ಆ್ಯಪ್ನಗರ

ಕೆರೆಗಳಿಗೆ ನೀರು ತುಂಬಿಸುವ ಯೋಜನೆ ವಿಸ್ತರಣೆಗೆ ಪ್ರಸ್ತಾವನೆ

ಅಂತರ್ಜಲ ಹೆಚ್ಚಿಸಲು ಜಿಲ್ಲೆಯಲ್ಲಿ ಕೈಗೊಂಡಿರುವ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮಾದರಿಯನ್ನು ದೇಶಾದಾದ್ಯಂತ ವಿಸ್ತರಿಸಲು ಪ್ರಸ್ತಾವನೆ ...

Vijaya Karnataka 16 Jul 2019, 5:00 am
ರಾಮನಗರ: ಅಂತರ್ಜಲ ಹೆಚ್ಚಿಸಲು ಜಿಲ್ಲೆಯಲ್ಲಿ ಕೈಗೊಂಡಿರುವ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮಾದರಿಯನ್ನು ದೇಶಾದಾದ್ಯಂತ ವಿಸ್ತರಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಭಾರತ ಸರಕಾರದ ಜಲಶಕ್ತಿ ಅಭಿಯಾನದ ಜಿಲ್ಲಾ ಉಸ್ತುವಾರಿ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯದ ಆರ್ಥಿಕ ಸಲಹೆಗಾರ್ತಿ ಯೋಗಿತಾ ಸ್ವರೂಪ್‌ ಹೇಳಿದರು.
Vijaya Karnataka Web proposals for expansion of water project for lakes
ಕೆರೆಗಳಿಗೆ ನೀರು ತುಂಬಿಸುವ ಯೋಜನೆ ವಿಸ್ತರಣೆಗೆ ಪ್ರಸ್ತಾವನೆ


ಭಾರತ ಸರಕಾರ ಜಲ ಭದ್ರತೆಗಾಗಿ ಜಲಶಕ್ತಿ ಅಭಿಯಾನವನ್ನು ಜು. 1ರಿಂದ ಸೆಪ್ಟೆಂಬರ್‌ 15ರ ವರೆಗೆ ಮೊದಲ ಹಂತದಲ್ಲಿ ಕೈಗೊಂಡಿದ್ದು, ಈ ಆಂದೋಲನ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಕೇಂದ್ರ ನಿಯೋಗದ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದರು.

''ಪಾರಂಪರಿಕ ಜಲಮೂಲಗಳಾದ ಕೆರೆ, ಬಾವಿ, ನದಿಗಳ ರಕ್ಷಣೆ, ಜಲರಕ್ಷಣೆ, ಜಲ ಮರುಪೂರಣ ಹಾಗೂ ಅರಣ್ಯೀಕರಣ ಮಾಡುವುದು ಜಲಶಕ್ತಿ ಅಭಿಯಾನದ ಪ್ರಮುಖ ಉದ್ದೇಶವಾಗಿದ್ದು, ರಾಮನಗರ ಜಿಲ್ಲೆಯಲ್ಲಿ ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅಂತರ್ಜಲ ಹೆಚ್ಚಿಸಲು ಅತಿಹೆಚ್ಚು ಸಹಕಾರಿಯಾಗಿದೆ,'' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

''ರಾಜ್ಯ ಸರಕಾರ ಜಾರಿಗೊಳಿಸಿರುವ ಜಲಾಮೃತ ಯೋಜನೆಯಡಿ ಕೆರೆಕಟ್ಟೆಗಳಲ್ಲಿರುವ ಹೂಳು ತೆಗೆಸಿ, ಬದುಗಳಲ್ಲಿ ಸಸಿಗಳನ್ನು ನೆಟ್ಟು ಹಸಿರುಕರಣಗೊಳಿಸುವುದು ಹಾಗೂ ಜಲ ಸಾಕ್ಷರತೆ, ಜಲ ಪುನಃಶ್ಚೇತನ, ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಿರುವುದು ಶ್ಲಾಘನೀಯ ಕಾರ‍್ಯ,'' ಎಂದು ಹೇಳಿದರು.

''ಜಿಲ್ಲೆಯಾದ್ಯಂತ ನಿರ್ಮಾಣವಾಗಿರುವ 1716 ಮಲ್ಟಿ ಆರ್ಚ್‌ ಚೆಕ್‌ ಡ್ಯಾಂ, ಕೃಷಿ ಹೊಂಡ ನಿರ್ಮಾಣ, ಕೊಳವೆ ಬಾವಿ ಮರು ಪೂರ್ಣ, ನರೇಗಾ ಮೂಲಕ 256 ಕೆರೆಗಳ ಅಭಿವೃದ್ಧಿ, ಖಾಸಗಿ ಸಂಸ್ಥೆಗಳ ಸಾಮಾಜಿಕ ಸೇವಾ ಯೋಜನೆಯಡಿ ಹೂಳು ತೆಗೆಯುವ ಕಾಮಗಾರಿ ಹಾಗೂ ಅರಣ್ಯೀಕರಣ ಕುರಿತಂತೆ ಮಾಹಿತಿ ಪಡೆದ ಅವರು ಜಲಶಕ್ತಿ ಆಂದೋಲನ ಕುರಿತಂತೆ ಕ್ರಿಯಾಯೋಜನೆ ತಯಾರಿಸಬೇಕು,'' ಎಂದು ತಿಳಿಸಿದರು.

ಕೇಂದ್ರ ಸರಕಾದ ಅಧಿಕಾರಿಗಳ ನಿಯೋಗ ಜಿಲ್ಲೆಯ ಭಾಗಗಳಿಗೆ ಭೇಟಿ ನೀಡಿ ಜಲ ಸಂರಕ್ಷಣೆ ಕುರಿತು ಅನುಷ್ಠಾನಗೊಳಿಸಿರುವ ಕಾಮಗಾರಿಗಳನ್ನು ವೀಕ್ಷಿಸಿತು.

ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ. ಕೆ. ರಾಜೇಂದ್ರ, ಭಾರತ ಸರಕಾರದ ಕೃಷಿ ಸಚಿವಾಲಯದ ಉಪ ಕಾರ್ಯದರ್ಶಿ ರಾಜೇಶ್‌ ಜೈಸ್ವಾಲ್‌, ಜಿಪಂ ಅಧ್ಯಕ್ಷ ಎಂ.ಎನ್‌. ನಾಗರಾಜ್‌, ಉಪಾಧ್ಯಕ್ಷೆ ವೀಣಾ ಕುಮಾರಿ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮುಲ್ಲೈ ಮುಹಿಲನ್‌, ತಾಲೂಕು ಪಂಚಾಯತ್‌ ಅಧ್ಯಕ್ಷ ಗಾಣಕಲ್‌ ನಟರಾಜ್‌ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ