ಆ್ಯಪ್ನಗರ

ಮತದಾನದ ಅರಿವು ಮೂಡಿಸಲು ರಂಗೋಲಿ ಸ್ಪರ್ಧೆ

ಲೋಕಸಭಾ ಚುನಾವಣೆಯಲ್ಲಿ ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.

Vijaya Karnataka 31 Mar 2019, 5:00 am
ಮಾಗಡಿ: ಲೋಕಸಭಾ ಚುನಾವಣೆಯಲ್ಲಿ ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
Vijaya Karnataka Web rongoli competition to raise awareness of election
ಮತದಾನದ ಅರಿವು ಮೂಡಿಸಲು ರಂಗೋಲಿ ಸ್ಪರ್ಧೆ


ಇದೇ ವೇಳೆ ಪ್ರಾಂಶುಪಾಲ ಮೂರ್ತಿ ಮಾತನಾಡಿ, ಮತದಾರರು ಪ್ರಾಮಾಣಿಕವಾಗಿ ತಮ್ಮ ಮತ ಹಕ್ಕನ್ನು ಚಲಾಯಿಸಿದರೆ ಮಾತ್ರ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಲು ಸಾಧ್ಯ. ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಚುನಾವಣೆಯಲ್ಲಿ ಮತದಾನ ಅಧಿಕಗೊಳ್ಳುತ್ತಿದೆ, ಅದರೆ ನಗರ ಹಾಗೂ ಪಟ್ಟಣದ ಪ್ರದೇಶಗಳಲ್ಲಿ ಬಹಳಷ್ಟು ಮತದಾರರು ಮತದಾನದ ಬಗ್ಗೆ ನಿರಾಸಕ್ತಿ ತೋರುತ್ತಿರುವುದರಿಂದ ನಗರ ಪ್ರದೇಶಗಳಲ್ಲಿ ಮತದಾನದ ಪ್ರಮಾಣ ಕಡಿಮೆಯಾಗುತ್ತಿದೆ. 18 ವರ್ಷ ತುಂಬಿದ ಪ್ರತಿಯೊಬ್ಬರು ಆಸೆ, ಅಮಿಷಕ್ಕೆ ಒಳಗಾಗದೆ ಮತದಾನದ ದಿನ ಕಡ್ಡಾಯವಾಗಿ ಮತ ಚಲಾವಣೆ ಮಾಡಬೇಕು ಎಂದು ತಿಳಿಸಿದರು.

ರಂಗೋಲಿ ಸ್ಪರ್ಧೆ: ಪ್ರೊ. ಚಂದ್ರಪ್ರಭಾ ಮಾತನಾಡಿ, ಮಹಿಳಾ ಮತದಾರರು ಮತದಾನದಿಂದ ದೂರ ಉಳಿಯುವುದು ಸರಿಯಲ್ಲ. ಚುನಾವಣೆಗಳಲ್ಲಿ ಉತ್ತಮ ಆಯ್ಕೆಗೆ ನಿರ್ಲಕ್ಷ ್ಯ ತೋರಬಾರದು. ಮಹಿಳೆಯರು ಹೆಚ್ಚು ಒತ್ತಡದ ಬದುಕಿನಲ್ಲಿ ಜೀವನ ಸಾಗಿಸುತ್ತಿದ್ದಾರೆ, ಹೀಗಾಗಿ ಮಹಿಳಾ ಮತದಾರರನ್ನು ಮತದಾನದತ್ತ ಸೆಳೆಯುವ ದೃಷ್ಟಿಯಿಂದ ಜಿಲ್ಲಾ ಸ್ವೀಪ್‌ ಸಮಿತಿ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸುತ್ತಿದ್ದು, ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲು ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಹೇಳಿದರು.

ಮಾತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ವಿದ್ಯಾರ್ಥಿನಿಯರು ರಂಗೋಲಿ ಬಿಡಿಸಿದರು, ದ್ವೀತಿಯ ಬಿಕಾಂ ವಿದ್ಯಾರ್ಥಿನಿಯರಾದ ರಮ್ಯಶ್ರೀ ಹಾಗೂ ರೂಪಶ್ರೀ, ಪ್ರಥಮ, ಚೈತ್ರಪ್ರಿಯ ಮತ್ತು ಲಕ್ಷ್ಮೀ ದ್ವೀತಿಯ, ಉಷಾ ಎಂ.ಎಸ್‌. ಜೆ.ವಿ.ಶೋಭ ತೃತೀಯ ಬಹುಮಾನ ಗಳಿಸಿದರು. ಡಾ.ಶಿವಕುಮಾರ್‌, ವೀಣಾ, ಎಚ್‌.ಸುಷ್ಮಾ ಮತ್ತಿತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ