ಆ್ಯಪ್ನಗರ

ನಿತ್ಯಾನಂದ ರಾಸಲೀಲೆ ಪ್ರಕರಣ: ವಿಚಾರಣೆ ತಿಂಗಳು ಮುಂದಕ್ಕೆ

ನಿತ್ಯಾನಂದ ರಾಸಲೀಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣೆಯನ್ನು ಮತ್ತೆ ಒಂದು ತಿಂಗಳ ಕಾಲ ಮುಂದೂಡಿ, ರಾಮನಗರ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ.

Vijaya Karnataka Web 27 Sep 2018, 5:45 pm
ರಾಮನಗರ: ನಿತ್ಯಾನಂದ ರಾಸಲೀಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣೆಯನ್ನು ಮತ್ತೆ ಒಂದು ತಿಂಗಳ ಕಾಲ ಮುಂದೂಡಿ, ರಾಮನಗರ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ.
Vijaya Karnataka Web nityananada


ಸರಕಾರಿ ಪರ ವಕೀಲ ವಡವಡಗಿ, ವಿಚಾರಣೆಯನ್ನು ಅ.11ಕ್ಕೆ ಮುಂದೂಡಲಾಗಿದೆ. ಇಂದು ನಡೆಯಬೇಕಿದ್ದ ವಿಚಾರಣೆ ನಡೆಯಬೇಕಿತ್ತಾದರೂ, 6 ಮಂದಿ ಆರೋಪಿಗಳ ಪೈಕಿ ಯಾರೊಬ್ಬರೂ ಕೋರ್ಟ್‌ಗೆ ಹಾಜರಾಗದೇ ಇದ್ದುದರಿಂದ ವಿಚಾರಣೆ ಮುಂದೂಡಲಾಗಿದೆ ಎಂದು ಹೇಳಿದ್ದಾರೆ.

ಕಳೆದ ಮೂರು ವಿಚಾರಣೆಗೆ ನಿತ್ಯಾನಂದ ಹಾಜರಾಗದ ಹಿನ್ನೆಲೆ ಜಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಇದನ್ನು ನಿತ್ಯಾನಂದ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್‌ ಇಂದು ವಿಚಾರಣೆ ನಡೆಸುವಂತೆ ಆದೇಶ ನೀಡಿತ್ತು. ಆರೋಪಿಗಳು ಹಾಜರಾಗದ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ ಎಂದು ಅವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ