ಆ್ಯಪ್ನಗರ

ನೆಮ್ಮದಿಯ ಜೀವನಕ್ಕೆ ಧಾರ್ಮಿಕ ಆಚರಣೆಗಳು ಸಹಕಾರಿ

ಮಾನವನ ಸುಖ, ಶಾಂತಿ, ನೆಮ್ಮದಿಯ ಜೀವನಕ್ಕೆ ದೇವಾಲಯ ಹಾಗೂ ಧಾರ್ಮಿಕ ಆಚರಣೆಗಳು ಸಹಕಾರಿಯಾಗಿದೆ ಎಂದು ಆದಿ ಚುಂಚನಗಿರಿ ಮಠಾಧ್ಯಕ್ಷರಾದ ಡಾ...

Vijaya Karnataka 9 May 2019, 5:00 am
ರಾಮನಗರ: ಮಾನವನ ಸುಖ, ಶಾಂತಿ, ನೆಮ್ಮದಿಯ ಜೀವನಕ್ಕೆ ದೇವಾಲಯ ಹಾಗೂ ಧಾರ್ಮಿಕ ಆಚರಣೆಗಳು ಸಹಕಾರಿಯಾಗಿದೆ ಎಂದು ಆದಿ ಚುಂಚನಗಿರಿ ಮಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು.
Vijaya Karnataka Web religious practices can be helpful for tranquil life
ನೆಮ್ಮದಿಯ ಜೀವನಕ್ಕೆ ಧಾರ್ಮಿಕ ಆಚರಣೆಗಳು ಸಹಕಾರಿ


ತಾಲೂಕಿನ ಕೈಲಾಂಚ ಹೋಬಳಿಯ ಮೊಟ್ಟೆದೊಡ್ಡಿ ಗ್ರಾಮದ ಸಪ್ತಗಿರಿ ಮಹದೇಶ್ವರಸ್ವಾಮಿ ನೂತನ ದೇವಾಲಯ ನೂತನ ವಿಮಾನ ಗೋಪುರ ಉದ್ಘಾಟಿಸಿ ಮಾತನಾಡಿದ ಅವರು, ಪರಮಾತ್ಮನಿಂದಲೇ ಎಲ್ಲರ ರಕ್ಷಣೆ ಸಾಧ್ಯವಾಗಿದ್ದು, ಪ್ರತಿ ಕ್ಷಣ, ಪ್ರತಿ ನಿಮಿಷ ದೇವರ ಸ್ಮರಣೆ ಮಾಡುತ್ತಾ ನಮ್ಮ ಕರ್ತವ್ಯ ನಿರ್ವಹಿಸಿದರೆ ಯಾವ ಕಷ್ಟವೂ ಸುಳಿಯುವುದಿಲ್ಲ. ಜೀವನದಲ್ಲಿ ನೆಮ್ಮದಿ ಕಂಡುಕೊಂಡಾಗ ಯಾವುದೇ ಕಷ್ಟಕಾರ್ಪಣ್ಯಗಳಿಲ್ಲದೆ ಸುಖಜೀವನ ನಡೆಸಬಹುದು ಎಂದು ಹೇಳಿದರು.

ದೇವಾಲಯಗಳು ಜನರನ್ನು ಒಟ್ಟಗೂಡಿಸುತ್ತವೆ: ಸಾಲೂರು ಮಠಾಧ್ಯಕ್ಷ ಪಟ್ಟದ ಶ್ರೀ ಗುರುಸ್ವಾಮಿ ಮಾತನಾಡಿ, ಪುರಾತನ ಕಾಲದಿಂದಲೂ ಗ್ರಾಮದ ಜನರು ಸುಖ, ಶಾಂತಿಯಿಂದ ಬದುಕಲು ಭಾರತೀಯ ಸಂಸ್ಕೃತಿ ಪರಂಪರೆಯಂತೆ ಧಾರ್ಮಿಕ ಆಚರಣೆ ಕೈಗೊಂಡು ಬರುತ್ತಿದ್ದಾರೆ. ಇಂದಿಗೂ ಕೂಡ ಆ ಪರಂಪರೆ ನಮ್ಮಲ್ಲಿ ಉಳಿದಿದೆ. ಧಾರ್ಮಿಕ ಆಚರಣೆ ಮತ್ತು ದೇವಾಲಯಗಳು ಗ್ರಾಮದ ಜನರನ್ನು ಒಟ್ಟುಗೂಡಿಸಿ ನೆಮ್ಮದಿ ಜೀವನಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಹೇಳಿದರು.

ಹಬ್ಬ ಹರಿದಿನಗಳಿಂದ ಬಾಂಧವ್ಯ ವೃದ್ಧಿ: ಅರ್ಚಕರಹಳ್ಳಿ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಮಾತನಾಡಿ, ಗ್ರಾಮಗಳಲ್ಲಿ ಧಾರ್ಮಿಕ ಆಚರಣೆ ಹಬ್ಬ ಹರಿದಿನಗಳನ್ನು ಆಚರಿಸುವುದರಿಂದ ಗ್ರಾಮಸ್ಥರಲ್ಲಿ ಶಾಶ್ವತ ನಂಬಿಕೆ, ಸ್ನೇಹ, ಬಾಂಧವ್ಯ ವೃದ್ಧಿಸುತ್ತದೆ ಎಂದು ಹೇಳಿದರು.

ಒಗ್ಗಟ್ಟಿನ ಕೆಲಸಕ್ಕೆ ದೇವಾಲಯಗಳು ಸಹಕಾರಿ: ಗ್ರಾಮಗಳ ಅಭಿವೃದ್ಧಿ ಕಾರ್ಯಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಯುವಕರು, ಹಿರಿಯರು ಒಟ್ಟಾಗಿ ಪರಸ್ಪರ ಸ್ನೇಹ ಸೌಹಾರ್ದತೆಯಿಂದ ತೊಡಗಲು ಗ್ರಾಮದ ಸಮಸ್ಯೆಗಳನ್ನು ಗುರುತಿಸಿ ಒಗ್ಗಟ್ಟಿನಿಂದ ಕೆಲಸ ಕಾರ್ಯ ಮಾಡಲು ಗ್ರಾಮದ ದೇವಾಲಯಗಳು ಸಹಕಾರಿಯಾಗಿವೆ. ಜನರು ನಮ್ಮ ಪುರಾತನ ಸಂಸ್ಕೃತಿ ಮರೆಯದೆ ಧಾರ್ಮಿಕ ಕೈಂಕರ್ಯಗಳನ್ನು ಮಾಡುತ್ತಾ ಸುಖ ಜೀವನದ ನಡೆಸಿರಿ ತಿಳಿಸಿದರು.

ದೇವಾಲಯದ ಪ್ರಧಾನ ಅರ್ಚಕ ಪುಟ್ಟಸ್ವಾಮಯ್ಯ, ಗ್ರಾಪಂ ಸದಸ್ಯರಾದ ಎಂ.ಪಿ. ಮಹೇಶ್‌, ಭಾಗ್ಯಮ್ಮ ಚಂದ್ರಯ್ಯ, ಮುಖಂಡರಾದ ಸೋಮಶೇಖರ್‌, ಕೆಂಪಣ್ಣ, ಪ್ರಸನ್ನ, ಕುಮಾರ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ