ಆ್ಯಪ್ನಗರ

ಕೊಲೆ ಪ್ರಕರಣದ ಆರೋಪಿ ವಿಷ ಸೇವಿಸಿ ಆತ್ಮಹತ್ಯೆ

ಗುರುವಾರ ನಡೆದಿದ್ದ ಹೂಕುಂದ ಗ್ರಾಮದ ಶಿಲ್ಪ (30)ಳ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಗುಂಡ (30) ಶನಿವಾರ ಸಂಜೆ ದೊಡ್ಡಾಲಹಳ್ಳಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

Vijaya Karnataka 16 Dec 2018, 5:00 am
ಹಾರೋಹಳ್ಳಿ (ಕನಕಪುರ ತಾ.): ಗುರುವಾರ ನಡೆದಿದ್ದ ಹೂಕುಂದ ಗ್ರಾಮದ ಶಿಲ್ಪ (30)ಳ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಗುಂಡ (30) ಶನಿವಾರ ಸಂಜೆ ದೊಡ್ಡಾಲಹಳ್ಳಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
Vijaya Karnataka Web the victim of the murder case consumed poison and committed suicide
ಕೊಲೆ ಪ್ರಕರಣದ ಆರೋಪಿ ವಿಷ ಸೇವಿಸಿ ಆತ್ಮಹತ್ಯೆ


ಹೂಕುಂದ ಗ್ರಾಮದ ಶಿಲ್ಪಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಗುಂಡ ಈ ವಿಚಾರವನ್ನು ಶಿಲ್ಪ ಬಹಿರಂಗ ಪಡಿಸುವ ಬೆದರಿಕೆ ಹಾಕಿದ್ದರಿಂದ ವಿಷ ಉಣಿಸಿ ಕೊಲೆ ಮಾಡಿದ್ದನೆಂದು ಆರೋಪಿಸಲಾಗಿತ್ತುಈ ಕುರಿತು ಕೋಡಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.

ದೊಡ್ಡಾಲಹಳ್ಳಿ ಗ್ರಾಮದಲ್ಲಿ ಮದ್ಯಪಾನ ಮಾಡಿ ಜೊತೆಗೆ ವಿಷವನ್ನೂ ಸೇವಿಸಿ ಬಿದ್ದು ಸಾವನ್ನಪ್ಪಿರುವುದನ್ನು ಕಂಡ ಗ್ರಾಮಸ್ಥರು ಈತನನ್ನು ಆ್ಯಂಬುಲೆನ್ಸ್‌ ಮೂಲಕ ಕನಕಪುರ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದರು.

ಕೋಡಿಹಳ್ಳಿ ಸಬ್‌ಇನ್ಸ್‌ಪೆಕ್ಟರ್‌ ಕೃಷ್ಣಕುಮಾರ್‌ ಭೇಟಿನೀಡಿ ಪರಿಶೀಲಿಸಿದ್ದು ಸಂಬಂಧಿಕರು ನೀಡುವ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ