನಾವಣೆ ಗೆದ್ದು ಕೆಲಸ ಮಾಡಿ ಗೊತ್ತಾಗುತ್ತೆ. ನಿಮಗೂ ಕೂಡ ಕಷ್ಟ ಗೊತ್ತಾಗುತ್ತೆ. ನೀವು ಹೊರಗಡೆ ಕುಳಿತು ತಪ್ಪು ಹುಡುಕುತ್ತೀರಿ. ಹಂತ ಹಂತವಾಗಿ ಕ್ಷೇತ್ರದ ಅಭಿವೃದ್ಧಿ ಮಾಡ್ತೀವಿ. ಅಧಿಕಾರಿಗಳು ನಮಗೆ ಸಹಕಾರ ನೀಡ್ತೀದ್ದಾರೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದರು.

ರಾಮನಗರದಲ್ಲಿ ಮಾಧ್ಯಮದವರ ಮೇಲೆ‌ ಶಾಸಕಿ ಅನಿತಾ ಕುಮಾರಸ್ವಾಮಿ ಗರಂ ಆದರು. ಲೋಕಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ಮಾಡಿದ ಅನಿತಾ ಕುಮಾರಸ್ವಾಮಿ ರಾಮನಗರದ ಶಾಸಕರ ಕಚೇರಿಗೆ ಬಂದಿದ್ದ ಅನಿತಾ ಕುಮಾರಸ್ವಾಮಿ ಈ ವೇಳೆಯಲ್ಲಿ ಎಲೆಕ್ಟ್ರಾನಿಕ್ ಮೀಡಿಯಾ ಪ್ರತಿನಿಧಿಗಳ ಮೇಲೆ ಗರಂ ಆದರು.

ಯಾವುದೋ ಕೆಲಸಕ್ಕೆ ಬಾರದ ತಲೆಹರಟೆ ಪ್ರಶ್ನೆಗಳನ್ನ ಕೇಳಬೇಡಿ. ನೀವು ಕ್ರೆಡಿಬಲಿಟಿ ಉಳಿಸಿಕೊಳ್ಳಬೇಕು. ಇತ್ತೀಚೆಗೆ ಎಲೆಕ್ಟ್ರಾನಿಕ್ ಮೀಡಿಯಾ ಹಾಳಾಗಿದೆ. ನಿಮ್ಮ ಬಗ್ಗೆ ಬಹಳ ಬೇಸರವಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಗರಂ ಆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ