ಆ್ಯಪ್ನಗರ

SSLC ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಸಿಐಡಿಗೆ ಒಪ್ಪಿಸಲು ಒತ್ತಡ: ರಾಜ್ಯಕ್ಕೇ ವ್ಯಾಪಿಸಿರುವ ಶಂಕೆ..!

ಹತ್ತನೇ ತರಗತಿ ಪರೀಕ್ಷೆ ಮತ್ತು ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯದ ದಿಕ್ಕನ್ನೇ ಬದಲಿಸುತ್ತದೆ. ಈಗ ಇಲ್ಲೂ ಅಕ್ರಮ ನಡೆಯುತ್ತಿರುವುದು ಮಕ್ಕಳು ಹಾಗೂ ಪೋಷಕರ ವಿಶ್ವಾಸಕ್ಕೆ ಧಕ್ಕೆ ತಂದಿದೆ. ಪ್ರಾಮಾಣಿಕ ಮಕ್ಕಳು ಕಷ್ಟ ಪಟ್ಟು ಓದಿ ಪರೀಕ್ಷೆ ಬರೆದರೆ, ಕೆಲವರು ಸ್ವಾರ್ಥಕ್ಕಾಗಿ ಅಕ್ರಮ ನಡೆಸುತ್ತಿರುವುದು ಇಡೀ ವ್ಯವಸ್ಥೆ ಕುಸಿದು ಬೀಳುವ ಅಪಾಯ ತಂದೊಡ್ಡಿದೆ. ಆದ್ದರಿಂದ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಅಕ್ರಮದ ತಳ ಶೋಧಿಸಿ, ತಪ್ಪಿತಸ್ಥರನ್ನು ಕಠಿಣವಾಗಿ ಶಿಕ್ಷಿಸುವ ಮೂಲಕ ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಬೇಕು ಎಂಬುದು ಸಾರ್ವಜನಿಕ ವಲಯದ ಆಗ್ರಹ.

Edited byದಿಲೀಪ್ ಡಿ. ಆರ್. | Vijaya Karnataka 27 May 2022, 2:09 pm

ಹೈಲೈಟ್ಸ್‌:

  • ಚಿಕ್ಕೋಡಿ, ಬೆಳಗಾವಿ ಪರೀಕ್ಷಾ ಕೇಂದ್ರಗಳಲ್ಲಿ ಸಾಮೂಹಿಕ ನಕಲು?
  • ಮಂಗಳೂರಿನ ಮೌಲ್ಯ ಮಾಪನ ಕೇಂದ್ರದ ಮೂಲಕ ಬೆಳಕಿಗೆ ಬಂದಿದೆ..!
  • ರಾಜ್ಯದ ವಿವಿಧೆಡೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಸಂದೇಹ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web sslc
ಎಸ್‌. ಶ್ರೀಧರ್‌
ರಾಮನಗರ:
ಮಾಗಡಿ ತಾಲೂಕಿನಲ್ಲಿ ಬೆಳಕಿಗೆ ಬಂದಿರುವ ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವು ಇಡೀ ರಾಜ್ಯದಲ್ಲಿ ವ್ಯಾಪಿಸಿರುವ ಶಂಕೆ ಇದ್ದು, ಇದನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂಬ ಆಗ್ರಹ ಸಾರ್ವತ್ರಿಕವಾಗಿದೆ. ಮಾಗಡಿಯಲ್ಲಿ ಪರೀಕ್ಷೆಗೆ 15 ನಿಮಿಷ ಮೊದಲು ವಾಟ್ಸ್‌ ಆ್ಯಪ್‌ನಲ್ಲಿ ಪ್ರಶ್ನೆ ಪತ್ರಿಕೆ ಕಳಿಸಿ ತಜ್ಞರಿಂದ ಉತ್ತರ ಬರೆಸಿ ನಕಲಿಗೆ ಅವಕಾಶ ನೀಡಲಾಗಿದೆ.
ಚಿಕ್ಕೋಡಿ, ಬೆಳಗಾವಿ ಪರೀಕ್ಷಾ ಕೇಂದ್ರಗಳಲ್ಲಿ ಸಾಮೂಹಿಕ ನಕಲು ನಡೆದಿರುವುದು ಮಂಗಳೂರಿನ ಮೌಲ್ಯ ಮಾಪನ ಕೇಂದ್ರದ ಮೂಲಕ ಬೆಳಕಿಗೆ ಬಂದಿದೆ. ಹೀಗೆ, ರಾಜ್ಯದ ವಿವಿಧೆಡೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಸಂದೇಹ ಶುರುವಾಗಿದೆ. ಈ ಹಿಂದೆ ಪಿಯುಸಿ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿದ್ದು, ಮರು ಪರೀಕ್ಷೆಯನ್ನು ಸಹ ನಡೆಸಲಾಗಿತ್ತು.

ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಬಹುತೇಕರು PHD ಅಭ್ಯರ್ಥಿಗಳು : 45 ನಿಮಿಷದಲ್ಲೇ ಪರೀಕ್ಷೆ ಮುಗಿಸಿದ್ದ ಸೌಮ್ಯಾ!
ಪಿಎಸ್‌ಐ ಪರೀಕ್ಷೆ, ಕೆಎಎಸ್‌ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿತ್ತು. ಈಗ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ ಅಕ್ರಮ ನುಸುಳಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಅಕ್ರಮದಲ್ಲಿ ಶಿಕ್ಷಕರು, ಸಿಬ್ಬಂದಿಗಳು ಸಹ ಭಾಗವಹಿಸಿರುವುದು ಮಾಗಡಿ ಪ್ರಕರಣದಿಂದ ಧೃಡಪಟ್ಟಿದೆ.

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಬಹಿರಂಗ: ಹಲವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು
ಮಕ್ಕಳ ವಿಶ್ವಾಸಕ್ಕೆ ಪೆಟ್ಟು: ಹತ್ತನೇ ತರಗತಿ ಪರೀಕ್ಷೆ ಮತ್ತು ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯದ ದಿಕ್ಕನ್ನೇ ಬದಲಿಸುತ್ತದೆ. ಈಗ ಇಲ್ಲೂ ಅಕ್ರಮ ನಡೆಯುತ್ತಿರುವುದು ಮಕ್ಕಳು ಹಾಗೂ ಪೋಷಕರ ವಿಶ್ವಾಸಕ್ಕೆ ಧಕ್ಕೆ ತಂದಿದೆ. ಪ್ರಾಮಾಣಿಕ ಮಕ್ಕಳು ಕಷ್ಟ ಪಟ್ಟು ಓದಿ ಪರೀಕ್ಷೆ ಬರೆದರೆ, ಕೆಲವರು ಸ್ವಾರ್ಥಕ್ಕಾಗಿ ಅಕ್ರಮ ನಡೆಸುತ್ತಿರುವುದು ಇಡೀ ವ್ಯವಸ್ಥೆ ಕುಸಿದು ಬೀಳುವ ಅಪಾಯ ತಂದೊಡ್ಡಿದೆ. ಆದ್ದರಿಂದ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಅಕ್ರಮದ ತಳ ಶೋಧಿಸಿ, ತಪ್ಪಿತಸ್ಥರನ್ನು ಕಠಿಣವಾಗಿ ಶಿಕ್ಷಿಸುವ ಮೂಲಕ ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಬೇಕು ಎಂಬುದು ಸಾರ್ವಜನಿಕ ವಲಯದ ಆಗ್ರಹ.

ಸಿಐಡಿ ತನಿಖೆಯೇ ಏಕೆ ಬೇಕು?: ಸಿಐಡಿಗೆ ಯಾವುದೇ ಜಿಲ್ಲೆಯ ಗಡಿ ರೇಖೆ ಇರುವುದಿಲ್ಲ. ಮುಕ್ತವಾಗಿ ತನಿಖೆ ನಡೆಸಬಹುದು. ಆದರೆ, ಪೊಲೀಸರ ಮೇಲೆ ಸಾಕಷ್ಟು ಒತ್ತಡಗಳು ಬರಬಹುದು. ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಷ್ಟೇ ಗಂಭೀರವಾಗಿ ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಪರಿಗಣಿಸಬೇಕು ಎಂಬುದು ಜನರ ಆಗ್ರಹ.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ