ರಾಮನಗರ: ದೇಶದಲ್ಲಿ ಇಂದಿಗೂ ಜೀವಂತವಾಗಿರುವ ಜೀತ ಪದ್ಧತಿ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳನ್ನು ಬುಡ ಸಮೇತ ಕಿತ್ತೊಗೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಗೀತಾ ಪಾಟೀಲ್ ತಿಳಿಸಿದರು.
ವಿವಿಧ ಎನ್ಜಿಒಗಳ ಸಂಯುಕ್ತಾಶ್ರಯದಲ್ಲಿ ನಗರದ ಗುರುಭವನದಲ್ಲಿ ಸೋಮವಾರ ಆಯೋಜಿಸಿದ್ದ ಜೀತ ಪದ್ಧತಿ ಮತ್ತು ಬಾಲ ಕಾರ್ಮಿಕ ಪದ್ಧತಿ ಕುರಿತಾಗಿ ಜಾಗೃತಿ ಮೂಡಿಸುವ 'ನಿರ್ಮಾಣ ಕಾರ್ಯಕ್ರಮ'ದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಅನಾದಿ ಕಾಲದಿಂದಲ್ಲೂ ಜೀತ ಪದ್ಧತಿಯಂತಹ ಅನಿಷ್ಟ ಆಚರಣೆಗಳು ಇಂದಿಗೂ ಜೀವಂತವಾಗಿದೆ. ಹೀಗಾಗಿ ಇವುಗಳಿಗೆ ತಿಲಾಂಜಲಿ ಹಾಡಲು ಯುವ ಸಮೂಹಗಳನ್ನು ಜಾಗೃತರನ್ನಾಗಿಸಬೇಕು ಎಂದು ಸಲಹೆ ನೀಡಿದರು.
ಮಕ್ಕಳ ಕಲ್ಯಾಣ ಸಮಿತಿ, ಮಹಿಳಾ ಕೇಂದ್ರಗಳ ಬಗ್ಗೆ ಇನ್ನಷ್ಟು ಅರಿವು ಮೂಡಿಸಬೇಕಿದೆ. ಬಾಲ್ಯ ವಿವಾಹವು ಅಸಿಂಧುವಾಗಲಿದೆ ಎಂಬ ಬಗ್ಗೆ ಮಾಹಿತಿ ನೀಡಬೇಕು. ಮಕ್ಕಳ ಮೇಲಿನ ದೌರ್ಜನ್ಯಗಳ ತಡೆಗೆ ಮಕ್ಕಳ ಸಹಾಯವಾಣಿಗೆ ಕರೆ ಮಾಡುವಂತೆ ಶಾಲಾ-ಕಾಲೇಜುಗಳಲ್ಲಿ ಪ್ರಚಾರ ಪಡಿಸಬೇಕು. ಇದರೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕರ್ತವ್ಯಗಳ ಬಗ್ಗೆಯು ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆ ಎದುರಾಗಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಮಹಿಳಾ ದೌರ್ಜನ್ಯಗಳ ತಡೆಗೆ ಯುವ ಸಮೂಹ ಕೈಜೋಡಿಸಬೇಕಿದೆ ಎಂದು ಮನವಿ ಮಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಶಾಲಾ ವಿದ್ಯಾರ್ಥಿಗಳು ಜೀತ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಲು ನಗರದ ಎಸ್ಪಿ ಕಚೇರಿಯಿಂದ ಗುರುಭವನದ ವರೆಗೂ ಜಾಗೃತಿ ಜಾಥಾ ನಡೆಸಿದರು. ಶಾಂತ ಜ್ಯೋತಿ ಚಾರಿಟೆಬಲ್ ಟ್ರಸ್ಟ್ನ ನಿದೇರ್ಶಕ ಷಣ್ಮುಗಂ ಸುದರಂ, ಗೋವಿದರಾಜು, ಅರುಣ್ ರವಿ, ರಾಮಚಂದ್ರ ಸೇರಿದಂತೆ ಇತರರಿದ್ದರು.
ಏನಿದು ನಿರ್ಮಾಣ ಕಾರ್ಯಕ್ರಮ..!: ಶಾಂತಾ ಜೀವ ಜ್ಯೋತಿ, ಚಿಗುರು, ಬಾಸ್ಕೊ, ಚೈಲ್ಡ್ ಲೈನ್ ಫೌಂಡೇಶನ್, ಆಸರೆ ಮತ್ತು ಇಂಟರ್ ನ್ಯಾಷನಲ್ ಜಸ್ಟೀಸ್ ಮಷಿನ್ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳು ಸೇರಿ ಡಿ.10ರಿಂದ 17ರ ವರೆಗೂ ಕಾರ್ಯಾಗಾರ ಹಮ್ಮಿಕೊಂಡಿತ್ತು. ನಿರ್ಮಾಣ ಹೆಸರಿನ ಈ ಕಾರಾರಯಗಾರದಲ್ಲಿ ಜಿಲ್ಲೆಯಲ್ಲಿ ಜೀವಂತವಾಗಿರುವ ಜೀತಪದ್ಧತಿ ಮತ್ತು ಬಾಲ ಕಾರ್ಮಿಕ ಪದ್ಧತಿ ಕುರಿತು ಅರಿವು ಮೂಡಿಸಲಾಗಿದೆ. ಡಿ.10ರಂದು ಮಾಹಿತಿ ರಥ (ಟ್ರಕ್-ಇನ್ಫಾರ್ಮೇಷನ್ ಚಾರಿಯಟ್)ಗೆ ಚಾಲನೆ ನೀಡಲಾಗಿತ್ತು. ಜಿಲ್ಲೆಯ ರಂಗಭೂಮಿ ಕಲಾವಿದರು ನಾಲ್ಕು ತಾಲೂಕುಗಳಿಗೆ ಈ ಟ್ರಕ್ ಮೂಲಕ ತೆರಳಿ ಈತ ಪದ್ಧತಿ ಮತ್ತು ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸುವ ಬೀದಿ ನಾಟಕಗಳನ್ನು ಪ್ರದರ್ಶಿಸಿದರು. ಈ ಸಂಬಂಧ ಕರ ಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿದ್ದಾರೆ.
ವಿವಿಧ ಎನ್ಜಿಒಗಳ ಸಂಯುಕ್ತಾಶ್ರಯದಲ್ಲಿ ನಗರದ ಗುರುಭವನದಲ್ಲಿ ಸೋಮವಾರ ಆಯೋಜಿಸಿದ್ದ ಜೀತ ಪದ್ಧತಿ ಮತ್ತು ಬಾಲ ಕಾರ್ಮಿಕ ಪದ್ಧತಿ ಕುರಿತಾಗಿ ಜಾಗೃತಿ ಮೂಡಿಸುವ 'ನಿರ್ಮಾಣ ಕಾರ್ಯಕ್ರಮ'ದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಅನಾದಿ ಕಾಲದಿಂದಲ್ಲೂ ಜೀತ ಪದ್ಧತಿಯಂತಹ ಅನಿಷ್ಟ ಆಚರಣೆಗಳು ಇಂದಿಗೂ ಜೀವಂತವಾಗಿದೆ. ಹೀಗಾಗಿ ಇವುಗಳಿಗೆ ತಿಲಾಂಜಲಿ ಹಾಡಲು ಯುವ ಸಮೂಹಗಳನ್ನು ಜಾಗೃತರನ್ನಾಗಿಸಬೇಕು ಎಂದು ಸಲಹೆ ನೀಡಿದರು.
ಮಕ್ಕಳ ಕಲ್ಯಾಣ ಸಮಿತಿ, ಮಹಿಳಾ ಕೇಂದ್ರಗಳ ಬಗ್ಗೆ ಇನ್ನಷ್ಟು ಅರಿವು ಮೂಡಿಸಬೇಕಿದೆ. ಬಾಲ್ಯ ವಿವಾಹವು ಅಸಿಂಧುವಾಗಲಿದೆ ಎಂಬ ಬಗ್ಗೆ ಮಾಹಿತಿ ನೀಡಬೇಕು. ಮಕ್ಕಳ ಮೇಲಿನ ದೌರ್ಜನ್ಯಗಳ ತಡೆಗೆ ಮಕ್ಕಳ ಸಹಾಯವಾಣಿಗೆ ಕರೆ ಮಾಡುವಂತೆ ಶಾಲಾ-ಕಾಲೇಜುಗಳಲ್ಲಿ ಪ್ರಚಾರ ಪಡಿಸಬೇಕು. ಇದರೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕರ್ತವ್ಯಗಳ ಬಗ್ಗೆಯು ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆ ಎದುರಾಗಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಮಹಿಳಾ ದೌರ್ಜನ್ಯಗಳ ತಡೆಗೆ ಯುವ ಸಮೂಹ ಕೈಜೋಡಿಸಬೇಕಿದೆ ಎಂದು ಮನವಿ ಮಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಶಾಲಾ ವಿದ್ಯಾರ್ಥಿಗಳು ಜೀತ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಲು ನಗರದ ಎಸ್ಪಿ ಕಚೇರಿಯಿಂದ ಗುರುಭವನದ ವರೆಗೂ ಜಾಗೃತಿ ಜಾಥಾ ನಡೆಸಿದರು. ಶಾಂತ ಜ್ಯೋತಿ ಚಾರಿಟೆಬಲ್ ಟ್ರಸ್ಟ್ನ ನಿದೇರ್ಶಕ ಷಣ್ಮುಗಂ ಸುದರಂ, ಗೋವಿದರಾಜು, ಅರುಣ್ ರವಿ, ರಾಮಚಂದ್ರ ಸೇರಿದಂತೆ ಇತರರಿದ್ದರು.
ಏನಿದು ನಿರ್ಮಾಣ ಕಾರ್ಯಕ್ರಮ..!: ಶಾಂತಾ ಜೀವ ಜ್ಯೋತಿ, ಚಿಗುರು, ಬಾಸ್ಕೊ, ಚೈಲ್ಡ್ ಲೈನ್ ಫೌಂಡೇಶನ್, ಆಸರೆ ಮತ್ತು ಇಂಟರ್ ನ್ಯಾಷನಲ್ ಜಸ್ಟೀಸ್ ಮಷಿನ್ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳು ಸೇರಿ ಡಿ.10ರಿಂದ 17ರ ವರೆಗೂ ಕಾರ್ಯಾಗಾರ ಹಮ್ಮಿಕೊಂಡಿತ್ತು. ನಿರ್ಮಾಣ ಹೆಸರಿನ ಈ ಕಾರಾರಯಗಾರದಲ್ಲಿ ಜಿಲ್ಲೆಯಲ್ಲಿ ಜೀವಂತವಾಗಿರುವ ಜೀತಪದ್ಧತಿ ಮತ್ತು ಬಾಲ ಕಾರ್ಮಿಕ ಪದ್ಧತಿ ಕುರಿತು ಅರಿವು ಮೂಡಿಸಲಾಗಿದೆ. ಡಿ.10ರಂದು ಮಾಹಿತಿ ರಥ (ಟ್ರಕ್-ಇನ್ಫಾರ್ಮೇಷನ್ ಚಾರಿಯಟ್)ಗೆ ಚಾಲನೆ ನೀಡಲಾಗಿತ್ತು. ಜಿಲ್ಲೆಯ ರಂಗಭೂಮಿ ಕಲಾವಿದರು ನಾಲ್ಕು ತಾಲೂಕುಗಳಿಗೆ ಈ ಟ್ರಕ್ ಮೂಲಕ ತೆರಳಿ ಈತ ಪದ್ಧತಿ ಮತ್ತು ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸುವ ಬೀದಿ ನಾಟಕಗಳನ್ನು ಪ್ರದರ್ಶಿಸಿದರು. ಈ ಸಂಬಂಧ ಕರ ಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿದ್ದಾರೆ.