ಆ್ಯಪ್ನಗರ

ಸಿಇಟಿ ಪ್ರವೇಶಕ್ಕೆ ದಾಖಲಾತಿ ಪರಿಶೀಲನೆ

ವಿವಿಧ ಕೋರ್ಸ್‌ಗಳಿಗೆ ಸೀಟು ಆಯ್ಕೆ ಮಾಡಿಕೊಳ್ಳುವ ಸಲುವಾಗಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸಿಇಟಿ ದಾಖಲಾತಿ ಪರಿಶೀಲನೆ ಕಾರ‍್ಯ ಗುರುವಾರದಿಂದ ಆರಂಭಗೊಂಡಿದೆ.

Vijaya Karnataka 7 Jun 2019, 5:00 am
ರಾಮನಗರ: ವಿವಿಧ ಕೋರ್ಸ್‌ಗಳಿಗೆ ಸೀಟು ಆಯ್ಕೆ ಮಾಡಿಕೊಳ್ಳುವ ಸಲುವಾಗಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸಿಇಟಿ ದಾಖಲಾತಿ ಪರಿಶೀಲನೆ ಕಾರ‍್ಯ ಗುರುವಾರದಿಂದ ಆರಂಭಗೊಂಡಿದೆ.
Vijaya Karnataka Web registration verification for cet access
ಸಿಇಟಿ ಪ್ರವೇಶಕ್ಕೆ ದಾಖಲಾತಿ ಪರಿಶೀಲನೆ


ರಾಮನಗರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಜೂ. 19ರವರೆಗೆ ಪ್ರವೇಶ ಪ್ರಕ್ರಿಯೆ ಕುರಿತು ದಾಖಲಾತಿ ಪರಿಶೀಲನೆ ಕಾರ‍್ಯ ನಡೆಯಲಿದೆ.

ಮೊದಲು ವಿವಿಧ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಪ್ರವೇಶ ಪಡೆಯಲು ಜಿಲ್ಲೆಯ ವಿದ್ಯಾರ್ಥಿಗಳು, ಬೆಂಗಳೂರಿಗೆ ಹೋಗಬೇಕಿತ್ತು. ಹಲವು ಬಾರಿ ಅನಾನೂಕುಲಗಳು ಆಗುತ್ತಿದ್ದವು. ಇದನ್ನು ಮನಗಂಡ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಥಮ ಬಾರಿಗೆ ದಾಖಲಾತಿ ಪರಿಶೀಲನೆ ಕಾರ‍್ಯದಲ್ಲಿ ಜಿಲ್ಲೆಯ ಲಭಿಸುವಂತೆ ಮಾಡಿದೆ.

ಈ ಸೌಲಭ್ಯ ಜಿಲ್ಲೆಯಲ್ಲಿ ವಾಸವಾಗಿರುವ ವಿದ್ಯಾರ್ಥಿಗಳಿಗೆ ಹಾಗೂ ಇಲ್ಲಿಯೇ ವಿದ್ಯಾಭ್ಯಾಸ ಮಾಡಿದವರಿಗೆ ಮಾತ್ರ ಅನ್ವಯಸಲಾಗಿದೆ. ಬೆಳಗ್ಗೆ 9.15ರಿಂದ ಸಂಜೆ 6.15ರವರೆಗೆ ಕಾರ‍್ಯ ನಡೆಸಲಾಗುತ್ತದೆ.

ಈಗಾಗಲೇ ಸಿಇಟಿ ಅರ್ಜಿ ಸಲ್ಲಿಸಿ ರಾರ‍ಯಂಕ್‌ ಪಡೆದ ದ್ಯಾರ್ಥಿಗಳಿಗೆ, ತಮ್ಮ ರಾರ‍ಯಂಕ್‌ ಅನುಗುಣವಾಗಿ ದಿನಾಂಕ ಹಾಗೂ ಸಮಯ ನಿಗದಿಗೊಳಿಸಲಾಗಿದೆ. ಅಂದೇ ತಮ್ಮ ಮೂಲ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ಪ್ರವೇಶ ಪಡೆಯಬಹುದಾಗಿರುತ್ತದೆ.

ಈ ಕುರಿತು ವಿಜಯ ಕರ್ನಾಟಕ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಸವಿತಾ, ''ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ದಾಖಲಾತಿ ಪರಿಶೀಲನೆ ಕಾರ‍್ಯ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಮೂಲ ದಾಖಲಾತಿ ಹಾಗೂ ಪ್ರವೇಶಾತಿಗೆ ಕೋರಿ ಮೀಸಲಾತಿ ದಾಖಲಾತಿಗಳನ್ನು ಈ ವೇಳೆ ನೋಡಲ್‌ ಅಧಿಕಾರಿಗಳ ಮುಂದೆ ಹಾಜರು ಪಡಿಸಬೇಕು,'' ಎಂದು ಹೇಳಿದರು.

''ಕನ್ನಡ ಮಾಧ್ಯಮ ಹಾಗೂ ಗ್ರಾಮೀಣ ಖೋಟಾದಲ್ಲಿ ಮೀಸಲಾತಿಗೆ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳು ಸಂಬಂಧ ಪಟ್ಟ ಶಾಲಾ ಆಡಳಿತದಿಂದ ಸೂಕ್ತ ದಾಖಲಾತಿಗಳನ್ನು ನೀಡಬೇಕು,'' ಎಂದು ಹೇಳಿದರು.

ಮಾಹಿತಿ ಕೇಂದ್ರ ಉದ್ಘಾಟನೆ

ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಸಿಇಟಿ ದಾಖಲಾತಿ ಪರಿಶೀಲನೆ ಕಾರ‍್ಯ ನಡೆಯುತ್ತಿರುವುದರಿಂದ, ಜಿಲ್ಲಾ ಕೇಂದ್ರ ರಾಮನಗರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಮಾಹಿತಿ ಕೇಂದ್ರವನ್ನು ತೆರೆಯಲಾಗಿದೆ. ಗುರುವಾರ ಬೆಳಗ್ಗೆ ಪದಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸವಿತಾ ಅವರು, ಕೇಂದ್ರವನ್ನು ಉದ್ಘಾಟಿಸಿದರು.

ಈ ವೇಳೆ ಸಿಇಟಿ ನೋಡಲ್‌ ಅಧಿಕಾರಿ ರಾಮಕೃಷ್ಣ, ಹೆಚ್ಚುವರಿ ನೋಡಲ್‌ ಅಧಿಕಾರಿ ಶಂಕರಪ್ಪ ಇದ್ದರು.

ಪರಿಶೀಲನೆಗೆ ಅಗತ್ಯವಾಗಿರುವ ದಾಖಲಾತಿಗಳು

ಕ್ಷೇತ್ರ ಶಿಕ್ಷಣಾಧಿಕಾರಿ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸಹಿ ಮಾಡಿರುವ ವ್ಯಾಸಂಗ ಪ್ರಮಾಣ ಪತ್ರ

ಸೇರಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಲವು ದಾಖಲೆ ನಿಗದಿಪಡಿಸಿದೆ.

ಸಾಮಾನ್ಯ ಪರೀಕ್ಷೆ ವೇಳೆ ಅರ್ಜಿ ಸಲ್ಲಿಸಿದ ಆನ್‌ಲೈನ್‌ ಪ್ರತಿ

ಶುಲ್ಕ ಸಂದಾಯಕ್ಕೆ ಸಂಬಂಧಿಸಿದ ಚಲನ್‌ ಪ್ರತಿ

ಸಿಇಟಿ ಪರೀಕ್ಷೆ ಮೂಲ ಪ್ರವೇಶ ಪತ್ರ.

10ನೇ ತರಗತಿ ಮೂಲ ಅಂಕಪಟ್ಟಿ

12ನೇ ತರಗತಿ ಮೂಲಕ ಅಂಕಪಟ್ಟಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ