ಆ್ಯಪ್ನಗರ

ಸೋಮವಾರದಿಂದ ಅಧಿಕೃತ ಪ್ರಚಾರ: ಅನಿತಾ ಕುಮಾರಸ್ವಾಮಿ

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷ ದಲ್ಲಿ ಯಾವುದೇ ಅಸಮಾಧಾನವಿಲ್ಲ. ಎಲ್ಲವೂ ಸರಿ ಹೋಗಿದೆ. ಚುನಾವಣಾ ಪ್ರಚಾರಕ್ಕೆ ಸಚಿವ ಡಿಕೆ ಶಿವಕುಮಾರ್‌, ಮುಖ್ಯಮಂತ್ರಿ ಕುಮಾರಸ್ವಾಮಿ ಜಂಟಿಯಾಗಿ ಭಾಗವಹಿಸಲಿದ್ದಾರೆ ಎಂದು ಉಪಚುನಾವಣೆಯ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಹೇಳಿದರು.

Vijaya Karnataka 21 Oct 2018, 3:22 pm
ರಾಮನಗರ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷ ದಲ್ಲಿ ಯಾವುದೇ ಅಸಮಾಧಾನವಿಲ್ಲ. ಎಲ್ಲವೂ ಸರಿ ಹೋಗಿದೆ. ಚುನಾವಣಾ ಪ್ರಚಾರಕ್ಕೆ ಸಚಿವ ಡಿಕೆ ಶಿವಕುಮಾರ್‌, ಮುಖ್ಯಮಂತ್ರಿ ಕುಮಾರಸ್ವಾಮಿ ಜಂಟಿಯಾಗಿ ಭಾಗವಹಿಸಲಿದ್ದಾರೆ ಎಂದು ಉಪಚುನಾವಣೆಯ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಹೇಳಿದರು.
Vijaya Karnataka Web official campaign from monday anita kumaraswamy
ಸೋಮವಾರದಿಂದ ಅಧಿಕೃತ ಪ್ರಚಾರ: ಅನಿತಾ ಕುಮಾರಸ್ವಾಮಿ


ರಾಮನಗರದ ಹೊರವಲಯದ ಹಿಲ್‌ ವ್ಯೂ ರೆಸಾರ್ಟ್‌ನಲ್ಲಿ ರಾಮನಗರ ನಗರ ವಾರ್ಡ್‌ ಮಟ್ಟದ ಜೆಡಿಎಸ್‌ ಮುಖಂಡರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

31 ವಾರ್ಡ್‌ಗಳ ಮುಖ್ಯಸ್ಥರು ಭಾಗಿ: ''ಉಪಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆಯ ತಯಾರಿ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಲೆಂದು ಸ್ಥಳೀಯ ಮುಖಂಡರ ಸಭೆ ಕರೆಯಲಾಗಿತ್ತು. ನಗರಸಭೆ ವ್ಯಾಪ್ತಿಯ 31 ವಾರ್ಡ್‌ಗಳಿಂದ ಪ್ರಮುಖರನ್ನು ಕರೆದು ಚರ್ಚಿಸಲಾಗಿದೆ. ಮನೆ ಮನೆ ಭೇಟಿ ನೀಡಿ ಮೈತ್ರಿ ಸರಕಾರದ ಸಾಧನೆಗಳು ಮತ್ತು ಕುಮಾರಸ್ವಾಮಿಯವರು ಕ್ಷೇತ್ರದ ಬಗ್ಗೆ ಹೊಂದಿರುವ ಕಾಳಜಿಯನ್ನು ಮತದಾರರಿಗೆ ತಿಳಿಸುವಂತೆ ಕೋರಲಾಗಿದೆ,'' ಎಂದರು.

ಹಲವು ಯೋಜನೆಗಳಿಗೆ ಬೆಂಬಲ: ''ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಈಗಾಗಲೇ ಘೋಷಿಸಿರುವ ಪ್ರತಿ ಗ್ರಾಮದ ಪ್ರತಿ ಮನೆಗೂ ಕಾವೇರಿ ನೀರು ನೀಡುವ ಯೋಜನೆ, ಬಡವರಿಗೆ ಮನೆ ಹಂಚುವ ಯೋಜನೆಗಳ ಬಗ್ಗೆ ತಿಳಿಸುವಂತೆ ಕೋರಲಾಗಿದೆ. ರಾಮನಗರವನ್ನು ಜಿಲ್ಲೆಯಾಗಿ ಘೋಷಿಸಿದ ಬಳಿಕ ನಡೆದಿರುವ ಅಭಿವೃದ್ಧಿ ಕಾರ್ಯಗಳು, ಜಿಲ್ಲಾ ಕೇಂದ್ರವಾಗಿರುವ ರಾಮನಗರವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳ ಅನುಷ್ಠಾನಕ್ಕೆ ಜನತೆ ಬೆಂಬಲ ನೀಡಬೇಕೆಂದು ವಿನಂತಿಸುವಂತೆ ತಿಳಿಸಲಾಗಿದೆ,'' ಎಂದರು.

ಹೆಚ್ಚಿನ ಮತ ಭರವಸೆ:
''ಮೇ ವಿಧಾನಸಭಾ ಚುನಾವಣೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಕಡಿಮೆ ಮತಗಳು ದೊರೆತಿದ್ದು ನಿಜ. ಆದರೆ ಈ ಬಾರಿ ಹಾಗಾಗದು ಎಂಬ ವಿಶ್ವಾಸವಿದೆ. ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಬೆಂಬಲಿಸಲಿದ್ದಾರೆ,'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

''ಸಭೆಯಲ್ಲಿ ಮುಖಂಡರು ವಾರ್ಡ್‌ ವ್ಯಾಪ್ತಿಯ ಸಮಸ್ಯೆಗಳನ್ನು ಸಹ ವ್ಯಕ್ತಪಡಿಸಿದ್ದು, ಮುಖಂಡರು ಹೇಳಿರುವ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು,'' ಎಂದರು.

ಕಾಂಗ್ರೆಸ್‌ನೊಂದಿಗೆ ಸಭೆ: ಭಾನುವಾರ ಮೈತ್ರಿ ಪಕ್ಷ ವಾಗಿರುವ ಕಾಂಗ್ರೆಸ್‌ ಮುಖಂಡರೊಂದಿಗೆ ಸಭೆ ನಡೆಸಲಾಗುತ್ತದೆ. ಸೋಮವಾರದಿಂದ ಅಧಿಕೃತವಾಗಿ ಪ್ರಚಾರ ಆರಂಭವಾಗಲಿದೆ. ಪ್ರಚಾರದಲ್ಲಿ ಸಚಿವ ಡಿಕೆ ಶಿವಕುಮಾರ್‌, ಸಂಸದ ಡಿಕೆ ಸುರೇಶ್‌, ವಿಧಾನಪರಿಷತ್‌ ಸದಸ್ಯ ಸಿಎಂ ಲಿಂಗಪ್ಪ ಸಹ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮಾಧ್ಯಮಗಳಿಗೆ ಪ್ರವೇಶವಿಲ್ಲ: ಭಾನುವಾರ ನಡೆಯಲಿರುವ ಕಾಂಗ್ರೆಸ್‌ ಮುಖಂಡರೊಂದಿಗೆ ಚರ್ಚೆಯ ಕಾರ್ಯಕ್ರಮಕ್ಕೆ ಮಾಧ್ಯಮಗಳ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಸಭೆಯಲ್ಲಿ ಜೆಡಿಎಸ್‌ ರಾಜ್ಯ ಸಮಿತಿಯ ಬೂತ್‌ ಕಮಿಟಿ ಅಧ್ಯಕ್ಷ ಸುರೇಶ್‌ಬಾಬು, ಜಿಲ್ಲಾಧ್ಯಕ್ಷ ಅಶೋಕ್‌ಕುಮಾರ್‌, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಕೃಷ್ಣಪ್ಪ, ತಾಲೂಕು ಅಧ್ಯಕ್ಷ ರಾಜಶೇಖರ್‌, ರಾಜ್ಯ ವಕ್ತಾರ ಉಮೇಶ್‌ ಮುಂತಾದವರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ