ಆ್ಯಪ್ನಗರ

ರೆಸಾರ್ಟ್ ಮಾರಾಮಾರಿ: ಶಾಸಕ ಗಣೇಶ್ ಬಂಧನಕ್ಕೆ 4 ತಂಡ

ಈ ತಂಡಗಳು ಶಾಸಕ ಗಣೇಶ್ ಹುಡುಕಾಟದಲ್ಲಿ ನಿರತವಾಗಿದ್ದು, ನಾಲ್ಕು ತಂಡಗಳು ಪ್ರತ್ಯೇಕವಾಗಿ ಹುಡುಕಾಟ ನಡೆಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

Vijaya Karnataka Web 24 Jan 2019, 4:32 pm
ರಾಮನಗರ: ಹೊಸಪೇಟೆ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ಬಂಧನಕ್ಕೆ 4 ತಂಡಗಳನ್ನು ರಚಿಸಲಾಗಿದೆ ಎಂದು ರಾಮನಗರ ಎಸ್‌ಪಿ ರಮೇಶ್ ಬಾನೋತ್ ತಿಳಿಸಿದ್ದಾರೆ.
Vijaya Karnataka Web kampi


ಈ ತಂಡಗಳು ಶಾಸಕ ಗಣೇಶ್ ಹುಡುಕಾಟದಲ್ಲಿ ನಿರತವಾಗಿದ್ದು, ನಾಲ್ಕು ತಂಡಗಳು ಪ್ರತ್ಯೇಕವಾಗಿ ಹುಡುಕಾಟ ನಡೆಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಗಳನ್ನು ಪಡೆಯಲಾಗಿದೆ. ಪ್ರಕರಣ ಸಂಬಂಧ ಯಾವುದೇ ರಾಜಕೀಯ ಒತ್ತಡ ಇಲ್ಲ. ಶಾಸಕ ಗಣೇಶ್ ವಿರುದ್ಧ ರೌಡಿಶೀಟರ್ ತೆರೆಯುವ ಸಂಬಂಧ ಚರ್ಚೆ ನಡೆಯುತ್ತಿದ್ದು, ಬಳ್ಳಾರಿ ಎಸ್.ಪಿ ಕಡೆಯಿಂದ ಪಡೆಯುತ್ತಿದ್ದೇವೆ ಎಂದು ಬಾನೋತ್ ವಿವರಿಸಿದ್ದಾರೆ.

ಬೇಲ್‌ಗಾಗಿ ಕಂಪ್ಲಿ ಶಾಸಕ ಗಣೇಶ್ ಕಸರತ್ತು

ಬಿಡದಿಯ ಈಗಲ್ಟನ್ ರೆಸಾರ್ಟ್‌ ಮಾರಾಮಾರಿ ಪ್ರಕರಣ ಸಂಬಂಧ ಬಂಧನ ಭೀತಿಯನ್ನೆದುರುಸುತ್ತಿರುವ ಕಂಪ್ಲಿ ಶಾಸಕ ಗಣೇಶ್, ನಿರೀಕ್ಷಣಾ ಜಾಮೀನಿಗೆ ಕಸರತ್ತು ನಡೆಸುತ್ತಿದ್ದಾರೆ.

ತಮ್ಮ ವಕೀಲರ ಮೂಲಕ ರಾಮನಗರ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಬೇಲ್ ತೆಗೆದುಕೊಳ್ಳಲು ಶಾಸಕ ಗಣೇಶ್ ಮುಂದಾಗಿದ್ದು, ಇಂದು ಮಧ್ಯಾಹ್ನವೇ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ