ಆ್ಯಪ್ನಗರ

2ನೇ ದಿನ, ಮೂವರು ಉಮೇದುವಾರಿಕೆ ಸಲ್ಲಿಕೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಬಯಸಿ ಮೂರು ಮಂದಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ...

Vijaya Karnataka 21 Mar 2019, 5:00 am
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಬಯಸಿ ಮೂರು ಮಂದಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
Vijaya Karnataka Web on the 2nd day three are candid candidates
2ನೇ ದಿನ, ಮೂವರು ಉಮೇದುವಾರಿಕೆ ಸಲ್ಲಿಕೆ


ಉತ್ತಮ ಪ್ರಜಾಕೀಯ ಪಕ್ಷದ ಇಬ್ಬರು ಹಾಗೂ ಕನ್ನಡ ಚಳವಳಿ ಸಂಯುಕ್ತ ರಂಗದ ಒಬ್ಬರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಉತ್ತಮ ಪ್ರಜಾಕೀಯ ಪಕ್ಷದಿಂದ ಬೆಂಗಳೂರು ಮಂಜುನಾಥ್‌ ಹಾಗೂ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿಯ ಬಿ.ಎಂ. ಮಹೇಶ್‌ ಎಂಬುವರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇನ್ನು ಕನ್ನಡ ಚಳವಳಿ ಸಂಯುಕ್ತ ರಂಗದಿಂದ ಬೆಂಗಳೂರಿನ ಕೆ.ಶಿವರಾಮಣ್ಣ ಎಂಬುವವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಎರಡನೇದಿನ: ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಬುಧವಾರ ಎರಡು ಪಕ್ಷದಿಂದ ಮೂವರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಅಬ್ಬರದ ಪ್ರಚಾರ ಇಲ್ಲ: ಮೈತ್ರಿಕೂಟ ಹಾಗೂ ಬಿಜೆಪಿ ಅಭ್ಯರ್ಥಿಗಳು ತಮ್ಮ ಉಮೇದುವರಿಕೆ ಸಲ್ಲಿಸುವಾಗ ಬೃಹತ್‌ ಪ್ರಮಾಣದ ಅಬ್ಬರದ ಪ್ರಚಾರ ನಡೆಸುವುದು ವಾಡಿಕೆ. ಆದರೆ, ಇತರೆ ಪಕ್ಷದ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸುವಾಗ ಯಾವುದೇ ರೀತಿಯ ಅಬ್ಬರದ ಪ್ರಚಾರ ನಡೆಸದೇ ಇರುವುದು ವಿಶೇಷವಾಗಿತ್ತು.

ಇಂದು ಅನುಮಾನ: ಮೈತ್ರಿಕೂಟದ ಅಧಿಕೃತ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್‌ ಅವರ ಹೆಸರು ಪ್ರಕಟಗೊಂಡಿದೆ. ನಾಮಪತ್ರ ಸಲ್ಲಿಕೆ ಕುರಿತು ಯಾವುದೇ ಮಾಹಿತಿ ಲಭ್ಯವಿಲ್ಲ. ಬಲ್ಲ ಮೂಲಗಳ ಪ್ರಕಾರ ಇನ್ನು ಮೂರುದಿನದ ಬಳಿಕ ಸೋಮವಾರ ಅಥವಾ ನಾಮಪತ್ರ ಸಲ್ಲಿಕೆ ಕೊನೆಯ ದಿನ ಮಂಗಳವಾರ ಉಮೇದುವಾರಿಕೆ ಸಲ್ಲಿಸಲಾಗುತ್ತದೆ. ಬಿಜೆಪಿ ಅಭ್ಯರ್ಥಿ ಕುರಿತು ಇನ್ನು ಅಧಿಕೃತ ಪಟ್ಟಿ ಬಿಡುಗಡೆಯಾದ ಕಾರಣ ನಾಮಪತ್ರ ಸಲ್ಲಿಕೆ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ