ಆ್ಯಪ್ನಗರ

ಏಸುಪ್ರತಿಮೆ ವಿವಾದ: ಕಪಾಲ ಬೆಟ್ಟದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್

ರಾಮನಗರದ ಕನಕಪುರ ತಾಲೂಕಿನ ಕಪಾಲಬೆಟ್ಟದಲ್ಲಿ ಏಸುಪ್ರತಿಮೆ ನಿರ್ಮಾಣ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಪಾಲ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

Vijaya Karnataka Web 13 Jan 2020, 8:04 pm
ರಾಮನಗರ: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಪಾಲ ಬೆಟ್ಟದಲ್ಲಿ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಪಾಲ ಬೆಟ್ಟಕ್ಕೆ ಸೋಮವಾರ ಭೇಟಿ ನೀಡಿದ್ದಾರೆ.
Vijaya Karnataka Web rss leader kalladka prabhakar bhat visit jesus christ statue controversy place at kanakapura
ಏಸುಪ್ರತಿಮೆ ವಿವಾದ: ಕಪಾಲ ಬೆಟ್ಟದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್


ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣವನ್ನು ವಿರೋಧಿಸಿ ಸೋಮವಾರ ಬಿಜೆಪಿ ಹಾಗೂ ವಿಶ್ವಹಿಂದೂ ಪರಿಷತ್ ಪಾದಯಾತ್ರೆ ನಡೆಸಿವೆ. ಈ ಸಂದರ್ಭದಲ್ಲಿ ಪ್ರಭಾಕರ್ ಭಟ್ ಏಸು ಪ್ರತಿಮೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುವುದರ ಜೊತೆಗೆ ಡಿಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ಬಳಿಕ ಅವರು ತಮ್ಮ ಬೆಂಬಲಿಗರೊಂದಿಗೆ ಕನಕಪುರದಲ್ಲಿರುವ ಕಪಾಲ ಬೆಟ್ಟಕ್ಕೆ ತೆರಳಿ ಏಸು ಪ್ರತಿಮೆ ನಿರ್ಮಾಣ ಸ್ಥಳವನ್ನು ವೀಕ್ಷಿಸಿದ್ದಾರೆ.

ಮಹಾತ್ಮ ಗಾಂಧಿ ಪ್ರತಿಮೆ ಮಾಡಲಿ, ಸೋನಿಯಾ ಗಾಂಧಿ ಪ್ರತಿಮೆ ಮಾಡಲು ಬಿಡಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

ಕನಕಪುರದ ಕಪಾಲ ಬೆಟ್ಟದಲ್ಲಿ ಏಸುಕ್ರಿಸ್ತನ ಪ್ರತಿಮೆ ಸ್ಥಾಪನೆ ಮಾಡಲು ಮಾಜಿ ಸಚಿವ ಡಿಕೆ ಶಿವಕುಮಾರ್ ಶಿಲಾನ್ಯಾಸ ಮಾಡಿದ್ದರು. ಆದರೆ ಬಿಜೆಪಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣದಿಂದಾಗಿ ವಿವಾದದ ಸ್ವರೂಪ ಪಡೆದುಕೊಂಡಿದೆ. ಪರಿಣಾಮ ಪ್ರತಿಮೆ ನಿರ್ಮಾಣ ಕಾರ್ಯವೂ ಸ್ಥಗಿತಗೊಂಡಿದೆ.

ಪ್ರತಿಮೆ ಸರಕಾರಿ ಜಮೀನಿನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೆ ಪ್ರತಿಮೆ ನಿರ್ಮಾಣದಿಂದ ಮತಾಂತರ ಹೆಚ್ಚಾಗುವ ಸಾಧ್ಯತೆ ಇದೆ ಎಂಬುವುದು ಬಿಜೆಪಿಯ ಆರೋಪ. ಆದರೆ ಡಿಕೆಶಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಬಿಜೆಪಿ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ದೇವರ ಪ್ರತಿಮೆ ಸ್ಥಾಪನೆಗೆ ಅಡ್ಡಿ ಏಕೆ, ಕನಕಪುರದ ಶಾಂತಿ ಕೆಡಿಸಬೇಡಿ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಖಾದರ್ ವಾಗ್ದಾಳಿ

ಮಾಜಿ ಸಚಿವ ಯು.ಟಿ ಖಾದರ್ ಕೂಡಾ ವಿರೋಧ ಬಿಜೆಪಿ ಹಾಗೂ ಕಲ್ಲಡ್ಕ ಪ್ರಭಾಕರ್ ಭಟ್ ನಡೆಗೆ ವ್ಯಕ್ತಪಡಿಸಿದ್ದು ಮಂಗಳೂರಿನಲ್ಲಿ ಶಾಂತಿ ಕದಡಿದ್ದು ಆಯ್ತು ಇದೀಗ ಕನಕಪುರಕ್ಕೆ ಹೋಗಿ ಅಲ್ಲಿಯ ಶಾಂತಿಯನ್ನು ಕದಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ