ಆ್ಯಪ್ನಗರ

ನಿತ್ಯಾನಂದ ವಿರುದ್ಧದ ವಿಚಾರಣೆ ಮುಂದೂಡಿಕೆ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಮತ್ತು ಇತರ ಐವರು ಆರೋಪಿಗಳ ವಿರುದ್ಧದ ವಿಚಾರಣೆಯನ್ನು ಜಿಲ್ಲಾ ಮೂರನೇ ...

Vijaya Karnataka 11 Jan 2019, 5:00 am
ರಾಮನಗರ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಮತ್ತು ಇತರ ಐವರು ಆರೋಪಿಗಳ ವಿರುದ್ಧದ ವಿಚಾರಣೆಯನ್ನು ಜಿಲ್ಲಾ ಮೂರನೇ ಹೆಚ್ಚುವರಿ ಮತ್ತು ಸೆಷಸ್ಸ್‌ ನ್ಯಾಯಾಲಯವು ಜ.17ಕ್ಕೆ ಮುಂದೂಡಿದೆ.
Vijaya Karnataka Web probe into nithyanandas trial
ನಿತ್ಯಾನಂದ ವಿರುದ್ಧದ ವಿಚಾರಣೆ ಮುಂದೂಡಿಕೆ


ನಿತ್ಯಾನಂದ ಸೇರಿದಂತೆ ಪ್ರಕರಣದ ಎರಡನೇ ಆರೋಪಿಯನ್ನು ಹೊರತು ಪಡಿಸಿ, ಇನ್ನುಳಿದ ಐವರು ಆರೋಪಿಗಳು ಗುರುವಾರ ವಿಚಾರಣೆಗೆ ಗೈರಾಗಿದ್ದರು. ಆರೋಪಿಗಳ ವಿರುದ್ಧ ನ್ಯಾಯಾಲಯವು ಹೊರಡಿಸಿರುವ ಜಾಮೀನು ರಹಿತ ವಾರೆಂಟ್‌ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಅಲ್ಲಿ ವಿಚಾರಣೆ ಪೂರ್ಣಗೊಳ್ಳುವವರೆಗೂ ಸ್ಥಳೀಯ ನ್ಯಾಯಾಲಯವು ಯಾವುದೇ ಆದೇಶ ಹೊರಡಿಸಬಾರದು ಎಂದು ಆರೋಪಿ ಪರ ವಕೀಲರು ಮನವಿ ಮಾಡಿದರು.

ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಈ ವಿಚಾರಣೆಗೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ. ಕಳೆದ ಮೂರು ವಿಚಾರಣೆಗಳು ಮುಂದೂಡುತ್ತÜಲೇ ಬಂದಿರುವುದು ವಿಶೇಷ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ