ಆ್ಯಪ್ನಗರ

ಉತ್ಸವದಲ್ಲಿ ಕೊಂಡಕ್ಕೆ ಬಿದ್ದ ಅರ್ಚಕ

ರೇವಣ ಸಿದ್ದೇಶ್ವರ ಬೆಟ್ಟದ ರಥೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕೊಂಡೋತ್ಸವದಲ್ಲಿ ಅರ್ಚಕ ವಿಜಯ್ ಕುಮಾರ್ ಆಯ ತಪ್ಪಿ ಕೊಂಡಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

Vijaya Karnataka Web 29 Apr 2018, 9:23 am
ರಾಮನಗರ: ತಾಲೂಕಿನ ರೇವಣ ಸಿದ್ದೇಶ್ವರ ಬೆಟ್ಟದ ರಥೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕೊಂಡೋತ್ಸವದಲ್ಲಿ ಅರ್ಚಕ ವಿಜಯ್ ಕುಮಾರ್ ಆಯ ತಪ್ಪಿ ಕೊಂಡಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
Vijaya Karnataka Web konda


ಅವ್ವೇರಹಳ್ಳಿ ರೇವಣಸಿದ್ದೇಶ್ವರ ಕೊಂಡದಲ್ಲಿ ಈ ಅವಘಡ ನಡೆದಿದೆ. ವಿಜಯ್ ಕುಮಾರ್ ಅವರನ್ನು ರಕ್ಷಿಸಲು ಹೋದ ಇನ್ನಿಬ್ಬರು ಅರ್ಚಕರಾದ ರುದ್ರೇಶ್ ಮತ್ತು ಮಂಜುನಾಥ್‌ಗೂ ಗಾಯವಾಗಿದೆ. ಕೆಲವು ವರ್ಷಗಳಿಂದ ವಿಜಯ್‌ ಕುಮಾರ್‌ ಕೊಂಡ ಹಾಯುತ್ತಿದ್ದರು.

ರಾಮನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಿದ ಬಳಿಕ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಾಮನಗರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ