ಆ್ಯಪ್ನಗರ

ರೆಸಾರ್ಟ್‌ನಲ್ಲಿ ಮಾರಾಮಾರಿ: ಬೇಲ್‌ಗಾಗಿ ಕಂಪ್ಲಿ ಶಾಸಕ ಗಣೇಶ್ ಕಸರತ್ತು

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ವಿಚಾರಣೆಯನ್ನು ಆರಂಭಿಸಿದ್ದು, ಶಾಸಕ ಗಣೇಶ್ ಯಾರ ಸಂಪರ್ಕಕ್ಕೂ ಸಿಗದೆ ತಲೆ ಮರೆಸಿಕೊಂಡಿದ್ದಾರೆ.

Vijaya Karnataka Web 24 Jan 2019, 11:45 am
ರಾಮನಗರ: ಬಿಡದಿಯ ಈಗಲ್ಟನ್ ರೆಸಾರ್ಟ್‌ ಮಾರಾಮಾರಿ ಪ್ರಕರಣ ಸಂಬಂಧ ಬಂಧನ ಭೀತಿಯನ್ನೆದುರುಸುತ್ತಿರುವ ಕಂಪ್ಲಿ ಶಾಸಕ ಗಣೇಶ್, ನಿರೀಕ್ಷಣಾ ಜಾಮೀನಿಗೆ ಕಸರತ್ತು ನಡೆಸುತ್ತಿದ್ದಾರೆ.
Vijaya Karnataka Web kampi


ತಮ್ಮ ವಕೀಲರ ಮೂಲಕ ರಾಮನಗರ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಬೇಲ್ ತೆಗೆದುಕೊಳ್ಳಲು ಶಾಸಕ ಗಣೇಶ್ ಮುಂದಾಗಿದ್ದು, ಇಂದು ಮಧ್ಯಾಹ್ನವೇ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ವಿಚಾರಣೆಯನ್ನು ಆರಂಭಿಸಿದ್ದು, ಶಾಸಕ ಗಣೇಶ್ ಯಾರ ಸಂಪರ್ಕಕ್ಕೂ ಸಿಗದೆ ತಲೆ ಮರೆಸಿಕೊಂಡಿದ್ದಾರೆ.

ವಿಚಾರಣೆ ಆರಂಭಿಸಿರುವ ಬಿಡದಿ ಪೋಲೀಸರು

ಕಂಪ್ಲಿ ಶಾಸಕ ಗಣೇಶ್ ಅವರಿಂದ ಹಲ್ಲೆಗೊಳಗಾಗಿದ್ದ ಶಾಸಕ ಆನಂದ್ ಸಿಂಗ್ ನೀಡಿರುವ ದೂರಿನ ಹಿನ್ನೆಲೆ ಎಫ್ ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಈಗಲ್ ಟನ್ ರೆಸಾರ್ಟ್‌ಗೆ ತೆರಳಿದ್ದ ಪೊಲೀಸರ ತಂಡ ಅಲ್ಲಿ ವಿಚಾರಣೆಯನ್ನು ಕೈಗೊಂಡಿತು.

ಶಾಸಕ ಗಣೇಶ್ ವಿರುದ್ದ ಐಪಿಸಿ ಸೆಕ್ಷನ್ 323, 324, 307, 504, 506ರ ಅಡಿ ಕೇಸ್ ದಾಖಲಾಗಿದ್ದು, ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ