ಆ್ಯಪ್ನಗರ

ರಾಮನಗರ: ಜೈಲಿಗೆ ತೆರಳಿ ಮಾಸ್ಕ್‌, ಸ್ಯಾನಿಟೈಸರ್‌ ವಿತರಿಸಿದ್ದ 15ಕ್ಕೂ ಹೆಚ್ಚು ನಗರಸಭೆ ಸಿಬ್ಬಂದಿ ತಪಾಸಣೆ

ರಾಮನಗರ ನಗರಸಭೆ ಸಿಬ್ಬಂದಿಗಳನ್ನು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆಗೊಳಪಡಿಸಲಾಯಿತು. ಸಿಬ್ಬಂದಿಗಳ ಥ್ರೋಟ್ ಸ್ವ್ಯಾಬ್ ಹಾಗೂ ರಕ್ತದ ಮಾದರಿ ಸಂಗ್ರಹವನ್ನು ಪಡೆದು ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.

Vijaya Karnataka Web 24 Apr 2020, 2:21 pm
ರಾಮನಗರ: ಪಾದರಾಯನಪುರದ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಾಮನಗರದ 15ಕ್ಕೂ ಹೆಚ್ಚು ನಗರಸಭೆ ಸಿಬ್ಬಂದಿಗಳನ್ನು ತಪಾಸಣೆಗೊಳಪಡಿಸಲಾಯಿತು.
Vijaya Karnataka Web ಸಂಗ್ರಹ ಚಿತ್ರ
ಸಂಗ್ರಹ ಚಿತ್ರ


ರಾಮನಗರ ನಗರಸಭೆ ಸಿಬ್ಬಂದಿಗಳನ್ನು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆಗೊಳಪಡಿಸಲಾಯಿತು. ಸಿಬ್ಬಂದಿಗಳ ಥ್ರೋಟ್ ಸ್ವ್ಯಾಬ್ ಹಾಗೂ ರಕ್ತದ ಮಾದರಿ ಸಂಗ್ರಹವನ್ನು ಪಡೆದು ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.

ಇವರು ಗುರುವಾರ ರಾಮನಗರ ಜೈಲಿಗೆ ಹೋಗಿದ್ದರು ಎಂದು ತಿಳಿದುಬಂದಿದೆ. ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಲು ಜೈಲಿನ ಆವರಣಕ್ಕೆ ತೆರಳಿದ್ದರು.

ನಗರಸಭೆ ಪೌರಕಾರ್ಮಿಕರು ಒಳಭಾಗಕ್ಕೆ ಹೋಗಿ ಸೋಂಕು ನಿವಾರಕವನ್ನು ದ್ರಾವಣ ಸಿಂಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ 5 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ