ಆ್ಯಪ್ನಗರ

ಜಿಲ್ಲಾ ಬಿಜೆಪಿಯಿಂದ ಸಚಿವರ ರಾಜೀನಾಮೆಗೆ ಪಟ್ಟು

ಇಂಧನದ ಮೇಲಿನ ತೆರಿಗೆ ಹೆಚ್ಚಳ ಮಾಡಿದ ರಾಜ್ಯ ಸರಕಾರದ ವಿರುದ್ಧ ಮತ್ತು ಸಚಿವ ಪುಟ್ಟರಂಗ ಶೆಟ್ಟಿ ಅವರು ಆಪ್ತನ ಬಳಿ ಹಣತುಂಬಿದ್ದ ಬ್ಯಾಗ್‌ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ಘಟಕ ಪ್ರತಿಭಟನೆ ನಡೆಸಿತು.

Vijaya Karnataka 8 Jan 2019, 5:00 am
ರಾಮನಗರ: ಇಂಧನದ ಮೇಲಿನ ತೆರಿಗೆ ಹೆಚ್ಚಳ ಮಾಡಿದ ರಾಜ್ಯ ಸರಕಾರದ ವಿರುದ್ಧ ಮತ್ತು ಸಚಿವ ಪುಟ್ಟರಂಗ ಶೆಟ್ಟಿ ಅವರು ಆಪ್ತನ ಬಳಿ ಹಣತುಂಬಿದ್ದ ಬ್ಯಾಗ್‌ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ಘಟಕ ಪ್ರತಿಭಟನೆ ನಡೆಸಿತು.
Vijaya Karnataka Web the district has resigned from the bjps resignation
ಜಿಲ್ಲಾ ಬಿಜೆಪಿಯಿಂದ ಸಚಿವರ ರಾಜೀನಾಮೆಗೆ ಪಟ್ಟು


ನಗರದ ಐಜೂರು ವೃತ್ತದಲ್ಲಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಜ್ಯ ಸಮ್ಮಿಶ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇಂಧನ ತೆರಿಗೆ ಇಳಿಸಿ: ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಎಂ.ರುದ್ರೇಶ್‌, ''ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಅನಿವಾರ್ಯವಾಗಿ ಪೆಟ್ರೋಲ್‌ ಮತ್ತು ಡೀಸಲ್‌ ಬೆಲೆಯನ್ನು ಹೆಚ್ಚಳ ಮಾಡಿತ್ತು. ಇದರ ಬಗ್ಗೆ ಅರಿವಿದ್ದರೂ ಕಾಂಗ್ರೆಸ್‌ಅಧ್ಯಕ್ಷ ರಾಹುಲ್‌ಗಾಂಧಿ ಸೇರಿದಂತೆ ರಾಜ್ಯ ಸರಕಾರ ಇದನ್ನು ವ್ಯಾಪಕವಾಗಿ ಟೀಕಿಸಿತ್ತು. ಆದರೆ ಈಗ ಇಂಧನ ಬೆಲೆ ಕಡಿಮೆ ಇದ್ದರೂ, ರಾಜ್ಯ ಸರಕಾರ ಏಕಾಏಕಿ 2 ರೂ. ತೆರಿಗೆಯನ್ನು ಹೆಚ್ಚಳ ಮಾಡುವ ಮೂಲಕ ರಾಜ್ಯದ ಜನತೆ ಮೇಲೆ ಬರೆ ಎಳೆಯಲು ಮುಂದಾಗಿದೆ. ಆದರೆ, ಈ ಬಗ್ಗೆ ಮತನಾಡಬೇಕಾದ ಕಾಂಗ್ರೆಸ್‌ಅಧ್ಯಕ್ಷ ರಾಹುಲ್‌ಗಾಂಧಿ ಮೌನವಾಗಿರುವುದು ಏಕೆ,'' ಎಂದು ಪ್ರಶ್ನಿಸಿದರು.

''ರಾಜ್ಯ ಸರಕಾರ ಕೂಡಲೇ ತೈಲದ ಮೇಲೆ ಏರಿರುವ ತೆರಿಗೆಯನ್ನು ಸಂಪೂರ್ಣ ಹಿಂದಕ್ಕೆ ಪಡೆದುಕೊಳ್ಳಬೇಕು. ಈ ಮೂಲಕ ರಾಜ್ಯದ ಜನರು ನೆಮ್ಮದಿಯಾಗಿ ಜೀವನ ಮಾಡುವಂತೆ ಮಾಡಬೇಕು,'' ಎಂದು ಆಗ್ರಹಿಸಿದರು.

ಉನ್ನತ ಮಟ್ಟದ ತನಿಖೆಯಾಗಲಿ: ಮತ್ತೊಂದೆಡೆ ರಾಜ್ಯದಲ್ಲಿರುವ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದೆ ಎನ್ನುವುದು ದಾಖಲೆ ಸಹಿತ ಬಹಿರಂಗವಾಗಿದೆ. ವಿಧಾನ ಸೌಧದಲ್ಲಿ ಸಚಿವ ಪುಟ್ಟರಂಗ ಶೆಟ್ಟಿ ಅವರ ಆಪ್ತನ ಬಳಿ 25 ಲಕ್ಷ ಕ್ಕೂ ಹೆಚ್ಚು ಹಣವಿರುವ ಬ್ಯಾಗ್‌ ಪತ್ತೆಯಾಗಿದೆ. ಇದು ಸಚಿವರು ಹಣ ಮಾಡುವುದರಲ್ಲಿ ನಿರತರಾಗಿವುದಕ್ಕೆ ಸಾಕ್ಷಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಸಚಿವರ ರಾಜೀನಾಮೆಯನ್ನು ಪಡೆದುಕೊಳ್ಳಬೇಕು. ಮತ್ತು ಪ್ರಕರಣದ ತನಿಖೆಯನ್ನು ಉನ್ನತ ಮಟ್ಟದ ತನಿಖಾ ಸಂಸ್ಥೆಯಿಂದ ನಡೆಸಬೇಕು ಎಂದು ಆಗ್ರಹಿಸಿದರು.

ಇಡೀ ಘಟನೆಯನ್ನು ಸಣ್ಣದು ಎಂದು ಬಿಂಬಿಸುವ ಮತ್ತು ಇದರ ಬಗ್ಗೆ ಪ್ರಶ್ನೆ ಮಾಡುವವರ ಬಗ್ಗೆ ಹಗರುವಾಗಿ ಮಾತನಾಡುವ ಮೂಲಕ ಜವಾಬ್ದಾರಿಯುತ ಸ್ಥಾನದಲ್ಲಿರುವ ಪುಟ್ಟರಂಗಶೆಟ್ಟಿ ಮತ್ತು ದಿನೇಶ್‌ಗುಂಡೂರಾವ್‌ಅಗೌರಯುತವಾಗಿ ನಡೆದುಕೊಳ್ಳುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಒಂದು ವೇಳೆ ವಿಧಾನಸೌಧದಲ್ಲಿ ಹಣವಿದ್ದ ಬ್ಯಾಗ್‌ ಪತ್ತೆಯಾದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸದಿದ್ದರೆ ಹಾಗೂ ಇಂಧನ ಮೇಲಿನ ತೆರಿಗೆಯನ್ನು ಕೂಡಲೇ ಹಿಂದಕ್ಕೆ ಪಡೆಯದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧ್ಯಕ್ಷ ರು ಎಚ್ಚರಿಕೆ ನೀಡಿದರು.

ಈ ವೇಳೆ ಮುಖಂಡರಾಎಸ್‌.ಆರ್‌.ನಾಗರಾಜ್‌, ಪದ್ಮನಾಭ್‌, ಚಂದ್ರಶೇಖರ್‌ರೆಡ್ಡಿ, ಸದಾನಂದ್‌, ಚನ್ನಪ್ಪ, ರಮೇಶ್‌ ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ