Please enable javascript.Gowdagere Basavappa,ಗೌಡಗೆರೆಯ ಚಾಮುಂಡೇಶ್ವರಿ ಪುಣ್ಯಕ್ಷೇತ್ರದ ಪವಾಡ ಬಸವಪ್ಪ ಇನ್ನಿಲ್ಲ : ಭಕ್ತರ ಕಷ್ಟಗಳನ್ನು ಪರಿಹರಿಸುವ ದೇವರು - ramanagara : gowdagere basavappa passes away - Vijay Karnataka

ಗೌಡಗೆರೆಯ ಚಾಮುಂಡೇಶ್ವರಿ ಪುಣ್ಯಕ್ಷೇತ್ರದ ಪವಾಡ ಬಸವಪ್ಪ ಇನ್ನಿಲ್ಲ : ಭಕ್ತರ ಕಷ್ಟಗಳನ್ನು ಪರಿಹರಿಸುವ ದೇವರು

Vijaya Karnataka Web 6 Mar 2022, 12:39 pm
Subscribe

ಗೌಡಗೆರೆ ಗ್ರಾಮದ ಪವಾಡ ಬಸವಪ್ಪ ಅಸುನೀಗಿದೆ. ಸುಮಾರು ಇಪ್ಪತ್ತು ವರ್ಷಗಳಿಂದ ಭಕ್ತರ ಕೋರಿಕೆ, ಕಷ್ಟಗಳನ್ನು ಚಾಮುಂಡೇಶ್ವರಿ ಪುಣ್ಯಕ್ಷೇತ್ರದ ಬಸವಪ್ಪ ನಿವಾರಣೆ ಮಾಡುತ್ತಿತ್ತು. ಇದೀಗ ಬಸವಪ್ಪನ ನಿಧನಕ್ಕೆ ಭಕ್ತರು ಕಣ್ಣೀರು ಹಾಕುತ್ತಿದ್ದಾರೆ.

ಹೈಲೈಟ್ಸ್‌:

  • ಗೌಡಗೆರೆಯ ಚಾಮುಂಡೇಶ್ವರಿ ಪುಣ್ಯಕ್ಷೇತ್ರದ ಪವಾಡ ಬಸವಪ್ಪ ಇನ್ನಿಲ್ಲ
  • ಭಕ್ತರ ಕಷ್ಟಗಳನ್ನು ಪರಿಹರಿಸುವ ನಡೆದಾಡುವ ದೇವರು ಎಂದೇ ಖ್ಯಾತಿ
  • ಸುಮಾರು ಇಪ್ಪತ್ತು ವರ್ಷಗಳಿಂದ ಭಕ್ತರ ಕೋರಿಕೆ ಈಡೇರಿಸವ ಬಸವಪ್ಪ

0b6c21dd-2fab-411d-a79d-9d56a29aec6d
ರಾಮನಗರ : ಗೌಡಗೆರೆ ಗ್ರಾಮದ ಪವಾಡ ಬಸವಪ್ಪ ಇನ್ನಿಲ್ಲ. ಹೌದು, ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಪುಣ್ಯಕ್ಷೇತ್ರದಲ್ಲಿ ನೆಲೆಸಿದ್ದ ಬಸವಪ್ಪ ಸಾವನಪ್ಪಿದೆ. ಸುಮಾರು ಇಪ್ಪತ್ತು ವರ್ಷಗಳಿಂದ ಭಕ್ತರ ಕೋರಿಕೆ, ಕಷ್ಟಗಳನ್ನು ಚಾಮುಂಡೇಶ್ವರಿ ಪುಣ್ಯಕ್ಷೇತ್ರದ ಬಸವಪ್ಪ ನಿವಾರಣೆ ಮಾಡುತ್ತಿತ್ತು.
ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಸವಪ್ಪನ ಆಶೀರ್ವಾದ ಪಡೆಯಲು ರಾಜ್ಯದ ನಾನಾಭಾಗಗಳಿಂದ ಬರುತ್ತಿದ್ದರು. ವ್ಯಾಜ್ಯಗಳನ್ನು ಪರಿಹರಿಸುವಲ್ಲಿ ಎತ್ತಿದ ಕೈಯಾಗಿದ್ದ ಈ ಬಸವಪ್ಪ ನಡೆದಾಡುವ ದೇವರೆಂದೆ ಹೆಸರುವಾಸಿಯಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಸವಪ್ಪ ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಇಹಲೋಹ ತ್ಯಜಿಸಿದೆ.

ಇಡೀ ವಿಶ್ವದಲ್ಲೇ ಅತೀ ಎತ್ತರದ ಚಾಮುಂಡೇಶ್ವರಿ ವಿಗ್ರಹ ಪ್ರತಿಷ್ಠಾಪಿಸಿರುವ ಸ್ಥಳ ಎಂದು ಗೌಡಗೆರೆ ಕ್ಷೇತ್ರ ಹೆಸರುವಾಸಿಯಾಗಿದೆ. ಈ ಕ್ಷೇತ್ರದ ಮುಕುಟಮಣಿಯಂತೆ ಬಸವಪ್ಪ ಇತ್ತು. ದೇವಾಲಯದ ಧರ್ಮದರ್ಶಿ ಡಾ. ಮಲ್ಲೇಶ್ ಗುರೂಜಿ ನೇತೃತ್ವದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ದತೆ ನಡೆದಿದ್ದು, ಬಸವಪ್ಪನ ಅಂತಿಮ ದರ್ಶನ ಪಡೆಯಲು ಕ್ಷೇತ್ರಕ್ಕೆ ಭಕ್ತರ ದಂಡೆ ಆಗಮಿಸುತ್ತಿದೆ.

ಮಂಡ್ಯ: ಆ. 8ಕ್ಕೆ ಗೌಡಗೆರೆಯಲ್ಲಿ 66 ಅಡಿ ಎತ್ತರದ ಚಾಮುಂಡೇಶ್ವರಿ ಪ್ರತಿಮೆ ಲೋಕಾರ್ಪಣೆ

ದೇವಾಲಯದ ಆವರಣದಲ್ಲೇ ಸೋಮವಾರ ಮಧ್ಯಾಹ್ನದ ವೇಳೆ ಪವಾಡ ಪುರುಷ ಬಸವಪ್ಪನ ಅಂತ್ಯ ಸಂಸ್ಕಾರ ನಡೆಯಲಿದೆ. ಭಕ್ತರ ಕೋರಿಕೆ, ಕಷ್ಟಗಳನ್ನು ನಿವಾರಣೆ ಮಾಡುತ್ತಿದ್ದ ಚಾಮುಂಡೇಶ್ವರಿ ಪುಣ್ಯಕ್ಷೇತ್ರದ ಬಸವಪ್ಪನ ನಿಧನಕ್ಕೆ ಭಕ್ತರು ಕಣ್ಣೀರು ಹಾಕುತ್ತಿದ್ದಾರೆ.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ