ಆ್ಯಪ್ನಗರ

ವಸತಿ ನಿಲಯಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಭೇಟಿ

ತಾಲೂಕಿನ ಕೈಲಾಂಚ ಗ್ರಾಮದ ಡಾ ಬಿಆರ್‌ ಅಂಬೇಡ್ಕರ್‌ ವಸತಿ ನಿಲಯಕ್ಕೆ ಶಾಸಕಿ ಅನಿತಾಕುಮಾರಸ್ವಾಮಿ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು...

Vijaya Karnataka 31 Aug 2019, 5:00 am
ರಾಮನಗರ: ತಾಲೂಕಿನ ಕೈಲಾಂಚ ಗ್ರಾಮದ ಡಾ. ಬಿ.ಆರ್‌. ಅಂಬೇಡ್ಕರ್‌ ವಸತಿ ನಿಲಯಕ್ಕೆ ಶಾಸಕಿ ಅನಿತಾಕುಮಾರಸ್ವಾಮಿ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ಸ್ಥಳೀಯ ಮುಖಂಡರು, ಅಧಿಕಾರಿಗಳೊಂದಿಗೆ ಆಗಮಿಸಿದ ಶಾಸಕಿ ಅನಿತಾಕುಮಾರಸ್ವಾಮಿ ಅವರು ವಸತಿ ನಿಲಯ ವೀಕ್ಷಿಸಿ ಮಕ್ಕಳು ಎದುರಿಸುತ್ತಿರುವ ಅಲ್ಲಿನ ಸಮಸ್ಯೆಗಳನ್ನು ಮಕ್ಕಳಿಂದಲೇ ಮಾಹಿತಿ ಪಡೆದರು.
Vijaya Karnataka Web mysore anita kumaraswamy visits the hostel
ವಸತಿ ನಿಲಯಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಭೇಟಿ


ವೈದ್ಯಾಧಿಕಾರಿಗಳು, ನಿಲಯ ಮೇಲ್ವೀಚಾರಕರು, ಉಪಭಾಗಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಮುಂದೆ ಈ ರೀತಿಯ ಸಮಸ್ಯೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಕೂಡಲೇ ಮಕ್ಕಳನ್ನು ಬೇರೆ ಕಡೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಅವರ ಆರೋಗ್ಯ ಕಾಪಾಡಬೇಕಾಗಿದ್ದು ಇಲಾಖೆ ಕರ್ತವ್ಯ. ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಶುಚಿತ್ವದ ಕಡೆ ಗಮನ, ಶುದ್ದ ಆಹಾರ ನೀಡಬೇಕು ಮುಂದೆ ಇಂತಹ ಸಮಸ್ಯೆಗಳು ಉಲ್ಬಣಿಸದಂತೆ ಎಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮಾತನಾಡಿದ ಶಾಸಕಿ ಅನಿತಾಕುಮಾರಸ್ವಾಮಿ, ''ಮಕ್ಕಳ ಮನಸ್ಥಿತಿ ಅರಿತು ಸಿಬ್ಬಂದಿಗಳು ಕೆಲಸ ನಿರ್ವಹಿಸಬೇಕು. ಪ್ರೀತಿಯಿಂದ ಮಾತನಾಡಿಸಿ ಮಕ್ಕಳ ಮನಗೆಲ್ಲಲು ಮುಂದಾಗಬೇಕು. ಈಗಾಗಲೇ ಕಳೆದ ಮೂರು ದಿನಗಳಿಂದಲೂ ವೈದ್ಯಾಧಿಕಾರಿಗಳು ಸ್ಥಳದಲ್ಲೇ ಇದ್ದು ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಔಷಧೋಪಚಾರ ಮಾಡಿದ್ದಾರೆ. ಮಕ್ಕಳು ಈಗ ಗುಣಮುಖರಾಗುತ್ತಿದ್ದು ರೋಗ ಹತೋಟಿಗೆ ಬಂದಿದೆ,'' ಎಂದು ತಿಳಿಸಿದರು.

ತಾಲೂಕು ಜೆಡಿಎಸ್‌ ಅಧ್ಯಕ್ಷ ರಾಜಶೇಖರ್‌, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಿ. ಅಶ್ವಥ್‌, ಗ್ರಾಪಂ ಅಧ್ಯಕ್ಷ ಆರ್‌. ಪಾಂಡುರಂಗ, ಉಪಭಾಗಾಧಿಕಾರಿ ಕೃಷ್ಣಮೂರ್ತಿ, ಡಿಎಚ್‌ಒ ಡಾ. ಅಮರ್‌ನಾಥ್‌, ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಚನ್ನಬಸಪ್ಪ, ಉಪ ತಹಸೀಲ್ದಾರ್‌ ವಿಲಿಯಂ, ವೈದ್ಯೆ ಡಾ. ಉಮಾ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ