ಆ್ಯಪ್ನಗರ

ವಿದ್ಯಾರ್ಥಿ ಜೀವನಕ್ಕೆ ಕ್ರೀಡೆ ಸಹಕಾರಿ: ವೃತ್ತ ನಿರೀಕ್ಷಕ

ದೈಹಿಕ ಬೆಳವಣಿಗೆ ಹಾಗೂ ಮಾನಸಿಕ ಏಕಾಗ್ರತೆ ಕ್ರೀಡೆ ಸಹಕಾರಿ. ಪ್ರತಿಯೊಬ್ಬ ವಿದ್ಯಾರ್ಥಿಯೂ ಆಟೋಟಗಳಲ್ಲಿ ಪಾಲ್ಗೊಳ್ಳುವುದರಿಂದ ಶಿಕ್ಷಣದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ರಾಮನಗರದ ವೃತ್ತ ನಿರೀಕ್ಷಕರಾದ ಕೆ. ಅರ್ಜುನ್‌ ತಿಳಿಸಿದರು.

Vijaya Karnataka 2 Feb 2019, 5:00 am
ರಾಮನಗರ : ದೈಹಿಕ ಬೆಳವಣಿಗೆ ಹಾಗೂ ಮಾನಸಿಕ ಏಕಾಗ್ರತೆ ಕ್ರೀಡೆ ಸಹಕಾರಿ. ಪ್ರತಿಯೊಬ್ಬ ವಿದ್ಯಾರ್ಥಿಯೂ ಆಟೋಟಗಳಲ್ಲಿ ಪಾಲ್ಗೊಳ್ಳುವುದರಿಂದ ಶಿಕ್ಷಣದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ರಾಮನಗರದ ವೃತ್ತ ನಿರೀಕ್ಷಕರಾದ ಕೆ. ಅರ್ಜುನ್‌ ತಿಳಿಸಿದರು.
Vijaya Karnataka Web sports helpful for student life circle inspector of ramanagar
ವಿದ್ಯಾರ್ಥಿ ಜೀವನಕ್ಕೆ ಕ್ರೀಡೆ ಸಹಕಾರಿ: ವೃತ್ತ ನಿರೀಕ್ಷಕ


ರಾಮನಗರದ ಎಂ.ಎಚ್‌. ನ್ಯಾಷನಲ್‌ ಪಬ್ಲಿಕ್‌ ಇಂಗ್ಲಿಷ್‌ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್‌. ಚಂದ್ರಶೇಖರ್‌ ಮಾತನಾಡಿ, ''ಕ್ರೀಡೆಯಲ್ಲಿ ಪ್ರತಿಯೊಬ್ಬರು ಭಾಗವಹಿಸಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಮತ್ತು ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ,'' ಎಂದು ವಿದ್ಯಾರ್ಥಿಗಳಿಗೆ ತಿಳಿಸಿ ಸ್ಫೂರ್ತಿ ತುಂಬಿದರು. ಶಾಲೆಯ ಪ್ರಾಂಶುಪಾಲೆ ಅಂಬಿಕಾ ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ವಿದ್ಯಾರ್ಥಿಗಳಿಂದ ಶಿಸ್ತಿನ ಪಥ ಸಂಚಲನ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ