ಆ್ಯಪ್ನಗರ

ಬಿಜೆಪಿಯವರು ನನಗೂ ಆಮಿಷವೊಡ್ಡಿದ್ದರು ಜೆಡಿಎಸ್ ಶಾಸಕ ಮಂಜುನಾಥ್ ಆರೋಪ

ರಾಜ್ಯದಲ್ಲಿ ಆಪರೇಷನ್ ಕಮಲ ಇನ್ನೂ ನಿಂತಿಲ್ಲ ಎಂದು ಮಾಗಡಿ ಕ್ಷೇತ್ರದ ಜೆಡಿಎಸ್ ಶಾಸಕ ಎ ಮಂಜುನಾಥ್ ಆರೋಪಿಸಿದ್ದಾರೆ.

Vijaya Karnataka Web 6 Sep 2019, 3:48 pm
ರಾಮನಗರ: ರಾಜ್ಯದಲ್ಲಿ ಆಪರೇಷನ್ ಕಮಲ ಇನ್ನೂ ನಿತ್ತಿಲ್ಲ. ಬಿಜೆಪಿಗೆ ಬರುವಂತೆ ನನಗೂ ಆಮಿಷವೊಡ್ಡಿದ್ದರು ಎಂದು ಮಾಗಡಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಶಾಸಕ ಎ ಮಂಜುನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.
Vijaya Karnataka Web jds


ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಮಾಜಿ ಶಾಸಕ ಸಿ ಪಿ ಯೋಗೇಶ್ವರ್, ಅಶ್ವಥ್ ನಾರಾಯಣ ಮತ್ತು ಅರವಿಂದ್ ಲಿಂಬಾವಳಿ ಸೇರಿದಂತೆ ಹಲವು ಬಿಜೆಪಿ ನಾಯಕರು ಪಕ್ಷಕ್ಕೆ ಬರುವಂತೆ ಆಮಿಷವೊಡ್ಡಿದ್ದರು ಎಂದು ಗಂಭೀರ ಆರೋಪ ಮಾಡಿದರು.

ಬಿಜೆಪಿ ಸೇರ್ಪಡೆಯಾದರೆ, ಸಚಿವರನ್ನಾಗಿ ಮಾಡುತ್ತೇವೆ. ಸಾಕಷ್ಟು ಹಣ ಕೊಡುತ್ತೇವೆಂದು ಹಲವು ಬಾರಿ ಆಮಿಷವೊಡಿದ್ದರು. ಆದರೆ, ನಾನು ಯಾವುದೇ ಆಮಿಷಕ್ಕೆ ಬಲಿಯಾಗಲಿಲ್ಲ ಎಂದವರು ಹೇಳಿದರು.

ನಾನು ಜೆಡಿಎಸ್ ಪಕ್ಷ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಶಾಸಕ ಎ ಮಂಜುನಾಥ್ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ