ಆ್ಯಪ್ನಗರ

ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆಗೆ ತಡೆ

ರೈತರು ಕೃಷಿಯಲ್ಲಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವ ಮೂಲಕ ಲಾಭದಾಯಕ ಕೃಷಿ ಪದ್ಧತಿ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ.ಮುಲ್ಲೈ ಮುಹೀಲನ್‌ ಹೇಳಿದರು.

Vijaya Karnataka 5 Jul 2018, 3:03 pm
ರಾಮನಗರ: ರೈತರು ಕೃಷಿಯಲ್ಲಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವ ಮೂಲಕ ಲಾಭದಾಯಕ ಕೃಷಿ ಪದ್ಧತಿ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ.ಮುಲ್ಲೈ ಮುಹೀಲನ್‌ ಹೇಳಿದರು.
Vijaya Karnataka Web the use of chemical fertilizer sterilization
ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆಗೆ ತಡೆ


ಜಿಪಂ, ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಕೃಷಿ ವಿವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತೋಟಗಾರಿಕೆ, ಪಶುಸಂಗೋಪನೆ, ಅರಣ್ಯ, ರೇಷ್ಮೆ, ಮೀನುಗಾರಿಕೆ, ಶಿಕ್ಷ ಣ, ಆರೋಗ್ಯ ಇಲಾಖೆ, ಸಹಕಾರ ಇಲಾಖೆ ಹಾಗೂ ಲೀಡ್‌ ಬ್ಯಾಂಕ್‌ ಸಹಯೋಗದಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದಡಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ರಥ ಸಂಚಾರ ಕಾರ್ಯಕ್ರಮಕ್ಕೆ ಕೂಟಗಲ್‌ ಗ್ರಾಮದಲ್ಲಿ ಚಾಲನೆ ನೀಡಿ ಮಾತನಾಡಿದರು.

ಬದು ನಿರ್ಮಾಣಕ್ಕೆ ನರೇಗಾ: ''ಅನಗತ್ಯ ಬೀಜ ಬಿತ್ತನೆ, ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆಗೆ ಕಡಿವಾಣ ಹಾಕಬೇಕು. ಕೊಟ್ಟಿಗೆ ಗೊಬ್ಬರ, ಮತ್ತು ಬೀಜ ಸಂರಕ್ಷ ಣೆ ಮಾಡುವ ಕಲೆಯನ್ನು ರೂಢಿಸಿಕೊಳ್ಳಬೇಕು. ಪ್ರತಿಯೊಬ್ಬ ರೈತರು ಜಮೀನಿನಲ್ಲಿ ಮಳೆ ನೀರು ಕೊಯ್ಲು ಮಾಡಬೇಕು. ಜಮೀನಿನಲ್ಲಿ ಬಿದ್ದ ಪ್ರತಿ ಮಳೆ ಹನಿ ಜಮೀನಿನಲ್ಲಿಯೆ ಇಂಗಬೇಕು. ಮಳೆ ನೀರು ಜಮೀನಿನಿಂದ ಹೊರ ಹೋಗುವುದನ್ನು ತಡಯುವ ದೃಷ್ಟಿಯಿಂದ ಬದುಗಳನ್ನು ಹಾಕಿಕೊಳ್ಳಬೇಕು. ಬದು ನಿರ್ಮಾಣಕ್ಕೆ ನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು,'' ಎಂದರು.

ಮುಂದುವರಿದ ತಂತ್ರಜ್ಞಾನ: ''ನಮ್ಮ ಹಿರಿಯರು ಸಂಪ್ರದಾಯಿಕ ಕೃಷಿ ಪದ್ಧತಿಯನ್ನು ಹೆಚ್ಚಾಗಿ ಅವಲಂಬಿಸಿದ್ದರು. ಆದರೆ ಈಗ ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ರೈತರು ತಮ್ಮ ಜಮೀನಿನಲ್ಲಿನ ಮಣ್ಣು ಪರೀಕ್ಷೆ ಮಾಡಿಸಬೇಕು. ಜಮೀನಿನಲ್ಲಿ ಎಂತಹ ಮಣ್ಣಿಗೆ ಯಾವ ಬೆಳೆಯಬಹುದು. ಪೋಷಕಾಂಶದ ಕೊರತೆ ಮುಂತಾದ ಮಾಹಿತಿಯನ್ನು ಕೃಷಿ ಇಲಾಖೆ ಅಧಿಕಾರಿಗಳ ಬಳಿ ಪಡೆದು ಬಿತ್ತನೆ ಕಾರ್ಯ ನಡೆಸಬೇಕು,''ಎಂದು ಸಲಹೆ ನೀಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೀಪಜಾ ಮಾತನಾಡಿ,''ಒಣ ಭೂಮಿಯಲ್ಲಿ ಕೃಷಿ ಮಾಡುವ ರೈತರ ಅನುಕೂಲಕ್ಕಾಗಿ ಕೃಷಿ ಭಾಗ್ಯ ಯೋಜನೆ ಜಾರಿಯಲ್ಲಿದೆ. ರೈತರು ಇದರ ಸದುಪಯೋಪಡಿಸಿಕೊಳ್ಳಬೇಕು. ಬಿತ್ತನೆ ನಡೆಸಿದ ನಂತರ ಮಳೆ ಕೈ ಕೊಟ್ಟರೆ ತಾತ್ಕಾಲಿಕವಾಗಿ ಬೆಳೆ ರಕ್ಷ ಣೆಗೆ ಕೃಷಿ ಹೊಂಡಗಳು ಸಹಕಾರಿಯಾಗಲಿವೆ,'' ಎಂದರು.

ಜಾಗೃತಿ ಕಾರ್ಯಕ್ರಮ: ವಿವಿಧ ಇಲಾಖೆಗಳಿಂದ ರೈತರಿಗೆ ದೊರಕುವ ಸೌಲಭ್ಯಗಳ ಬಗ್ಗೆ ಅಧಿಕಾರಿಗಳು ರೈತರಿಗೆ ಮಾಹಿತಿ ನೀಡಿದರು. ಜಾಗೃತಿಗಾಗಿ ಕರಪತ್ರಗಳನ್ನು ವಿತರಿಸಲಾಯಿತು. ವಸ್ತು ಪ್ರದರ್ಶನ ಸಹ ಏರ್ಪಡಿಸಲಾಗಿತ್ತು. ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜೆ.ಗುಣವಂತ್‌, ರೇಷ್ಮೆ ಇಲಾಖೆ ಉಪನಿರ್ದೇಶಕ ಮಹೇಂದ್ರಕರ್‌, ಪಶು ಸಂಗೋಪನಾ ಇಲಾಖೆಯ ವರದರಾಜು, ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ದೇವರಾಜ್‌, ಕೂಟಗಲ್‌ ಗ್ರಾಪಂ ಅಧ್ಯಕ್ಷೆ ಭಾಗ್ಯಲಕ್ಷ್ಮಿ ಹಾಗೂ ನಾನಾ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹವಾಮಾನ ವೈಪರಿತ್ಯ ಮತ್ತಿತರ ಕಾರಣಗಳಿಂದ ಬೆಳೆ ನಷ್ಟವಾದಾಗ ಪರಿಹಾರ ಪಡೆಯಲು ಪ್ರತಿಯೊಬ್ಬ ರೈತರು ಬೆಳೆ ವಿಮೆ ಮಾಡಿಸಬೇಕು. ಬೆಳೆ ಸಂರಕ್ಷ ಣೆ, ಕೀಟಗಳ ನಿರ್ವಹಣೆ, ಸರಿಯಾದ ಸಂದರ್ಭದಲ್ಲಿ ಬೆಳೆಗಳಿಗೆ ಗೊಬ್ಬರ ನೀಡುವ ಮೂಲಕ ಹೆಚ್ಚು ಇಳುವರಿ ಪಡೆಯುವತ್ತ ರೈತರು ಗಮನಹರಿಸಬೇಕು
-ದೀಪಜಾ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ