ಆ್ಯಪ್ನಗರ

By-Election Results: ರಾಮನಗರ ಮತ ಎಣಿಕೆ ಕೇಂದ್ರಕ್ಕೆ ಬಿಜೆಪಿ ಏಜೆಂಟ್ ಇಲ್ಲ

ಬಿಜೆಪಿ ಎಣಿಕೆ ಏಜೆಂಟರ ನೇಮಕಾತಿ ಪತ್ರಗಳು ಮಾನ್ಯತೆ ಕಳೆದುಕೊಂಡಿದ್ದು ಅವರು ಎಣಿಕೆ ಕೇಂದ್ರದಿಂದ ಹೊರಗುಳಿಯುವಂತಾಗಿದೆ.

Vijaya Karnataka Web 6 Nov 2018, 10:18 am
ರಾಮನಗರ: ಮತ ಎಣಿಕೆ ಏಜೆಂಟರಾಗಿ ಬಿಜೆಪಿ ಕಾರ್ಯಕರ್ತರು ಎಣಿಕೆ ಕೇಂದ್ರವನ್ನು ಪ್ರವೇಶಿಸಲು ಅನುಮತಿ ಇಲ್ಲದಂತಾಗಿದೆ.
Vijaya Karnataka Web bjp kar


ಚುನಾವಣಾ ಕಣದಿಂದ ಹಿಂದೆ ಸರಿದಿದ್ದ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಚುನಾವಣಾಧಿಕಾರಿಗೆ ನಮೂನೆ 9 ನ್ನು ನೀಡಿ ತಮ್ಮ ಅಧಿಕೃತ ಚುನಾವಣಾ ಏಜೆಂಟ್ ಆಗಿದ್ದ ಪದ್ಮನಾಭ್ ರನ್ನು ರದ್ದುಗೊಳಿಸಿರುವುದಾಗಿ ಪತ್ರ ನೀಡಿದ್ದರು.

ತಕ್ಷಣದಿಂದಲೇ ಅಭ್ಯರ್ಥಿಯ ಅಧಿಕೃತ ಏಜೆಂಟ್ ಪದ್ಮನಾಭ್ ರವರ ಸಹಿ ಮಾನ್ಯತೆ ಕಳೆದುಕೊಂಡಿತ್ತು.

ಇದರಿಂದಾಗಿ‌ ನೇಮಕ ಮಾಡಿದ್ದ ಎಲ್ಲ ಬಿಜೆಪಿ ಎಣಿಕೆ ಏಜೆಂಟರ ನೇಮಕಾತಿ ಪತ್ರಗಳು ಮಾನ್ಯತೆ ಕಳೆದುಕೊಂಡಿದ್ದು ಅವರು ಎಣಿಕೆ ಕೇಂದ್ರದಿಂದ ಹೊರಗುಳಿಯುವಂತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ