ಕೋಡಿಹಳ್ಳಿ(ಕನಕಪುರ ತಾ) : ತಾಲೂಕಿನ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ಬಿಲ್ಕಲೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ಹೃದಯಘಾತದಿಂದ ಸಾವಿಗೀಡಾಗಿದ್ದಾನೆ.
ದೊರೆಸ್ವಾಮಿ(50) ಮೃತರು. ಕಳೆದ 17 ವರ್ಷಗಳಿಂದಲೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ಬಿಲ್ಕಲೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಂಚಾಯಿತಿಯ ಕಾರ್ಯದರ್ಶಿ ಹುದ್ದೆಗೆ ಪರೀಕ್ಷೆಯನ್ನೂ ಬರೆದಿದ್ದ. ಇನ್ನೂ ಕೆಲವೇ ದಿನಗಳಲ್ಲಿ ಆತ ಕಾರ್ಯದರ್ಶಿಯಗಿ ನೇಮಕಗೊಳ್ಳುತ್ತಿದ್ದ ಸೋಮವಾರ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಘಾತದಿಂದ ಕುಸಿದು ಬಿದ್ದಿದ್ದಾನೆ. ಕೂಡಲೇ ಈತನನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದರಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಸಂತಾಪ: ಸಾರ್ವಜನಿಕ ಆಸ್ಪತ್ರೆಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಮ್ ಭೇಟಿ ನೀಡಿ ಮೃತ ಕುಟುಂಬಕ್ಕೆ ಸಂತ್ವಾನ ಹೇಳಿ ಸರಕಾರದಿಂದ ಬರುವ ಪರಿಹಾರವನ್ನು ಕೊಡಿಸಿ ಕೊಡುವ ಭರವಸೆ ನೀಡಿದ್ದಾರೆ.
ದೊರೆಸ್ವಾಮಿ(50) ಮೃತರು. ಕಳೆದ 17 ವರ್ಷಗಳಿಂದಲೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ಬಿಲ್ಕಲೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಂಚಾಯಿತಿಯ ಕಾರ್ಯದರ್ಶಿ ಹುದ್ದೆಗೆ ಪರೀಕ್ಷೆಯನ್ನೂ ಬರೆದಿದ್ದ. ಇನ್ನೂ ಕೆಲವೇ ದಿನಗಳಲ್ಲಿ ಆತ ಕಾರ್ಯದರ್ಶಿಯಗಿ ನೇಮಕಗೊಳ್ಳುತ್ತಿದ್ದ ಸೋಮವಾರ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಘಾತದಿಂದ ಕುಸಿದು ಬಿದ್ದಿದ್ದಾನೆ. ಕೂಡಲೇ ಈತನನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದರಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಸಂತಾಪ: ಸಾರ್ವಜನಿಕ ಆಸ್ಪತ್ರೆಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಮ್ ಭೇಟಿ ನೀಡಿ ಮೃತ ಕುಟುಂಬಕ್ಕೆ ಸಂತ್ವಾನ ಹೇಳಿ ಸರಕಾರದಿಂದ ಬರುವ ಪರಿಹಾರವನ್ನು ಕೊಡಿಸಿ ಕೊಡುವ ಭರವಸೆ ನೀಡಿದ್ದಾರೆ.