ಆ್ಯಪ್ನಗರ

ರಾಮನಗರ: ನಿಷೇಧಿತ ಕ್ಯಾಟ್‌ ಫಿಶ್ ಸಾಕಣೆ ಅಡ್ಡೆಗೆ ದಾಳಿ

ಬೆಂಗಳೂರಿನ ರಜಾಕ್‌ಪಾಳ್ಯದ ನಜೀರ್ ಎಂಬುವವರು ಜಮೀನನ್ನು ಲೀಸ್‌ಗೆ ಪಡೆದು ಹಲವು ವ್ಯಕ್ತಿಗಳ ಜೊತೆ ಸೇರಿ ಹೊಂಡಗಳನ್ನು ನಿರ್ಮಿಸಿ ಕ್ಯಾಟ್‌ಫಿಶ್‌ಗಳನ್ನು ಸಾಕಾಣಿಕೆ ಮಾಡುತ್ತಿದ್ದರು. ಸ್ಥಳೀಯ ಗ್ರಾಮಸ್ಥರ ದೂರಿನ ಮೇರೆಗೆ ದಾಳಿ ನಡೆಸಿದ ರಾಮನಗರ ತಹಶೀಲ್ದಾರ್ ರಾಜು ಅವರು ಕ್ಯಾಟ್‌ಫಿಶ್ ಅಡ್ಡೆಗಳನ್ನು ತೆರವುಗೊಳಿಸುವಂತೆ, ಅಲ್ಲದೇ ಸಾಕಾಣಿಕೆ ಮಾಡಿರುವ ಕ್ಯಾಟ್‌ಫಿಶ್‌ನ್ನು ನಾಶಗೊಳಿಸುವಂತೆ ಆದೇಶಿಸಿದರು.

Vijaya Karnataka Web 17 May 2019, 7:51 pm
ರಾಮನಗರ: ನಿಷೇಧಿತ ಕ್ಯಾಟ್‌ಫಿಶ್ ಸಾಕಾಣಿಕೆ ಅಡ್ಡೆ ಮೇಲೆ ರಾಮನಗರ ತಹಶಿಲ್ದಾರ್ ರಾಜು ನೇತೃತ್ವದಲ್ಲಿ ಅಧಿಕಾರಗಳ ತಂಡ ದಾಳಿ ನಡೆಸಿರುವ ಘಟನೆ ರಾಮನಗರ ತಾಲೂಕಿನ ಕಂಚುಗಾರನಹಳ್ಳಿಯಲ್ಲಿ ನಡೆದಿದೆ.
Vijaya Karnataka Web catfish


ಕಂಚುಗಾರನಹಳ್ಳಿ ಹೊರವಲಯದ ಎಸ್‌ಪಿಆರ್ ತಿಮ್ಮೇಗೌಡ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಬರೋಬ್ಬರಿ 38 ಹೊಂಡಗಳಲ್ಲಿ ಕ್ಯಾಟ್‌ಫಿಶ್ ಸಾಕಾಣಿಕೆ ಮಾಡಲಾಗುತ್ತಿತ್ತು.

ಬೆಂಗಳೂರಿನ ರಜಾಕ್‌ಪಾಳ್ಯದ ನಜೀರ್ ಎಂಬುವವರು ಜಮೀನನ್ನು ಲೀಸ್‌ಗೆ ಪಡೆದು ಹಲವು ವ್ಯಕ್ತಿಗಳ ಜೊತೆ ಸೇರಿ ಹೊಂಡಗಳನ್ನು ನಿರ್ಮಿಸಿ ಕ್ಯಾಟ್‌ಫಿಶ್‌ಗಳನ್ನು ಸಾಕಾಣಿಕೆ ಮಾಡುತ್ತಿದ್ದರು. ಸ್ಥಳೀಯ ಗ್ರಾಮಸ್ಥರ ದೂರಿನ ಮೇರೆಗೆ ದಾಳಿ ನಡೆಸಿದ ರಾಮನಗರ ತಹಶೀಲ್ದಾರ್ ರಾಜು ಅವರು ಕ್ಯಾಟ್‌ಫಿಶ್ ಅಡ್ಡೆಗಳನ್ನು ತೆರವುಗೊಳಿಸುವಂತೆ, ಅಲ್ಲದೇ ಸಾಕಾಣಿಕೆ ಮಾಡಿರುವ ಕ್ಯಾಟ್‌ಫಿಶ್‌ನ್ನು ನಾಶಗೊಳಿಸುವಂತೆ ಆದೇಶಿಸಿದರು.

ನಂತರ ಜೆಸಿಬಿ ಮೂಲಕ ಹೊಂಡಗಳಿಂದ ನೀರನ್ನು ಹೊರಹಾಕಿ ಕ್ಯಾಟ್‌ಫಿಶ್ ಅಡ್ಡೆ ಹೊಂಡಗಳ ಮೇಲೆ ಮಣ್ಣು ಹಾಕುವಂತಹ ಕಾರ್ಯ ನಡೆಸಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಮೀನನ ಮಾಲೀಕರು ಹಾಗೂ ಕ್ಯಾಟ್‌ಫಿಶ್ ಸಾಕಾಣಿಕೆ ಮಾಡುತ್ತಿದ್ದವರ ಮೇಲೆ ಬಿಡದಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ